ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಹೃದಯಬಿಚ್ಚಿ ಲೇಖನವೊಂದನ್ನು ಬರೆದಾಗ (ಭಾಗ 3)..

September 23, 2008 - 10:05pm — sunilkumara.ms
ಹೃದಯಬಿಚ್ಚಿ ಲೇಖನವೊಂದನ್ನು ಬರೆದಾಗ (ಭಾಗ 3)..

(ಭಾಗ 1 ಅನ್ನು ಇಲ್ಲಿ ನೋಡಬಹುದು, http://sampada.net/blog/sunilkumarams/09/09/2008/11580 )

(ಭಾಗ 2 ಅನ್ನು ಇಲ್ಲಿ ನೋಡಬಹುದು http://sampada.net/article/11816)

ನನ್ನ ಹಣೆಗಾದ ನೋವನ್ನೂ ಲೆಕ್ಕಿಸದೆ, “ಏನ್ರೀ ಬಹಳ ನೋವಾಯಿತಾ ನಿಮಗೆ?” ಎಂದು ಅವಳನ್ನು ಬಲು ಕನಿಕರದ ಮಾತುಗಳಿಂದ ಸಂತೈಸಲು ಮುಂದಾದೆನು. ಅವಳ ಮುದ್ದಾದ ಹಣೆಯ ಒಂದಂಚು ನೋವಿನಿಂದ ಊದಿಕೊಂಡಿರುವುದು ಸ್ಪಷ್ಟವಾಗಿ ನನಗೆ ಕಾಣಿಸುತ್ತಿತ್ತು. ತಕ್ಷಣವೇ ನನ್ನ ಬಳಿ ಇದ್ದ ನೋವುನಿವಾರಕ ಔಷಧವನ್ನು ಬ್ಯಾಗಿನಿಂದ ತೆಗೆದು, ಹಚ್ಚಿಕೊಳ್ಳಲು ಅವಳಿಗೆ ಕೊಟ್ಟೆನು. ಅದನ್ನು ಹಚ್ಚಿಕೊಂಡು ಮಲಗಲು ಅಣಿಯಾಗುತ್ತಾಳೆ ಎಂದು ನಾನು ಮನದಲ್ಲಿ ಎಣಿಸಿದ್ದೆ.

ಆದರೆ ಅದು ಹಾಗಾಗಲಿಲ್ಲ. ಮೃದುವಾದ ಅವಳ ಹಸ್ತವನ್ನು ನನ್ನತ್ತ ಚಾಚುತ್ತಾ, “ನೀವು ಆವಾಗಿನಿಂದಲೂ ನನ್ನ ಜೊತೆ ಮಾತನಾಡಲು ತುಂಬಾ ಇಚ್ಚಿಸಿದ್ದೀರಿ ಅಂತಾ ಕಾಣುತ್ತೆ. ಆದರೆ ನಾನೇ ಮಾತನಾಡ್ಲಿಲ್ಲ ಕ್ಷಮಿಸಿ! ನನ್ನ ಹೆಸರು ದೀಪಾ, ಹಾಸನದಲ್ಲಿ ಇಂಜಿನಿಯರಿಂಗ್ ಮಾಡ್ತಾ ಇದ್ದೀನಿ, ಗಣೇಶನ ಹಬ್ಬಕ್ಕೆಂದು ನನ್ನ ಸ್ನೇಹಿತೆಯರೊಂದಿಗೆ ಊರಿಗೆ ಹೋಗ್ತಾ ಇದ್ದೀನಿ" ಎಂದು ಒಂದೇ ನಿಟ್ಟುಸಿರಿನಲ್ಲಿ ಹೇಳದೆ ಬಲು ತಾಳ್ಮೆಯಿಂದ ನನ್ನಲ್ಲಿ ಹೇಳಿದಳು. ಆನಂತರ ನಿಮ್ಮ ಹೆಸರೇನು? ನಿಮ್ಮದು ಯಾವೂರು? ಎನ್ನುವುದನ್ನೂ ಸಹ ಅಷ್ಟೇ ತಾಳ್ಮೆಯಿಂದ ನನ್ನಲ್ಲಿ ಕೇಳಿದಳು. ತುಂಬಾ ಆನಂದಭರಿತನಾಗಿ ಅವಳು ಕೇಳಿದ ಎರಡೇ ಎರಡು ಪ್ರಶ್ನೆಗಳಿಗೆ ಇಡೀ ನನ್ನ ಜನ್ಮವೃತ್ತಾಂತವನ್ನೇ ಚಾಚೂ ತಪ್ಪದೇ ಅವಳಲ್ಲಿ ಹೇಳಿದೆ. ನಾನು ಹೇಳಿದ ಯಾವೊಂದು ಸಂಗತಿಯೂ ಅಷ್ಟು ಕುತೂಹಲವೆಂದು ಅವಳಿಗೆ ಅನ್ನಿಸಲಿಲ್ಲ. ಆದರೆ ನನಗೆ ಪ್ರಕೃತಿಯ ಬಗ್ಗೆ ಹಾಗೂ ಸಾಹಿತ್ಯ, ಕಲೆ ಬಗ್ಗೆ ಇಷ್ಟ ಎಂದು ಹೇಳಿದ ನುಡಿಗಳು ಅವಳಿಗೆ ಕುತೂಹಲ ತರಿಸಿದ್ದವು. ಅಲ್ಲದೇ ಅದರ ಬಗ್ಗೆ ತಿಳಿದುಕೊಳ್ಳಲು ತುಂಬಾ ಆಸಕ್ತಳಾಗಿದ್ದಳು.

ತುಸುಸಮಯದ ಬಳಿಕ ಅವಳೇ ಮುಂದುವರೆದು, “ನೀವು ಯಾವ್ಯಾವ ಕಾದಂಬರಿ ಓದಿದ್ದೀರಾ? ಯಾರು ನಿಮಗೆ ಇಷ್ಟವಾದ ಸಾಹಿತಿ?” ಎಂದು ಕೇಳಿದಳು. ಮೊದಲೇ ಅವಳ ಜೊತೆ ಮಾತಾಡಲು ಚಡಪಡಿಸುತ್ತಿದ್ದ ನಾನು, "ಪಂಪನಿಂದ ಹಿಡಿದು ಜಯಂತ್ ಕಾಯ್ಕಿಣಿಯವರೆಗೂ ಎಲ್ಲಾ ಕನ್ನಡ ಸಾಹಿತಿಗಳ ಆ ಕಾದಂಬರಿ ಓದಿದ್ದೀನಿ..ಈ ಕಾದಂಬರಿ ಓದಿದ್ದೀನಿ, ದ.ರಾ ಬೇಂದ್ರೆಯವರ ಕವನಗಳು ಅಂದ್ರೆ ಇಷ್ಟ " ಅದು ಇದು ಎಂದು ಮನಸ್ಸಿಗೆ ಬಂದಿದ್ದನ್ನೆಲ್ಲ ಹೇಳಲು ಶುರುಮಾಡಿದೆ. ಆದರೂ ಅವಳು ಸ್ವಲ್ಪವೂ ಬೇಸರಗೊಳ್ಳಲೇ ಇಲ್ಲ ನಾನು ಹೇಳಿದ್ದನ್ನೆಲ್ಲ ತೀರ ಸಮಾಧಾನವಾಗಿ ಕೇಳುತ್ತಲೇ ಇದ್ದಳು. ಆಗಲೇ ನನಗೆ ಅರಿವಾದದ್ದು ಅವಳಿಗೆ ಸಾಹಿತ್ಯದ ಬಗ್ಗೆ ತುಂಬಾ ಒಲವಿದೆ ಎಂದು. ನಾ ಬರೆದ ಒಂದೆರಡು ಲೇಖನಗಳನ್ನು, ಕವನಗಳನ್ನು ಅವಳಿಗೆ ತೋರಿಸಿದೆ. ಅವುಗಳನ್ನು ಓದಿ, "ತುಂಬಾ ಚೆನ್ನಾಗಿ ಬರೆದಿದ್ದೀರ, ಹೀಗೆಯೇ ಬರೆಯುತಾ ಇರಿ. ನಮ್ಮ ಕನ್ನಡಭಾಷೆ ನಿಮ್ಮಂತಹ ಪ್ರಜ್ಞಾವಂತ ಯುವಕರಿಂದಲೇ ಏಳಿಗೆಯ ಹಾದಿಯನ್ನು ಹಿಡಿಯಬೇಕು" ಎಂದಳು.

ನಂತರದಲ್ಲೂ ಅವಳೇ ಮುಂದುವರೆದು, “ನನಗೆ ಹಾಡುವುದು, ನೃತ್ಯ ಮಾಡುವುದು ಅಂದ್ರೆ ತುಂಬಾ ಇಷ್ಟ ನಾನು ಜಂಬಕ್ಕೆ ಹೇಳ್ತಿಲ್ಲ ಸ್ಕೂಲ್ ಲೆವೆಲ್ನಲ್ಲಿ, ಕಾಲೇಜ್ ಲೆವೆಲ್ನಲ್ಲಿ ಅನೇಕಾನೇಕ ಬಹುಮಾನಗಳು ನನಗೆ ಬಂದಿವೆ” ಎಂದು ಭಾವಪರವಶಳಾಗಿ ನುಡಿದಳು.

ಮೊದಲೇ ಅವಳ ರೂಪರಾಶಿಯ ಬಲೆಯಲ್ಲಿ ಆಜೀವನ ಬಂಧಿಯಾಗಿದ್ದ ನಾನು, ಅವಳಿಗೆ ಕಲೆ, ಸಾಹಿತ್ಯದ ಬಗ್ಗೆ ಇರುವ ಅಭಿರುಚಿಯನ್ನು ಕೇಳಿ ಅವಳಲ್ಲಿ ಇನ್ನಷ್ಟು ಮಾರುಹೋದೆ, ಬಾಳಪಯಣದ ರಥದಲ್ಲಿ ಸಂಗಾತಿಯಾಗಿಸಿಕೊಳ್ಳುವ ಯೋಜನೆಯನ್ನು ಮನದಲ್ಲೇ ಹಾಕಿಕೊಂಡು ಅರೆಕ್ಷಣದಲ್ಲಿ ಒಂದೆರಡು ಕವನಗಳನ್ನು ಅಂತರಾಳದಲ್ಲೇ ಬರೆದುಕೊಂಡು ಅವಳಿಗೆ ಹೇಳಲು ಮುಂದಾದೆ. ಅವಳೂ ಸಹ ಕೇಳಲು ಬಲು ಕಾತರವಾಗಿದ್ದಳು...

ಓ ದೀಪ..
ಆ ನಿನ್ನ ರೂಪ..
ನನ್ನುಸಿರಿನ ಕಣಕಣಕ್ಕೂ ಪರಿಮಳದ ದೂಪ..
ಆ ರೂಪ ಕಂಡ ನಾ, ನಿತ್ಯ ನಿನಗಾಗಿ ಪ್ರೇಮಪತ್ರ ಬರೆಯೋದು ತಪ್ಪಾ..?
ಆ ನನ್ನ ಪ್ರೇಮಪತ್ರಕ್ಕೆ ಮರು ಉತ್ತರ ನೀ ಬರೀತಿಯಾ ಸ್ವಲ್ಪ..?

ಓ ದೀಪು
ಗುಣದಲಿ ನೀ ಮುಗ್ಧ ಪಾಪು..
ಜಗದ ಜನರಲಿ ಸ್ಪೂರ್ತಿ ತುಂಬಲು ನಿನ್ನ ನಗುವೊಂದೇ ಸಾಕು..
ನೀ ನಗು ನಗುತಾ ಜೊತೆಗಿರಲು ನನಗೆ ಇನ್ನೇನು ಬೇಕು?

ಓ ದೀಪು
ನಿನ್ನ ಚೆಲುವ ಸಿರಿ ಹೆಚ್ಚಿಸಲೆಂದು ನಾ ತಂದಿರುವೆ Dove ಸೋಪು..
ಅದನು ತಲುಪಿಸಲು ಒಮ್ಮೆ ನನಗೆ ತೋರುವೆಯಾ ನಿಮ್ಮೂರ Road ಮ್ಯಾಪು.

ಇದನ್ನೆಲ್ಲ ತುಂಬು ಮೌನದಿಂದ ಆಲಿಸುತ್ತಿದ್ದವಳು, ಕಿರುನಗೆ ಬೀರುತ್ತಾ “ನಿಮ್ಮಲ್ಲಿ Imagination Power ತುಂಬಾ ಚೆನ್ನಾಗಿದೆ. ಆದರೆ ಈ ರೀತಿ Silly Silly ಕವನಗಳನ್ನು ಬರೆಯೋದು ಬಿಟ್ಟು, ನೀವ್ಯಾಕೆ ಹೆಚ್ಚು ಅರ್ಥಪೂರ್ಣವಾದ ಕವನಗಳನ್ನು, ಲೇಖನಗಳನ್ನು ಬರೆಯಲು ಪ್ರಯತ್ನಿಸಬಾರದು?” ಎಂದು ನನ್ನಲ್ಲಿ ಪ್ರಶ್ನಿಸಿದಳು. ಅರೆಕ್ಷಣ ಏನೇಳಬೇಕೆಂದು ತೋಚದೆ ನಾನು ತಬ್ಬಿಬ್ಬಾದೆ. ನಂತರ ತಡವರಿಸಿಕೊಂಡು “ಹೌದು..ಹೌದು ನೀವೇಳೊದು ನಿಜ, ನಾ ಆಗಲೇ ಹೆಚ್ಚು ಅರ್ಥಪೂರ್ಣವಾದ ಹತ್ತಾರು ಕವನಗಳನ್ನು ಬರೆದಿದ್ದೀನಿ” ಎಂದೇಳಿದೆ. ಆದರಾಗಲೇ "ನನ್ನ ಮನಸ್ಸು ತನ್ನ ಸ್ಥಿಮಿತ ಕಳೆದುಕೊಳ್ಳುವತ್ತ ಸಾಗಿತ್ತು. ಭುಗಿಲೆದ್ದ ಅಂತರಾಳದ ಇಂಗಿತವು ಮಾತಿನ ರೂಪದಲ್ಲಿ ಬರುವ ಹವಣಿಕೆಯಲಿ ತೊಡಗಿತ್ತು. ಸರಿ ಯಾವುದನ್ನೇ ಆಗಲಿ ಬಚ್ಚಿಟ್ಟುಕೊಂಡಷ್ಟೂ ನೋವೇ ಜಾಸ್ತಿಯೆಂಬುದನ್ನು ಅರಿತು. ನಾನೇ ಮುಂದುವರೆದು, ಅಚಲ ಧೈರ್ಯವನ್ನು ಮನದಲ್ಲಿ ತಂದುಕೊಂಡು ಅಂತರಾಳದ "ಪ್ರೀತಿ ಇಂಗಿತವನ್ನು" ಒಂದೇ ಉಸಿರಲ್ಲಿ ಹೇಳಿಯೆಬಿಟ್ಟೆ!"

ಅದಕ್ಕವಳು ನಸುನಗುತ್ತಾ, "ನೀವಿದನ್ನ ನನ್ನಲ್ಲಿ ಕೇಳಿಯೇ ಕೇಳುತ್ತಿರಾ ಎಂದು ನಾನು ಆಗಲೇ ಊಹಿಸಿದ್ದೆ. ಸರಿ ನಾನೂ ಸಹ ನನ್ನ ಮನದ ಇಂಗಿತವನ್ನು ಹೇಳುತ್ತ್ತೇನೆ ಕೇಳಿ, ನನಗೆ ನೀವು ಇಷ್ಷವಾಗಿಲ್ಲವೆಂದಲ್ಲ ತುಂಬ ಇಷ್ಟವಾಗಿದ್ದೀರಿ, ನಿಮಗಿಂತ ನಿಮ್ಮ ಕವನಗಳು, ನಿಮ್ಮ ಮಾತೃಭಾಷಾ ಪ್ರೇಮ ಇನ್ನೂ ಇಷ್ಟವಾಯಿತು. ಆದರೆ ಈ ಇಷ್ಟವನ್ನು ಪ್ರೀತಿ, ಪ್ರೇಮ, ಹಾಗೂ ಬಾಂಧವ್ಯದಲ್ಲಿ ಕೊನೆಮಾಡಿಕೊಳ್ಳೋದು ನನಗೆ ಇಷ್ಟವಿಲ್ಲ. ನಿಮಗೆ, ನಿಮ್ಮ ಬರವಣಿಗೆಗೆ ನಾನು ಆಜೀವ ಪರ್ಯಂತ ಅಭಿಮಾನಿಯಾಗಿರುತ್ತೇನೆ. ಅಲ್ಲದೇ ನಿಮಗೆ ಗೊತ್ತಲ? ನಮ್ಮ ಸಮಾಜದಲ್ಲಿ ಮದುವೆಗೆ ಎದುರಾಗುವ ತೊಡಕುಗಳು ನೂರಾರು ಅಂತ. ಜಾತಿ, ಮತ, ಪಂಥ ಇತ್ಯಾದಿ. ನಮ್ಮದು ಮೊದಲೇ ಕಟ್ಟಾ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬ "...ಇನ್ನೂ ಏನೇನೋ ಹೇಳಹೋಗಿದ್ದಳು.

ಅಷ್ಟರಲ್ಲಿ "ಏ ದೀಪಾ, ಊರು ಬಂತು ಕಣೇ. ಇಲ್ಲೇ ಸ್ಟಾಪ್ ಕೇಳೋಣ ಇಲ್ಲಾಂದ್ರೆ ಹೆಬ್ರಿಗೆ ಹೋಗಿ ಇಳಿದು ಕೊಳ್ಳಬೇಕಾಗುತ್ತೇ" ಎಂದೇಳುತ್ತಾ ಆಕೆಯ ಗೆಳತಿಯರಿಬ್ಬರು ತಾವು ತಂದಿದ್ದ ಭಾರೀ ಗಾತ್ರದ ಲಗೇಜ್‌ಗಳನ್ನು ಕೈಯಲ್ಲಿ ಹಿಡಿದು ಇಳಿಯಲು ಸನ್ನದ್ಧರಾಗಿ ಮುಂದೆಹೋದರು.

ಅವರ ಆ ಮಾತುಗಳನ್ನು ಕೇಳುತ್ತಲೇ ದೀಪಾಳಿಗಿಂತ ಬಿರುಸಾಗಿ ನಾನೇ ಎದ್ದು ಲಗೇಜ್ ಕ್ಯಾಬಿನ್‌ನಿಂದ ಅವಳ ಲಗೇಜ್ ತೆಗೆದುಕೊಡುತ್ತಾ ಪಕ್ಕಕ್ಕೆ ಸರಿದು ಅವಳಿಗೆ ಇಳಿದುಹೋಗಲು ಅನುವು ಮಾಡಿಕೊಟ್ಟು ಅವಳನ್ನು ಕೊನೆಯದಾಗಿ ನೋಡಲು ಒಮ್ಮೆ ಕತ್ತನ್ನು ಎತ್ತಲು, ಅದೇ ಕ್ಷಣದಲ್ಲಿ ಡ್ರೈವರ್ ಲೈಟ್ ಹಾಕಿದನು. ನಾನು ಒಬ್ಬನೇ ಅಳುತ್ತಿರುವುದೆಂದು ನಾ ಅಂದುಕೊಂಡಿದ್ದೆ. ಆದರೆ ವಾಸ್ತವ್ಯದ ಚಿತ್ರಣ ಬೇರೆಯೇ ಹಾಗಿತ್ತು ಕ್ಷಣಾರ್ಧದಲ್ಲಿ ದೀಪಾಳ ನಯನಗಳು ಕಣ್ಣೀರಿನ ಹೊಳೆಯಲ್ಲಿ ಮಿಂದು ಕೆಂಪಾಗಿರುವುದು ಮುಗ್ಧಮಗುವಿಗೂ ತಿಳಿಯುವಂತೆ ಇತ್ತು. ಅವಳ ಆ ಮುಖವನ್ನೊಮ್ಮೆ ನೋಡಿ ತಡೆಯಲಾರದೆ ಬಿಕ್ಕಳಿಸಿ ಜೋರಾಗಿಯೇ ಅತ್ತುಬಿಟ್ಟೆ. ದೀಪಾಳಲ್ಲಿ ಅಳುವಿತ್ತು, ಆದರೆ ಮನದಲ್ಲಿ ಪ್ರೀತಿ ಅನ್ನುವುದರ ಬಗ್ಗೆ ಕೊಂಚವೂ ಕರುಣೆ ಇರಲ್ಲಿಲ್ಲ.

“ಯಾರ್ರೀ ಇಳಿಯೋರು? ಬೇಗ ಬನ್ರೀ, ಎಷ್ಟು ಹೊತ್ತು ಮಾಡ್ತೀರ?” ಎಂದು ಕಂಡಕ್ಟರ್ ಗಡುಸುಧ್ವನಿಯಲ್ಲಿ ಕೂಗಲು, ತಕ್ಷಣ ಎಚ್ಚೆತ್ತುಕೊಂಡ ದೀಪಾ ಅಳುತ್ತಾ ‌ಅಲ್ಲಿಂದ ಹೊರಟುಹೋದಳು. ಆ ಕ್ಷಣದಲ್ಲಿ ನನ್ನ ಕಣ್ಣಂಚಲ್ಲಿ ಕಣ್ಣೀರಿನ ಹನಿಬಿಂದುಗಳು ಹೆಚ್ಚಾಗುತ್ತಿದ್ದಂತೆ ಅವಳ ಭೌತಿಕ ಚಿತ್ರಣ ಅಸ್ಪಷ್ಟವಾಗುತ್ತಾ ಹೋಯಿತು.

ಅವಳು ಕೆಳಗೆ ಇಳಿಯುತ್ತಲೇ ಅವಳ ಗೆಳತಿಯೊಬ್ಬಳು, “ಯಾಕೆ ಅಳ್ತಿದ್ದೀಯಾ? ಏನೇ ವಿಷಯಾ? ಯಾರು ಆ ಹುಡುಗ?” ಎಂದು ಕೇಳಿದ ಪ್ರಶ್ನೆ ನನ್ನ ಕಿವಿಯಂಚನ್ನು ತಾಕುತ್ತಿದ್ದಂತೆ ಬಸ್ಸು ಹೊರಟಿತು.

ನಾನೇ ಹಚ್ಚಿಕೊಂಡ “ಪ್ರೀತಿಯ ದೀಪ” ದೂರ ಹೋಗಿ ಮನದ ಮನೆಯಲ್ಲಿ ಬೆಳಕನ್ನೇ ನುಂಗುವಂತೇ ಆವರಿಸಿದ್ದ ಕತ್ತಲೆ ಹಾಗೂ ನಯನಗಳ ಒಡಲಿನಿಂದ ತುಂಬಿಬರುತ್ತಿದ್ದ ಕಣ್ಣೀರಧಾರೆ ಇವುಗಳ ನಡುವೆಯೂ..... "ಸಹಪ್ರಯಾಣಿಕಳಾಗಿದ್ದ ಅವಳೊಂದಿಗೆ ಕಳೆದ ಪ್ರಯಾಣದ ಮಧುರ ಕ್ಷಣಗಳು ನನ್ನ ಅಂತರಾಳದಲ್ಲಿ ಬಾಲ್ಯದ ನೆನಪುಗಳಂತೆಯೇ ಅಚ್ಚಳಿಯದ ನೆನಪಾಗಲು ಆಗಲೇ ಯಥಾವತ್ತಾಗಿ ತರ್ಜುಮೆಯಾಗುತ್ತಿದ್ದವು......... - ನಿಮ್ಮ ಸುನಿಲ್ ಮಲ್ಲೇನಹಳ್ಳಿ http://mallenahallipages.blogspot.com/

(ಚಿತ್ರ ಕೃಪೆ http://www.ganeshaonline.com/)

  • ಸಣ್ಣ ಕಥೆ
~.~
  • Login or register to post comments
  • 237 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 25, 2008 - 7:52pm — vallish Rao

ಉ: ಹೃದಯಬಿಚ್ಚಿ ಲೇಖನವೊಂದನ್ನು ಬರೆದಾಗ (ಭಾಗ 3)..

vallish Rao's picture

ಸುನಿಲ್ ಅವರೆ, ಮೊದಲನೆ ಅಂಕಣ ಸಸ್ಪೆನ್ಸ್ ಇತ್ತು. ಎರಡನೆಯದು ಓ ಕೆ. ಮೂರನೆಯ ಅಂಕಣದಲ್ಲಿ ಓಡಿಸಿಬಿಟ್ಟಿದ್ದೀರಿ. ಅಷ್ಟು ಬೇಗ ಪ್ರೀತಿ ವ್ಯಕ್ತಮಾಡಿ, ಹುಡುಗಿ ಆಗೋಲ್ಲ ಎಂದು ಎದ್ದು ಹೊಗಿದ್ದೂ ಆಯ್ತು.
ದೀಪಾ.... ನಮ್ಮ ಸುನಿಲ್ ಅಯ್ಯೊ ಪಾಪ....ಕರುಣೆ ತೋರಿಸಬಾರದಾ ಸ್ವಲ್ ಪಾ......

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೃದಯ ಬಿಚ್ಚಿ ಲೇಖನವೊಂದನ್ನು ಬರೆದಾಗ (ಭಾಗ 2)
  • ಮರಳಿ ಗೂಡಿಗೆ ಬಂತು ಮರಿ ಹಕ್ಕಿ
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ಒಂದು ಚಿಕ್ಕ ಕಥೆ (ಆದರೆ ತುಂಬಾ ಅರ್ಥ ಪೂರ್ಣ ಖಂಡಿತವಾಗಿಯೂ ಓದಲೇಬೇಕು ಅಂತ ಕರಾರು ಇಲ್ಲ....)
  • ಹೇ ಚಂದ್ರನೇ...
Syndicate content

ಲೇಖಕರು

sunilkumara.ms's picture

ಪೂರ್ಣ ಹೆಸರು
ಸುನಿಲ್ ಮಲ್ಲೇನಹಳ್ಳಿ

ಪರಿಚಯ

ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟಾಜ್, ಒಬೆರಾಯ್ ಹೋಟೆಲ್ ಗಳು, ನಾ. ಹೌಸ್, ಹಾಗೂ ಸಿ.ಎಸ್. ಟಿ, ಕಾಮಾ ಆ, ಗಳಲ್ಲಿ ಆದ ನರಮೇಧ, ಹಾಸ್ಟೇಜಸ್ ಗಳ ಆಕ್ರಂದನಗಳಿಂದಲೂ ..ನಿಷ್ಕ್ರಿಯತೆ ?
  • ಹಿರಿಯರ ಆಸೆ
  • ನಿಮ್ಮ ಚಿತ್ರದಲ್ಲಿ "Rules of Thirds"ನ ಪ್ರಯೋಗ
  • ಸ್ಥಿತಪ್ರಜ್ಞ
  • ಕಾಡುಹಂದಿ ಮತ್ತು ಮೈಕಲ್ ಜಾಕ್ಸನ್!
  • ರಾಕೆಟ್, ಟೆಲಿಸ್ಕೋಪ್ ಸಂಶೋಧನೆಯಾಗುವ ಮುಂಚೆಯೇ ಭಾರತೀಯರಿಗೆ ತಿಳಿದ್ದಿದ್ದವೇ?
  • ಇತಿಹಾಸದಿಂದ ಪಾಠ ಕಲಿಯದೇ..ಭವಿಷ್ಯದಲ್ಲಿ ನಾವು ಇತಿಹಾಸ ನಿರ್ಮಿಸಬಲ್ಲೆವೇ?

ಇತ್ತೀಚಿನ ಪ್ರತಿಕ್ರಿಯೆಗಳು

  • olnswamy
    ಉ: ಇಂದು ಓದಿದ ವಚನ:ಎಲ್ಲ ಹೂವೂ ಹಣ್ಣಾಗುವುದಿಲ್ಲ: ಜೇಡರ ದಾಸಿಮಯ್ಯ
    December 5, 2008 - 5:15am
  • halaswamyrs
    ಉ: ಹಿರಿಯರ ಆಸೆ
    December 5, 2008 - 2:49am
  • ajitmb
    ಉ: ನಿಮ್ಮ ಚಿತ್ರದಲ್ಲಿ "Rules of Thirds"ನ ಪ್ರಯೋಗ
    December 5, 2008 - 1:10am
  • manjunath s reddy
    ಉ: ಚಿಪ್ಸ್ ಮತ್ತು ಸಿಗರೇಟು
    December 5, 2008 - 1:00am
  • hamsanandi
    ಉ: ಭಯೋತ್ಪಾದಕರಿಗೆ ಜೈ
    December 5, 2008 - 12:56am
  • manjunath s reddy
    ಉ: ಸೀರೆಯುಟ್ಟ ನೀರೆ
    December 5, 2008 - 12:56am
  • rasikathe
    ಉ: ನಾನೊಬ್ಬ ಸಿಗರೇಟು
    December 5, 2008 - 12:45am
  • kalpana
    ಉ: ಚಿಪ್ಸ್ ಮತ್ತು ಸಿಗರೇಟು
    December 5, 2008 - 12:43am
  • ಗಣೇಶ
    ಉ: ಭಯೋತ್ಪಾದಕರಿಗೆ ಜೈ
    December 5, 2008 - 12:42am
  • kalpana
    ಉ: ಭಯೋತ್ಪಾದಕರಿಗೆ ಜೈ
    December 5, 2008 - 12:41am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 164 ಅತಿಥಿಗಳು ಆನ್ಲೈನ್ ಇರುವರು.


ಸತ್ತೆನೆಂದೆನಬೇಡ; ಸೋತೆನೆಂದೆನಬೇಡ ।
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।।
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು ।
ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator