ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ೯ : ಸೂತ್ರ ಪಠಣ

August 15, 2005 - 2:41am — olnswamy

ರೈತನೊಬ್ಬನ ಹೆಂಡತಿ ಸತ್ತು ಹೋಗಿದ್ದಳು. ಮಂತ್ರಗಳನ್ನು ಹೇಳುವುದಕ್ಕೆ ಆ ರೈತ ಬೌದ್ಧ ಸಂನ್ಯಾಸಿಯನ್ನು ಕರೆಸಿದ್ದ.
ಸಂನ್ಯಾಸಿ ಸೂತ್ರಗಳನ್ನು ಪಠಿಸಿದ. ಎಲ್ಲ ಮುಗಿದ ಮೇಲೆ “ಹೀಗೆ ಮಂತ್ರಗಳನ್ನು ಹೇಳಿದ್ದರಿಂದ ನನ್ನ ಹೆಂಡತಿಗೆ ಪುಣ್ಯ ದೊರೆಯುತ್ತದೆಯೇ” ಎಂದು ಕೇಳಿದ ರೈತ.
“ನಿನ್ನ ಹೆಂಡತಿಗೆ ಮಾತ್ರವಲ್ಲ, ಈ ಜಗತ್ತಿನ ಎಲ್ಲ ಮನುಷ್ಯರಿಗೂ ಜೀವರಾಶಿಗಳೆಲ್ಲಕ್ಕೂ ಒಳ್ಳೆಯದಾಗುತ್ತದೆ” ಎಂದ ಸಂನ್ಯಾಸಿ.
“ಅಯ್ಯೋ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದರೆ ಹೇಗೆ? ನನ್ನ ಹೆಂಡತಿ ಬಹಳ ವೀಕಾಗಿದ್ದಳು. ಅವಳಿಗೆ ಸಿಗಬೇಕಾದ ಪುಣ್ಯವನ್ನು ಬೇರೆಯವರು ಕಿತ್ತುಕೊಂಡುಬಿಡುತ್ತಾರೆ. ಕೇವಲ ಅವಳಿಗಷ್ಟೇ ಲಾಭವಾಗುವಂಥ ಮಂತ್ರ ಹೇಳಿ” ಎಂದ ರೈತ.
“ಹಾಗಲ್ಲ, ಎಲ್ಲ ಜೀವಿಗಳಿಗೂ ಲೇಸು ಬಯಸುವುದು ಬೌದ್ಧ ಧರ್ಮದ ಉದ್ದೇಶ, ಅದಕ್ಕೇ ನಾವು ಮಂತ್ರಗಳನ್ನು ಹೇಳುತ್ತೇವೆ” ಎಂದು ಸಂನ್ಯಾಸಿ ವಿವರಿಸಿದ.
“ಉದ್ದೇಶವೇನೋ ಚೆನ್ನಾಗಿದೆ. ಆದರೆ ದಯವಿಟ್ಟು ಒಂದು ಸಣ್ಣ ಬದಲಾವಣೆ ಮಾಡಿಕೊಳ್ಳಿ. ನಮ್ಮ ಪಕ್ಕದ ಮನೆಯವನಿದ್ದಾನಲ್ಲ ಅವನು ಬಹಳ ದುಷ್ಟ, ನನಗೆ ತುಂಬ ತೊಂದರೆ ಕೊಟ್ಟಿದ್ದಾನೆ. ಅವನೊಬ್ಬನನ್ನು ಬಿಟ್ಟು ಉಳಿದ ಜೀವರಾಶಿಗಳಿಗೆಲ್ಲ ಒಳ್ಳೆಯದಾಗಲಿ ಎಂದು ಮಂತ್ರ ಹೇಳಿ” ಎಂದು ರೈತ ಕೋರಿಕೊಂಡ.

‹ ಝೆನ್ ೭ : ಎಶುನ್ಳ ಅಂತ್ಯಕಾಲಮೇಲಿನ ಪುಟಕ್ಕೆಝೆನ್: ೩: ಒಂದು ಹನಿ ›
  • ಕಥಾ ಮಾಲಿಕೆ
  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • Printer-friendly version
  • Login or register to post comments
  • 1313 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 18, 2005 - 5:38pm — pavanaja

ಕಥೆ ಅರ್ಧದಲ್ಲಿ ನಿಂತಂತಿದೆ

pavanaja's picture

ಈ ಕಥೆ ಯಾಕೋ ಅರ್ಧದಲ್ಲೇ ನಿಂತ ಹಾಗಿದೆಯಲ್ಲಾ?

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 31, 2005 - 4:41pm — olnswamy

ಪೂರ್ತಿ ಅಗಿದೆಯಲ್ಲ!

olnswamy's picture

ರೈತನ ಸಂಕುಚಿತ ಭಾವನೆ ಸ್ಪಷ್ಟವಾಗುತ್ತದೆ. ಎಲ್ಲರಿಗೂ ಒಳ್ಳೆಯದಾಗಲಿ, ಆದರೆ ನನ್ನ ಪಕ್ಕದ ಮನೆಯವನಿಗೆ ಮಾತ್ರ ಬೇಡ. ಎಷ್ಟೇ ಧರ್ಮಿಷ್ಟರೆಂದುಕೊಂಡರೂ ಸ್ವಾರ್ಥದ ಸಂಕುಚಿತತೆ ಇದ್ದೇ ಇರುತ್ತದೆ ಎಂಬುದನ್ನು ಸೂಚಿಸಿದ ಕೂಡಲೆ ಕತೆ ಮುಗಿದದ್ದು ನ್ಯಾಚುರಲ್ ಅಲ್ಲವೆ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ಕತೆ ೧೩: ಮೌನ ದೇವಾಲಯ
  • ಬರೆಯಲೇಗೆ ಪ್ರೇಮ ಪತ್ರ..!!
  • ಝೆನ್ ಕತೆಗಳು ೧೨: ಆರಿಹೋದ ದೀಪ
  • ನೆದೇರ್ಲಂಡ್ಸ್ ಚಲನಚಿತ್ರೋತ್ಸವ - ಕನ್ನಡ ಸಿನೆಮಾ
  • ಝೆನ್ ೭ : ಎಶುನ್ಳ ಅಂತ್ಯಕಾಲ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ -ಮೆಕ್ಕೆಜೋಳ ಕೃಷಿ-ಪ್ರಾಯೋಗಿಕಾ ಕ್ಷೇತ್ರ’ !
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 135 ಅತಿಥಿಗಳು ಆನ್ಲೈನ್ ಇರುವರು.


ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator