ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮುಲ್ಲಾ ನಸ್ರುದ್ದೀನ್:೬.ಸಾಗಿಸಿದ್ದು ಏನು? ೭. ಅದ್ಭುತವಾದ ಬೇಟೆ ೮. ಮುಖವನ್ನು ಕದ್ದಾರು

September 24, 2005 - 7:44am — olnswamy

೬ ಸಾಗಿಸಿದ್ದು ಏನು?

ಮುಲ್ಲಾ ದಿನವೂ ತನ್ನ ಕತ್ತೆಯನ್ನು ಗಡಿಯಾಚೆಗೆ ಒಯ್ಯುತ್ತಿದ್ದ. ಕತ್ತೆಯ ಬೆನ್ನ ಮೇಲೆ ಒಣ ಹುಲ್ಲಿನ ಮೂಟೆಗಳಿರುತ್ತಿದ್ದವು. ಗಡಿಯ ಕಾವಲು ಕಾಯುವವರ ಬಳಿ ತಾನು ಕಳ್ಳಸಾಗಾಣಿಕೆ ಮಾಡುತ್ತಿದ್ದೇನೆ ಎಂದು ನಿಜ ಹೇಳುತ್ತಿದ್ದ. ಅವರು ಮೂಟೆಯ ಹುಲ್ಲನ್ನೆಲ್ಲ ಪರೀಕ್ಷಿಸುತ್ತಿದ್ದರು. ಅವನನ್ನೂ ತಪಾಸಣೆ ಮಾಡುತ್ತಿದ್ದರು. ಏನೂ ಇರುತ್ತಿರಲಿಲ್ಲ. ಮುಲ್ಲಾ ತಾನು ಕಳ್ಳಸಾಗಾಣಿಕೆ ಮಾಡುತ್ತಿದ್ದೇನೆ ಎಂದು ಹೇಳುವುದನ್ನೂ ಬಿಡಲಿಲ್ಲ. ಕೆಲವೊಮ್ಮೆ ಹುಲ್ಲನ್ನು ನೀರಲ್ಲಿ ಮುಳುಗಿಸಿ, ಹಲವೊಮ್ಮೆ ಹುಲ್ಲನ್ನು ಸುಟ್ಟು ಕೂಡ ನೋಡಿದರು. ಏನೂ ಸಿಗಲಿಲ್ಲ. ಮುಲ್ಲಾ ಮಾತ್ರ ಶ್ರೀಮಂತನಾಗುತ್ತ ನಡೆದ. ಕೆಲವು ವರ್ಷಗಳ ನಂತರ ಮುಲ್ಲಾ ಬೇರೆ ರಾಜ್ಯಕ್ಕೆ ಹೋದ. ಅಲ್ಲಿ ಹಿಂದೆ ಗಡಿಯ ಕಾವಲು ಕಾಯುತ್ತಿದ್ದ ಅಧಿಕಾರಿ ಭೇಟಿಯಾದ. “ಮುಲ್ಲಾ, ನೀನು ಆ ದೇಶದಲ್ಲಿದ್ದಾಗ ಅದೇನು ಕಳ್ಳ ಸಾಗಾಣಿಕೆ ಮಾಡುತ್ತಿದ್ದೆ? ನಾವು ಎಷ್ಟು ಹುಡುಕಿದರೂ ಸಿಗುತ್ತಿರಲಿಲ್ಲವಲ್ಲ, ದಯವಿಟ್ಟು ಹೇಳು” ಎಂದು ಕೇಳಿದ. ಮುಲ್ಲಾ “ನಾನು ದಿನವೂ ಕತ್ತೆಗಳನ್ನು ಬೇರೆ ರಾಜ್ಯಕ್ಕೆ ತೆಗೆದುಕೊಂಡು ಹೋಗಿ ಮಾರುತ್ತಿದ್ದೆ” ಎಂದ.

೭ ಅದ್ಭುತವಾದ ಬೇಟೆ

ರಾಜನಿಗೆ ಮುಲ್ಲಾನನ್ನು ಕಂಡರೆ ಬಲು ಪ್ರೀತಿ. ಒಮ್ಮೆ “ಮುಲ್ಲಾ, ನೀನಿವತ್ತು ನನ್ನೊಡನೆ ಕರಡಿ ಬೇಟೆಗೆ ಬರಲೇ ಬೇಕು” ಎಂದು ಆಜ್ಞೆ ಮಾಡಿದ. ಮುಲ್ಲಾನಿಗೋ ಪ್ರಾಣ ಹೋಗುವಷ್ಟು ಭಯ. ಬೇಟೆ ಮುಗಿಸಿಕೊಂಡು ಮುಲ್ಲಾ ತನ್ನ ಹಳ್ಳಿಗೆ ಹಿಂದಿರುಗಿದ. ಅವನ ಗೆಳೆಯರು ಕೇಳಿದರು” “ಮುಲ್ಲಾ, ಕರಡಿ ಬೇಟೆ ಹೇಗಿತ್ತು?” “ಬಹಳ ಅದ್ಭುತವಾಗಿತ್ತು” ಎಂದ ಮುಲ್ಲಾ. “ಎಷ್ಟು ಕರಡಿ ನೋಡಿದೆ?” ಎಂದರು. “ಒಂದೂ ಕಾಣಲಿಲ್ಲ” ಎಂದ ಮುಲ್ಲಾ. “ಮತ್ತೆ ಅದ್ಭುತವಾದ ಬೇಟೆ ಅಂದೆಯಲ್ಲ?” “ಮತ್ತಿನ್ನೇನು! ನೀವು ಕರಡಿ ಬೇಟೆಗೆ ಹೋದಿರಿ ಅಂತ ಇಟ್ಟುಕೊಳ್ಳಿ. ನೀವು ನನ್ನಂಥ ಪುಕ್ಕಲ ಅಂತ ಇಟ್ಟುಕೊಳ್ಳಿ. ಒಂದು ಕರಡಿಯನ್ನೂ ನೋಡದಿರುವುದು ನಿಜವಾಗಿ ಅದ್ಭುತವಲ್ಲವೇ?” ಎಂದ ಮುಲ್ಲಾ.

೮ ಮುಖವನ್ನು ಕದ್ದಾರು, ಜೋಕೆ

ದಾನವನ್ನು ಕೇಳಲೆಂದು ಮುಲ್ಲಾ ಶ್ರೀಮಂತನೊಬ್ಬನ ಮನೆಗೆ ಹೋಗಿದ್ದ. ಮನೆಯ ಸೇವಕಿ ಹೊರಗೆ ಬಂದು “ಯಜಮಾನರು ಮನೆಯಲ್ಲಿಲ್ಲ” ಎಂದಳು. “ಸರಿ ಬಿಡು. ನಿಮ್ಮ ಮನೆಯ ಒಡೆಯರು ದಾನ ಕೊಡದಿದ್ದರೂ ಪರವಾಗಿಲ್ಲ. ಅವರಿಗೆ ಒಂದು ಉಪದೇಶ ಹೇಳುವುದಿದೆ, ಅವರು ಬಂದಾಗ ಹೇಳು. ‘ಮುಂದಿನ ಬಾರಿ ಹೊರಗೆ ಹೋಗುವಾಗ ನಿಮ್ಮ ಮುಖವನ್ನು ಕಿಟಕಿಯಲ್ಲಿ ಬಿಟ್ಟು ಹೋಗಬೇಡಿ, ಯಾರಾದರೂ ಕದ್ದು ಬಿಡುತ್ತಾರೆ’ ಎಂದು ಹೇಳಿದೆ ಅಂತ ತಿಳಿಸಿಬಿಡು” ಅಂದ ಮುಲ್ಲಾ.

  • ಮುಲ್ಲಾ ನಸ್ರುದ್ದೀನ್ ಕತೆಗಳು (ಕಥಾ ಮಾಲಿಕೆ)
~.~
  • Login or register to post comments
  • 1104 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಲ್ಲಾ ಕತೆ: ೩: ಆಚೆ ಈಚೆ ೪: ಒಂಟೆ ೫: ಕತ್ತೆ ಮನುಷ್ಯ
  • ಮುಲ್ಲಾ ಕಥೆ: ಊಟಕ್ಕೆ ಬಂದ ವಿದ್ವಾಂಸ
  • ಝೆನ್ ಕತೆ: ಯಾರಿಗೆ ಗೊತ್ತು?
  • ಮುಲ್ಲಾ ಕಥೆಗಳು: ೯: ಯಾರೂ ಅಲ್ಲ!
  • ಮುಲ್ಲಾ ನಸ್ರುದ್ದೀನ್
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 137 ಅತಿಥಿಗಳು ಆನ್ಲೈನ್ ಇರುವರು.


"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator