ಸಂಗೀತ
ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
October 7, 2008 - 9:33pm — hamsanandiನಾನು ಚಿಕ್ಕವನಿದ್ದಾಗ ನಮ್ಮೂರಲ್ಲಿ ನಮ್ಮನೇ ಹತ್ರ ಒಂದು ಮಂಟಪ ಇತ್ತು. ಅದನ್ನ ಕಟ್ಟಿಸಿದವರ್ಯಾರು ಅಂತ ಗೊತ್ತಿಲ್ಲ. ಅಂತೂ ದೇವ್ಸ್ಥಾನದ ಅಕ್ಕ ಪಕ್ಕ ಕೆಲವ್ಕಡೆ ಇರತ್ತಲ್ಲ ಆ ತರಹ ಮೂರು ಗೋಪುರದ ಮಂಟಪ. ಅಲ್ಯಾವ್ದೂ ದೇವಸ್ಥಾನ ಇಲ್ದಿದ್ರೂ,ಅಲ್ಲಿ ಆ ಮಂಟಪ ಯಾಕೆ ಕಟ್ಟಿದ್ರೋ? ಅಥವಾ ಮನೆ ಮಠ ಇಲ್ಲದೇ ಇರೋವ್ರಿಗೇ ಅಂತಲೇ ಯಾರಾದ್ರೂ ಪುಣ್ಯಾತ್ಮರು ಕಟ್ಟಿಸಿದ್ರೋ ಗೊತ್ತಿಲ್ಲ - ಅಂತೂ ಅಲ್ಲಿ ಪಾಪ ಭಿಕ್ಷೆ ಬೇಡಿ ಹೊಟ್ಟೆ ಹೊರೆದುಕೊಳ್ಳೋ ಎಷ್ಟೋ ಸಂಸಾರಗಳು ನೆಲೆ ನಿಂತಿದ್ರು.ಅವರಿಗೆ ವರ್ಷಕ್ಕೆ ಮುನ್ನೂರಅರವತ್ತೆರಡು ದಿನ ಆ ಮಂಟಪವೇ ಮನೆ. ಒಂದುವೇಳೆ ಮನೆಯಲ್ಲಿ ಏನೋ ಸಮಾರಂಭವೋ ಏನೋ ಆದಾಗ ಊಟ ತಿಂಡಿ ಮಿಕ್ಕರೆ ಅಲ್ಲಿಗೆ ಹೋಗಿ ಕರೆದು, ಮತ್ತೆ ಮಾಡಿದ ಅಡುಗೆಗೆ ಆಗೋ ದಂಡವನ್ನ ತಪ್ಪಿಸ್ತಿದ್ವಿ. ಒಂದೊಂದ್ಸಲ ಕಲಾಯ ಮಾಡೋ ಮನುಷ್ಯ ಬಂದರೂ ಅಲ್ಲೇ ಮಂಟಪದ ಪಕ್ಕದಲ್ಲೇ ಅವನ ಅಗ್ಗಿಷ್ಟಿಕೆ ಹೂಡ್ಕೋತಿದ್ದ. ಸುತ್ತ ಮುತ್ತಲಿನ ಮನೆಯವರೆಲ್ಲ ಅವರ ಕೊಡವೋ, ಕೊಳದಪ್ಪಲೆಯೋ, ಯಾವುದಕ್ಕಾದ್ರೂ ಕಲಾಯ ಮಾಡಿಸ್ಬೇಕಾಗಿದ್ರೆ ಅಲ್ಲಿಗೇ ತರ್ತಿದ್ರು. ಹಾಗೇನಾದ್ರೂ ಕೊಟ್ಟಾಗ, ನಾನೂ ಕಲಾಯದ ಮನುಷ್ಯ ತವರ ಕಾಸೋದು, ತಿದಿ ಒತ್ತೋದು ಇದೆಲ್ಲ ನೋಡ್ತಾ ಕೂತಿರ್ತಿದ್ದೆ. ಒಂದೊಂದು ಸಲ ಸಂಜೆ ಹೋಗಿ ಆ ಮಂಟಪದ ಹಿಂದಿನ ಬಯಲಲ್ಲಿ ಗೆಳೆಯರ ಜೊತೆ ಆಡ್ತಿದ್ದಿದ್ದೂ ಉಂಟು. ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಚೌತಿ
October 2, 2008 - 10:07pm — hamsanandiಲಲಿತಾ! ಆ ಪದವೇ ಒಂದು ಇನಿದಾದ ಹೆಸರು!
ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!!
..
..
..
..
..
(ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!)
ದೇವಿಯ ಬೇರೆ ಹೆಸರುಗಳಾದ ಪಾರ್ವತಿ,ಶೈಲಜಾ,ಶಂಕರಿ,ಕಾಳಿ, ದುರ್ಗಾ,ಗೌರಿ ಮೀನಾಕ್ಷಿ,ವಿಶಾಲಾಕ್ಷಿ ಇಂತಹವೆಲ್ಲ ಒಂದೋ ದೇವಿಯು ಪರ್ವತರಾಜನ ಮಗಳು, ಶಿವನ ಹೆಂಡತಿ ಎನ್ನುವುದನ್ನೋ, ಅಥವಾ ಅವಳ ಬಣ್ಣವನ್ನೋ, ಕಣ್ಣನ್ನೋ ವರ್ಣಿಸುತ್ತವೆ. ಆದರೆ ಅವಳ ಎಲ್ಲ ಗುಣಗಳನ್ನೂ ಒಟ್ಟುಸೇರಿಸುವಂತಹ ಒಂದು ಹೆಸರಿದ್ದರೆ, ಅದು ಲಲಿತಾ ಎಂಬ ಹೆಸರೇ ಆಗಿರಬೇಕು. ಮುಂದೆ ಓದಿ »

ಏನೀ ಮಹಾನಂದವೇ? ಓ ಭಾಮಿನಿ!
September 26, 2008 - 5:24am — hamsanandiಕೆಲವು ದಿನಗಳ ಹಿಂದೆ 'ಭಾಮೆಯ ನೋಡಲು ತಾ ಬಂದ' ಅನ್ನೋ ಬರಹದಲ್ಲಿ ಹಿಂದೋಳ ರಾಗದ ಬಗ್ಗೆ ಸ್ವಲ್ಪ ಹೇಳಿದ್ದೆ. ಇವತ್ತು ಇನ್ನೊಂದು ಸ್ವಲ್ಪ ಮುಂದುವರೆಸೋಣವೇ?
ಹಿಂದೋಳದಲ್ಲಿ ಬೇಕಾದಷ್ಟು ಚಿತ್ರಗೀತೆಗಳಿವೆ ಅಂತ ಹೇಳಿದ್ದೆ. ಕಳೆದ ಬರಹಗಳಲ್ಲಿ ಇಲ್ಲದೇ ಇರೋ ಕೆಲವು ಒಳ್ಳೇ ಉದಾಹರಣೆಗಳು ಅಂದರೆ, ರಾಜ್ಕುಮಾರ್ ಮತ್ತೆ ವಾಣಿ ಜಯರಾಂ ಅವರು ಹಾಡಿರೋ ಶ್ರಾವಣ ಬಂತು ಚಿತ್ರದ ಬಾನಿನ ಅಂಚಿಂದ ಬಂದೆ ಅನ್ನೋ ಹಾಡು; ಹಾಗೇನೇ ಮಲಯಮಾರುತ ಚಿತ್ರದಲ್ಲಿ ಏಸುದಾಸ್ ಅವರು ಹಾಡಿರೋ ನಟನವಿಶಾರದ ನಟಶೇಖರ ಅನ್ನೋ ಗೀತೆ; ಮತ್ತೆ ರವಿಚಂದ್ರನ್ ಅವರು ನಟಿಸಿರೋ ಒಂದು ಚಿತ್ರ (ಹೆಸರು ಮರೆತಿದ್ದೇನೆ)ದಲ್ಲಿನ ನೀನು ನೀನೇ ಅಲ್ಲಿ ನಾನು ನಾನೇ ಅನ್ನೋ ಹಾಡು - ಇಂತಹವುಗಳನ್ನ ನೆನೆಯಬಹುದು.
ನಾನು ಮೊದಲೇ ಹೇಳಿದಂತೆ, ಹಿಂದೋಳ ರಾಗದಲ್ಲಿ ಬರುವುದು ಐದು ಸ್ವರಗಳು ಮಾತ್ರ. ಷಡ್ಜ, ಸಾಧಾರಣ ಗಾಂಧಾರ, ಶುದ್ಧ ಮಧ್ಯಮ, ಶುದ್ಧ ಧೈವತ ಮತ್ತು ಕೈಶಿಕಿ ನಿಷಾದ. ಇದನ್ನು ಕರ್ನಾಟಕ ಸಂಗೀತ ಲಿಪಿಯಲ್ಲಿ ಹೀಗೆ ಸೂಚಿಸುವುದು ರೂಢಿ. ಮುಂದೆ ಓದಿ »

ಧರ್ಮವೆ ಜಯವೆಂಬ ದಿವ್ಯ ಮಂತ್ರ
September 24, 2008 - 6:01am — hamsanandi
ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ
ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ ಮಾಡುವವನ ಹೆಸರ ಮಗನಿಗಿಡಬೇಕು !





RSS: