ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೪)

January 9, 2006 - 11:43pm — pvravi

*****ಭಾಗ ೪

ನಾನು ವಾತಾಪಿನಗರವನ್ನು ಸೇರಿದಾಗ ಸಂಜೆಯಾಗಿತ್ತು. ಊರಿನಾಚೆ ಸ್ವಲ್ಪ ದೂರದಲ್ಲಿ ಒಂದು ಸ್ಥಳದಲ್ಲಿ ನಿಂತು, ಕುದುರೆಗೆ ನೀರು, ಹುರುಳಿ ಕೊಟ್ಟೆ. ನಾನೂ ಬೆಳಗಿನಿಂದ ಏನೂ ತಿಂದಿರಲಿಲ್ಲ, ಹೊಟ್ಟೆ ಹಸಿದಿತ್ತು ಆದರೆ ತಿನ್ನಲೇನು ಸಿಕ್ಕಲಿಲ್ಲ. ಇನ್ನೂ ಪೂರ್ಣ ಕತ್ತಲೆಯಾಗಿರಲಿಲ್ಲ. ನಾನು ಗುಪ್ತ ಸಂದರ್ಶನ ಸ್ಥಳಕ್ಕೆ ಹೋಗಲು ಸ್ವಲ್ಪ ಸಮಯವಿತ್ತು. ಮನೆಗೆ ಹೋಗೋಣವೋ ಬೇಡವೋ ಎಂದು ಸುಮಾರು ಹೊತ್ತು ಯೋಚನೆ ಮಾಡಿದೆ. ನಾನು ಎಲ್ಲರ ಪಾಲಿಗೆ ಸತ್ತು ಹೋಗಿದ್ದೆ. ನಾನು ಕಳುಹಿಸಿದ ಓಲೆ ಮನೆ ಸೇರಿತ್ತೋ ಇಲ್ಲವೋ ಒಂದೂ ತಿಳಿಯದು. ಇನ್ನೂ ಸ್ವಲ್ಪ ಕತ್ತಲಾಗುವವರೆಗೆ ಕಾಯ್ದು ಮನೆ ಕಡೆ ಕುದುರೆ ತಿರುಗಿಸಿದೆ. ಸ್ವಲ್ಪ ದೂರದಲ್ಲೇ ಕುದುರೆಯನ್ನು ಕಟ್ಟಿ ಹಾಕಿ ಮನೆಯವರೆಗೆ ನಡೆದೇ ಹೋದೆ. ಮನೆಯಲ್ಲಿ ಯಾರಿರುವರು ಏನೂ ತಿಳಿಯದು. ಯಾರಿಗಾದರೂ ಕಾಣಿಸಿದರೆ? ನಾನು ಮಹಾರಾಜನ ಬೇಟೆ ತಪ್ಪಿಸಿದಾಗ ನನಗೆ ಗಡ್ಡ ಮೀಸೆಗಳಿರಲಿಲ್ಲ. ಈಗ ಪೂರ್ಣ ಗಡ್ಡ ಮೀಸೆಗಳಿದ್ದವು. ತಲೆಯ ಮೇಲಿದ್ದ ಜಟೆ ಈಗ ಹೋಗಿ ತಲೆ ತುಂಬ ಕೂದಲಿತ್ತು. ಎಂದೂ ತಲೆಗೆ ಪೇಟ ಧರಿಸದವ ಈಗ ಪೇಟ ಧರಿಸಿದ್ದೆ. ಯಾರೂ ನನ್ನನ್ನು ಗುರುತು ಹಿಡಿಯುವಂತೆ ಇರಲಿಲ್ಲ. ಆದರೂ ಮನೆಯೊಳಗೆ ಹೋಗಲು ಹೆದರಿ ಮರೆಯಲ್ಲೇ ಕಾಯ್ದು ನಿಂತೆ.

ಸ್ವಲ್ಪ ಹೊತ್ತಿನಲ್ಲಿ ಮನೆಯ ಕದ ತೆರೆದು ಅಮ್ಮ ಆಚೆ ಬಂದರು. ನಾನು ಮರೆಯಿಂದ ಇಳಿದು ಅಮ್ಮನ ಕಡೆ ನಡೆದೆ.

"ಯಾರಲ್ಲಿ" ಅಮ್ಮ ಕೂಗಿದರು.

"ನಾನು... ಅಮ್ಮ" ಎಂದು ಹತ್ತಿರಹೋದೆ.

"ಯಾರಪ್ಪ ನೀನು.... ಸೂರ್ಯ" ಅಮ್ಮ ಆಶ್ಚರ್ಯಪಟ್ಟರು.

"ಹೌದು, ನಾನೆ" ನಾನು ಹೇಳಿದೆ.

"ಏನಾಯಿತು? ಹೇಗೆ ತಪ್ಪಿಸಿಕೊಂಡೆ? ಈಗ ಎಲ್ಲಿರುವೆ? ಏನೀವೇಷ?" ಒಟ್ಟಿಗೆ ಪ್ರಶ್ನೆಗಳ ಸುರಿಮಳೆ ಮಾಡಿದರು

"ಒಂದೊಂದಾಗಿ ಹೇಳುವೆ. ನಾನು ತಪ್ಪಿಸಿಕೊಳ್ಳಲಿಲ್ಲ, ನನ್ನನ್ನು ಬಿಟ್ಟರು. ಇಷ್ಟು ದಿನ ಊರಿನಲ್ಲಿರಲಿಲ್ಲ ಇಂದು ಬಂದೆ. ನನಗಾವ ಅಪಾಯವೂ ಇಲ್ಲ ಹೆದರಬೇಡ. ನನ್ನ ಕಾಯಕಕ್ಕಾಗಿ, ಯಾರಿಗೂ ಗುರುತು ಸಿಗಬಾರದೆಂದು ಈ ವೇಷ" ನಾನೂ ಎಲ್ಲ ಒಟ್ಟಿಗೆ ಉತ್ತರಿಸಿದೆ.

"ಕಾಯಕಕ್ಕೆ ವೇಷವೇ? ಏನು ಕಾಯಕ? ಕಳ್ಳನಾಗಿರುವೆಯಾ?" ಪ್ರಶ್ನಿಸಿದರು

"ಇಲ್ಲ ಅಮ್ಮ, ನಾನು ಕಳ್ಳನಲ್ಲ. ದೇಶಸೇವೆಯ ಕೆಲಸ, ಆದರೆ ಗುಪ್ತ ಈಗ ಹೇಳಲಾರೆ" ಎಂದು ಉತ್ತರಿಸಿದೆ

"ಇದೇಕೆ ಹೀಗೆ? ಒಳಗೆ ಬಾ. ಮನೆಯವರನ್ನೆಲ್ಲ ನೋಡುವುದಿಲ್ಲವೆ?" ಅಮ್ಮ ಕೇಳಿದರು

"ನೋಡುವೆ, ಆದರೆ ಈಗಲ್ಲ. ನಾನು ಈಗ ಬೇರೆಲ್ಲೋ ಹೋಗಬೇಕು. ಯಾರಿಗೂ ನನ್ನ ಬಗ್ಗೆ ಹೇಳಬೇಡ" ಎಂದೆ.

"ಇಷ್ಟು ದಿನದ ಮೇಲೆ ಬಂದಿರುವೆ, ಇಷ್ಟು ಬೇಗ ಹೊರಟೆಯಾ?" ಎಂದರು

"ನಾನು ಕಳಿಸಿದ ಓಲೆ ಸಿಕ್ಕಿತೋ ಇಲ್ಲವೋ?" ನಾನು ಪ್ರತಿ ಪ್ರಶ್ನಿಸಿದೆ.

"ಸಿಕ್ಕಿತು, ಆದರೆ ಅದರಲ್ಲಿ ಏನೂ ವಿವರಣೆ ಇರಲಿಲ್ಲ. ಅದೊಂದೆ ನಮ್ಮಿಬ್ಬರಿಗೂ ಆಶಾಜನಕವಾಗಿತ್ತು. ಈಗಲಾದರೂ ನಿಜ ಸಂಗತಿ ಹೇಳು" ಎಂದು ಹೇಳಿದರು

"ಅಮ್ಮ, ತುಂಬಾ ಹೊಟ್ಟೆ ಹಸಿವಾಗಿದೆ. ತಿನ್ನಲು ಏನಾದರೂ ಇದೆಯೆ?" ಎಂದು ಕೇಳಿದೆ ಮಾತು ಮರೆಸಲು.

ಅಮ್ಮ ಒಳಗೆ ಹೋಗಿ ಬಟ್ಟೆಯಲ್ಲಿ ಕಟ್ಟಿ ಏನೋ ಬುತ್ತಿ ತಂದರು. ನಾನು ನಮ್ಮ ತಂದೆಯವರ ಬಗ್ಗೆ ವಿಚಾರಿಸಿದೆ. "ಅಪ್ಪ ಎಲ್ಲಿದ್ದಾರೆ ಹೇಗಿದ್ದಾರೆ?"

"ಒಳಗಿದ್ದಾರೆ. ನಾನು ಹಸು ನೋಡುವ ನೆಪ ಮಾಡಿ ಬಂದಿರುವೆ" ಎಂದರು

ಮತ್ತೆ ಪುಟ್ಟ ಹುಡುಗನೆನಿಸಿತು. ಅಮ್ಮ ತಂದ ಬೋಸಿ ನೀರಲ್ಲಿ ಕೈತೊಳೆದು, ಬುತ್ತಿ ತೆಗೆದೆ. ಅಮ್ಮ ತಮ್ಮ ಕೈಯಿಂದಲೇ ತಿನ್ನಿಸಿದರು. ಇಬ್ಬರೂ ಸ್ವಲ್ಪ ಕಾಣ್ಣೀರು ಹಾಕಿದೆವು. ಸ್ವಲ್ಪ ಹೊತ್ತಿನ ಬಳಿಕ ಊಟ ಮುಗಿಸಿ ಕೈತೊಳೆದು ಹೇಳಿದೆ.

"ಅಪ್ಪನಿಗೆ ತಿಳಿದರೂ ಯಾವಕಾರಣಕ್ಕೂ ಬೇರೆಯಾರುಗೂ ತಿಳಿಯಬಾರದು, ನಾನಿನ್ನು ಹೊರಡಬೇಕು" ಎಂದು ಎದ್ದೆ.

ಅಷ್ಟು ಹೊತ್ತಿಗೆ ಅಪ್ಪ ದೀಪ ಹಿಡಿದು ಬಾಗಿಲಾಚೆ ಬಂದರು. "ಯಾರು...? ಯಾರಲ್ಲಿ...?"

ನಾನು ಅಮ್ಮನ ಚರಣ ಸ್ಪರ್ಶಿಸಿ, ಬೇಗನೇ ಅಪ್ಪನ ಬಳಿ ಹೋಗಿ "ನಾನು ಸೂರ್ಯ, ಅಮ್ಮನಿಗೆ ಎಲ್ಲ ವಿಷ್ಯ ಹೇಳಿರುವೆ, ಯಾವಕಾರಣಕ್ಕೂ ನನ್ನ ಹೆಸರು ಕೂಗಬೇಡಿ ನಾನೀಗಲೇ ಹೋಗಬೇಕು" ಎಂದು ಹೇಳಿ ಅವರ ಚರಣ ಸ್ಪರ್ಶಿಸಿ, ಕುದುರೆಯ ಕಡೆ ಓಡಿ ಹೊರಟು ಹೋದೆ.

"ಅವನು ನಮ್ಮ ಸೂರ್ಯ! ನೋಡಿದೆಯಾ? ನಾನು ಹೇಳುತ್ತಿರಲಿಲ್ಲವೇ? ನಮ್ಮ ಸೂರ್ಯ....." ಎಂದು ಅಪ್ಪ ಅಮ್ಮನಿಗೆ ಹೇಳುತ್ತಿದ್ದದ್ದು ನಾನು ಓಡುತ್ತಿದ್ದಂತೆ ಕುಂದುತ್ತಿತ್ತು.

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)
~.~
  • Login or register to post comments
  • 1027 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೇಸರದ ದಿನ ಜನುಮ ದಿನ
  • ಮ್ಮ
  • ಸರ್ಪ್ರೈಸ್
  • ಅಂತೂ ಇಂತೂ ಥ್ರೆಡ್ ಮಿಲ್ ಬಂತು
  • ಅಮ್ಮನ ದಿನ
Syndicate content

ಲೇಖಕರು

pvravi's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ -ಮೆಕ್ಕೆಜೋಳದ ಕೃಷಿ-ಪ್ರಾಯೋಗಿಕಾ ಕ್ಷೇತ್ರ’ !
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 4:15pm
  • csomsekraiah
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 3:46pm
  • makrumanju
    ಉ: ಮರಳಿ ಬರಲಿ ಬಾಲ್ಯ
    October 11, 2008 - 2:19pm
  • anil.ramesh
    ಉ: ಬಸವನ ಹುಳು...
    October 11, 2008 - 2:15pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 116 ಅತಿಥಿಗಳು ಆನ್ಲೈನ್ ಇರುವರು.


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator