ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ

ಮತ್ತದೇ ಖಾಲಿತನ, ಬೇಸರ

August 7, 2008 - 6:46am — Chamaraj
Boredom.jpg

ಹಾಡುಗಳ ಸಿಡಿ ಇಟ್ಟಲ್ಲೇ ಇದೆ. ಒಂದೇ ಕ್ಲಿಕ್ಕಿಗೆ ಕಿಶೋರ್‌ ಹಾಡತೊಡಗುತ್ತಾನೆ. ಆದರೆ ಬೆರಳುಗಳು ಚಲಿಸುವುದಿಲ್ಲ.

ಕೈ ಚಾಚಿದರೆ ಕಗ್ಗ ಸಿಗುತ್ತದೆ. ಡಿವಿಜಿ ವೇದಾಂತ ಹೇಳುತ್ತಾರೆ. ಡಾಮ್ನಿಕ್‌ ಲ್ಯಾಪಿಯರ್‌ ಚೆಂದಗೆ ಕತೆ ಹೇಳುತ್ತಾನೆ. ತರುಣ್‌ ತೇಜ್‌ಪಾಲ್‌ ಇದ್ದಕ್ಕಿದ್ದಂತೆ ಖಾಲಿಯಾದ ಸ್ಥಿತಿ ವರ್ಣಿಸುತ್ತಾನೆ. ಭೈರಪ್ಪನವರು ಸಾರ್ಥ ಹೊರಡುತ್ತಾರೆ. ತಾವು ಖಾಲಿಯಾಗಿದ್ದೇವೆ ಎಂಬುದನ್ನು ಅನಂತಮೂರ್ತಿ ಋಜುವಾತು ಮಾಡುತ್ತಾರೆ. ಆದರೂ ಕೈ ಚಾಚುವುದಿಲ್ಲ.

ಜೇಬಲ್ಲೇ ಇದೆ ಕೀಲಿ. ಬೆರಳೊತ್ತಿದರೆ ಸ್ಕೂಟಿ ಶುರುವಾಗುತ್ತದೆ. ಎಂಟೂ ದಿಕ್ಕುಗಳಿಗೆ ಯಾತ್ರೆ ಹೊರಡಬಲ್ಲುದು. ಆದರೂ ಕೈ ಸುಮ್ಮನಿದೆ.

ಎರಡೇ ಬಟನ್ನಿಗೆ ಮೆಚ್ಚಿನ ಚಾನೆಲ್‌ ಪ್ರತ್ಯಕ್ಷವಾಗುತ್ತದೆ. ಗಂಟೆ ಒಂಬತ್ತಾಯಿತೆ? ಪ್ರೈಮ್‌ ನ್ಯೂಸ್‌ ಬರುತ್ತಿರುತ್ತವೆ. ಏಕೋ ಸುದ್ದಿಗಳು ಬೇಸರ ಹುಟ್ಟಿಸುತ್ತವೆ. ರಿಮೋಟ್‌ ಅಲ್ಲೇ ಕೂತಿದೆ. ಆಜ್ಞೆಗಾಗಿ ಕಾಯುವ ಸಾಕುನಾಯಿಯಂತೆ.

ಯಾವಾಗ ಬೇಕಾದರೂ ಮೊಳಗಬಲ್ಲ ಮೊಬೈಲ್‌ ಪಕ್ಕಕ್ಕಿದೆ, ಥೇಟ್‌ ಸಿಡಿಯಲು ಸಿದ್ಧವಾದ ಬಾಂಬ್‌ನಂತೆ. ಬೆರಳೊತ್ತಿದರೆ ಇಷ್ಟಪಡುವ ಹಲವಾರು ಮಿತ್ರರು ಅಂಕೆಗಳಾಗಿ ಕಾಯುತ್ತಿದ್ದಾರೆ. ಆದರೂ ಕೈ ಅತ್ತ ಸರಿಯುತ್ತಿಲ್ಲ.

ಹಳೆಯ ಫೊಟೊಗಳ ಆಲ್ಬಮ್ಮುಗಳಿವೆ. ಅಚ್ಚಾದ ರಾಶಿರಾಶಿ ಪತ್ರಿಕೆಗಳಿವೆ. ಅಚ್ಚಿಗೆ ಕೊಡದೇ ಹಾಗೇ ಇಟ್ಟುಕೊಂಡ ನೂರಾರು ಬರಹಗಳಿವೆ. ಕಣ್ಣು ಮುಚ್ಚಿದರೆ ಮನಸ್ಸು ಮೂವತ್ತು ವರ್ಷ ಹಿಂದಕ್ಕೂ ಹೋಗಬಲ್ಲುದು. ಎಳೆಎಳೆಯನ್ನೂ ಹೆಕ್ಕಿ ನೆನಪಿನ ಚಾದರ ನೇಯಬಲ್ಲುದು. ಯಾವುದೋ ಎಳೆ ಹಿಡಿದೆಳೆದರೆ ಹಾಡಾಗುತ್ತದೆ, ಪ್ರಬಂಧವಾಗುತ್ತದೆ, ಕತೆಯಾಗುತ್ತದೆ, ಕೊಂಚ ಶ್ರದ್ಧೆಯಿಂದ ಕೂತರೆ ಕವಿತೆಯೂ ಆಗುತ್ತದೆ. ಆದರೂ ಮನಸ್ಸು ಸುಮ್ಮನಿದೆ.

ಕಿಟಕಿಯಾಚೆಯ ಬಾಳೆ ಗಿಡವೂ ಸುಮ್ಮನಿದೆ. ಜೊತೆಗಿದ್ದು ನೆಮ್ಮದಿ ನೀಡುತ್ತಿದ್ದ ಪೆನ್ನೂ ಸುಮ್ಮನಿದೆ. ರಿಮೋಟ್‌ ಸುಮ್ಮನಿದೆ. ಗಾಡಿಯ ಇಗ್ನಿಷನ್‌ ಕೀ ಸುಮ್ಮನಿದೆ. ಮೊಬೈಲ್‌ ಅನ್ನು ನಾನೇ ಸುಮ್ಮನಾಗಿಸಿದ್ದೇನೆ. ಏಕೋ ಗದ್ದಲ ಮಾಡುವ ಮಕ್ಕಳೂ ಮಲಗಿದ್ದಾರೆ. ಮತ್ತೇನು ವಿಶೇಷ ಎನ್ನುವ ಮಡದಿಯೂ ಮಲಗಿದ್ದಾಳೆ. ಏನೂ ವಿಶೇಷ ಇಲ್ಲವೆನ್ನುವಂತೆ ಬೆಂಗಳೂರಿನ ಗದ್ದಲದ ಟ್ರಾಫಿಕ್ಕೂ ಮೌನವಾಗಿದೆ.

ಬೀಟ್‌ ಪೋಲೀಸನ ಸಿಳ್ಳೆಯೂ ಕೇಳುತ್ತಿಲ್ಲ. ಸಂಗಾತಿಗಾಗಿ ಬೊಗಳುವ ನಾಯಿಯೂ ಸುಮ್ಮನಿದೆ. ಇಷ್ಟೊತ್ತಿಗೆ ಹೋಗಬೇಕಿದ್ದ ಕರೆಂಟ್‌ ಕೂಡ ಏತಕ್ಕೋ ಕಾಯುವಂತೆ ಬೆಳಗುತ್ತಲೇ ಇದೆ. ಮೋಡ ಚೆದುರಿ ಅಚ್ಚರಿಯಿಂದ ಚಂದ್ರ ಕೂಡ ಹೊರಬಂದಿದ್ದಾನೆ.

ಮರೆಯದೇ ಗೇಟ್‌ ಬೀಗ ಹಾಕಿದ್ದೇನೆ. ಗಾಡಿ ಲಾಕ್‌ ಮಾಡಿದ್ದೇನೆ. ಚಾರ್ಜಿಂಗ್‌ ದೀಪಗಳನ್ನು ಪ್ಲಗ್ಗಿಗೆ ಸಿಕ್ಕಿಸಿದ್ದೇನೆ. ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದೇನೆ. ನಿನ್ನೆಯ ಕೆಲಸಗಳು ಕರಾರುವಾಕ್ಕಾಗಿ ಮುಗಿದಿವೆ. ನಾಳೆ ಏನು ಮಾಡಬೇಕೆಂಬುದು ಇಂದೇ ಸ್ಪಷ್ಟವಾಗಿದೆ.

ಇವತ್ತು ಮಾಡುವುದು ಏನು?

ಮತ್ತದೇ ಬೇಸರ, ಖಾಲಿತನ, ಏಕಾಂತ !

- ಚಾಮರಾಜ ಸವಡಿ

  • ಚುಟುಕು ಬರಹ
~.~
  • Login or register to post comments
  • 183 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 8, 2008 - 11:19pm — Deeparavishankar

ಉ: ಮತ್ತದೇ ಖಾಲಿತನ, ಬೇಸರ

Deeparavishankar's picture

ಮೆಲ್ಲಗೆ ಸೂರು ನೋಡುತ್ತಾ ಕಿಶೊರನದೇ ಒ೦ದು ಹಾಡು ಗುನುಗಿಕೊಳ್ಳಿ..ಹಾಗೇ ನಿದ್ದೆ ಹೋಗಿ..ಚೆನ್ನಾಗಿದೆ ಸುಮ್ಮನೆ ಗೀಚಿರುವ ಗೀಚು...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 9, 2008 - 9:25pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

ಸುಮ್ಮನೇ ಗೀಚಿದ್ದಲ್ಲ ದೀಪಾ ಅವರೇ, ಅನುಭವಿಸಿ ಬರೆದಿದ್ದು. ಅದರ ಪಾಡಿಗೆ ಅದು ಯಾವಾಗಲೋ ಒಮ್ಮೆ ಬರುತ್ತದೆ. ಒಂದಿಷ್ಟು ಹೊತ್ತು ಇದ್ದು ಹೋಗುತ್ತದೆ. ಬಂದಿದ್ದು ಹೋಗಲಿ ಬಿಡಿ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 9, 2008 - 9:35am — uniquesupri

ಉ: ಮತ್ತದೇ ಖಾಲಿತನ, ಬೇಸರ

uniquesupri's picture

ಈ ನಮ್ಮ ಖಾಲಿತನಕ್ಕೆ ನಾವು ಹೊರಗಿನ ಪರಿಕರಗಳನ್ನು ಅವಲಂಬಿಸಿದ್ದು ಎಷ್ಟರ ಮಟ್ಟಿಗೆ ಕಾರಣವಾಗಿರಬಹುದು? ಎಲ್ಲಾ ಇದ್ದೂ ನಮಗೆ ಖಾಲಿತನ ಕಾಡುತ್ತದೆಯೆಂದರೆ ನಮ್ಮನ್ನು ತುಂಬಿ ಇಡುವುದು ಪರಿಕರಗಳಲ್ಲ, ನಮ್ಮಲ್ಲಿರುವ ಬೇರಾವುದೋ ಸಂಗತಿ.
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 9, 2008 - 9:24pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

ಅತಿಯಾದ ವಸ್ತು ಬಳಕೆಯಿಂದ ಖಾಲಿತನ ಬರುತ್ತದೆ ಎಂಬುದು ನಿಜ ಸುಪ್ರೀತ್‌. ಇವುಗಳ ಹೊರತಾಗಿಯೂ ಅದು ಕಾಡುತ್ತದೆ. ಬಹುಶಃ ಎಲ್ಲರಲ್ಲೂ ಇಂಥ ಭಾವನೆ ಆಗಾಗ ಬರುತ್ತಲೇ ಇರುತ್ತದೆ. ಅದೇನೂ ಶಾಶ್ವತ ಭಾವನೆಯಲ್ಲ, ನಿಜ. ಆದರೆ, ಆಗಾಗ ಕಾಡುತ್ತದೆ ಎಂಬುದು ಸುಳ್ಳಲ್ಲ. ಅದನ್ನು ಸುಮ್ಮನೇ ಅನುಭವಿಸುವುದು ಒಳ್ಳೆಯದು ಅಂದುಕೊಂಡಿದ್ದೇನೆ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 12, 2008 - 5:27am — pallavi.dharwad

ಉ: ಮತ್ತದೇ ಖಾಲಿತನ, ಬೇಸರ

pallavi.dharwad's picture

ನಿಮಗೂ ಶುರುವಾಯ್ತೆ ಖಿನ್ನತೆ ಎಂಬ ರೋಗ?

ಆದ್ರೂ ಪರವಾಗಿಲ್ಲ ಬಿಡಿ. ಇಂತಹ ಒಂದಿಷ್ಟು ಲೇಖನಗಳನ್ನು ಬರೆಯಬಹುದು. ನಮ್ಮಂಥ ಖಿನ್ನತಿಯರಿಗೆ ಹೊರ ಬರುವ ದಾರಿ ತಿಳಿದಂತಾಯ್ತು.

- ಪಲ್ಲವಿ. ಎಸ್‌.
ಎಲ್ಲರನ್ನು ಜೋಡಿಸಿರುವ ಎಳೆ ಹುಡುಕುತ್ತಾ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 16, 2008 - 9:08pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

ಖಿನ್ನತೆ ಎಲ್ಲರಲ್ಲೂ ಇದ್ದೇ ಇರುತ್ತದೆ ಪಲ್ಲವಿ. ಆದರೆ, ಪ್ರಮಾಣ ವ್ಯತ್ಯಾಸವಾಗಬಹುದು, ಅಷ್ಟೇ. ಅದನ್ನೊಂದು ಕ್ರಿಯಾತ್ಮಕ ಅಭಿವ್ಯಕ್ತಿಯನ್ನಾಗಿ ನೋಡುವುದೊಂದೇ ಉತ್ತಮ ಮಾರ್ಗ. ಅದು ಸಾಧ್ಯವಾಗದಿದ್ದರೆ, ವೈದ್ಯರನ್ನು ಕಾಣುವುದೇ ಉತ್ತಮ.

ನಿಮ್ಮ ’ಖಿನ್ನ’ ಬರಹಗಳನ್ನು ಓದಿದ ನಂತರ, ನಿಮಗೆ ವೈದ್ಯರ ಅವಶ್ಯಕತೆ ಖಂಡಿತ ಇಲ್ಲ ಅನಿಸುತ್ತದೆ. ಪ್ರತಿಕ್ರಿಯೆಗಾಗಿ ಥ್ಯಾಂಕ್ಸ್‌.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮತ್ತದೇ ಖಾಲಿತನ, ಬೇಸರ
  • ದಾಟುವ ಮುನ್ನ ಜಾರುವ ಮನ
  • ದಾಟುವ ಮುನ್ನ ಜಾರುವ ಮನ
  • ಕಣ್ಣೇ ಮುಚ್ಚೇ, ಕಾಡಬೇಡ್ವೇ...
  • ಪರಮಾಣು ಒಪ್ಪಂದ
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ನ್ಯೂಸ್‌ ಎಡಿಟರ್‍ ಎಂದು ಕೆಲಸ ಮಾಡುತ್ತಿದ್ದೇನೆ. ಬರವಣಿಗೆ ಇಷ್ಟದ ಕೆಲಸ.
See my blog: http://chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು
  • ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
  • ಬೂದಿಕೋಟೆ
  • ಅಬ್ಬ, ರಾಷ್ತ್ರಕ್ಕೇ ಅವಮಾನ!

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 127 ಅತಿಥಿಗಳು ಆನ್ಲೈನ್ ಇರುವರು.


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator