ಅನುವಾದ
ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
October 6, 2008 - 10:34am — hamsanandiಇವತ್ತು ನವರಾತ್ರಿಯ ಏಳನೇ ದಿನ. ಮತ್ತೆ ಇವತ್ತೇ ಹೆಚ್ಚು ಜನರ ಮನೆಯಲ್ಲಿ ಸರಸ್ವತೀ ಪೂಜೆ ಕೂಡ. ಕೆಲವರು ಮಹಾನವಮಿಯ ಆಯುಧಪೂಜೆಯ ದಿನ ಸರಸ್ವತೀ ಪೂಜೆ ಮಾಡುವುದೂ ಉಂಟು.ಸರಸ್ವತಿ ಎಂದರೆ ನನಗೆ ನೆನಪಾಗುವುದು ಶೃಂಗೇರಿಯ ಶಾರದೆ. ಅದೆಂತಹ ಪ್ರಶಾಂತ ಸ್ಥಳ? ಅಲ್ಲಿ ದಸರೆಯ ಸಮಯದಲ್ಲಿ ನಡೆಯುವುವ ಪೂಜೆಗಳೂ ಹೆಚ್ಚಾಯದ್ದೇ. ಮಳಗಾಲ ಮುಗಿಯುತ್ತ ಬಂದಿರುವುದರಿಂದ ತಿಳಿಯಾಗಿ ಹರಿಯುವ ತುಂಗೆ. ಅದಕ್ಕೇ ಇರಬೇಕು ಶೃಂಗೇರಿಯ ಶಾರದೆಯ ಮೇಲಿರುವ ಸಂಗೀತ ರಚನೆಗಳಿಗೂ ಕೊರತೆ ಇಲ್ಲ.
ಕೆಲವು ಪ್ರಸಿದ್ಧ ಸರಸ್ವತೀ ಸ್ತುತಿಗಳನ್ನು ಕನ್ನಡಕ್ಕೆ(ಭಾವಾನುವಾದದಲ್ಲಿ) ತಂದಿರುವೆ. ಓದಿ, ನಂತರ ಹಾಡು ಕೇಳಬಹುದು. ಅಲ್ಲವೇ?
ಸರಸತಿಯೆ ತಲೆಬಾಗುವೆನು ಮನದಾಸೆಗಳನೀವಳೆ
ಅರಿವಿನಾಸೆಯೆನಗಿರಲು ಹರಸು ಕೈಗೂಡುತಿರಲೆಂದು ಮುಂದೆ ಓದಿ »

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಚೌತಿ
October 2, 2008 - 10:07pm — hamsanandiಲಲಿತಾ! ಆ ಪದವೇ ಒಂದು ಇನಿದಾದ ಹೆಸರು!
ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!!
..
..
..
..
..
(ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!)
ದೇವಿಯ ಬೇರೆ ಹೆಸರುಗಳಾದ ಪಾರ್ವತಿ,ಶೈಲಜಾ,ಶಂಕರಿ,ಕಾಳಿ, ದುರ್ಗಾ,ಗೌರಿ ಮೀನಾಕ್ಷಿ,ವಿಶಾಲಾಕ್ಷಿ ಇಂತಹವೆಲ್ಲ ಒಂದೋ ದೇವಿಯು ಪರ್ವತರಾಜನ ಮಗಳು, ಶಿವನ ಹೆಂಡತಿ ಎನ್ನುವುದನ್ನೋ, ಅಥವಾ ಅವಳ ಬಣ್ಣವನ್ನೋ, ಕಣ್ಣನ್ನೋ ವರ್ಣಿಸುತ್ತವೆ. ಆದರೆ ಅವಳ ಎಲ್ಲ ಗುಣಗಳನ್ನೂ ಒಟ್ಟುಸೇರಿಸುವಂತಹ ಒಂದು ಹೆಸರಿದ್ದರೆ, ಅದು ಲಲಿತಾ ಎಂಬ ಹೆಸರೇ ಆಗಿರಬೇಕು. ಮುಂದೆ ಓದಿ »

ಹಲ್ಲು ಕಿತ್ತ ಹಾವು
September 24, 2008 - 10:22pm — hamsanandi
ನಂಜಿರುವ ಹಾವಿನಲಿ
ತಾಳ್ಮೆ ಮನ್ನಿಪೆಂಬುದು
ಅಗ್ಗಳವು ಅದಕೆ ನೀ
ಕಟ್ಟಲಾಗದು ಬೆಲೆಯ!
ಹಲ್ಲಳಿದು ವಿಷವುಡುಗಿ
ಪಳಗಿಸಿದ ಹಾವಿಗಿಹ
ತಾಳುಮೆ ಔದಾರಿಯಕೆ
ಇಹುದೇನು ಬೆಲೆಯು?

ಧರ್ಮವೆ ಜಯವೆಂಬ ದಿವ್ಯ ಮಂತ್ರ
September 24, 2008 - 6:01am — hamsanandi
ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ
ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ ಮಾಡುವವನ ಹೆಸರ ಮಗನಿಗಿಡಬೇಕು !

ಕಾಯಲೆಮ್ಮೆಲ್ಲರನು ಮೂರುಲೋಕದ ಅರಸು
September 23, 2008 - 10:05pm — hamsanandi(ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಕೇಳಿ, ಒಂದು ಸಾವಿರ ವರ್ಷಗಳ ಹಿಂದೆ, ಈ ಪದ್ಯವನ್ನು ಕಲ್ಲಿನಲಿ ಕೆತ್ತಿಸಿದ ನಮ್ಮೂರ ಅರಸರನ್ನು ನೆನೆಯದೇ ಇರಲಾಗಲಿಲ್ಲ - ಹಂಸಾನಂದಿ) ಮುಂದೆ ಓದಿ »





RSS: