ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ಬಳ್ಳಿಗಾವಿಯ ದೇವಾಲಯಗಳು

March 4, 2008 - 1:14am — rajeshnaik111

ಸ್ಥಳ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳಿಗಾವಿ.

ಕಲ್ಯಾಣಿ ಚಾಲುಕ್ಯರ ದಕ್ಷಿಣ ಭಾಗದ ನಾಡಿನ ರಾಜಧಾನಿಯಾಗಿತ್ತು ಬಳ್ಳಿಗಾವಿ. ಶಿರಾಳಕೊಪ್ಪದಿಂದ ೩ ಕಿಮಿ ದೂರ ಇರುವ ಈ ಪುಟ್ಟ ಊರು ಚಾಲುಕ್ಯ ಮತ್ತು ಹೊಯ್ಸಳ ಕಾಲದ ಹಲವು ದೇವಾಲಯಗಳನ್ನು ಹೊಂದಿದೆ. ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು ಬಳ್ಳಿಗಾವಿ.

ಶಿರಾಳಕೊಪ್ಪದಿಂದ ಕೆರೆಯ ಬದಿಯಲ್ಲೇ ಬರುವಾಗ ಮೊದಲಿಗೆ ಗೋಚರಿಸುವುದು ಕೇದಾರೇಶ್ವರ ದೇವಸ್ಥಾನ. ಈ ದೇವಸ್ಥಾನದಲ್ಲಿರುವ ಲಿಂಗವನ್ನು ಚಾಲುಕ್ಯರು ಪ್ರತಿಷ್ಠಾಪಿಸಿದರೆ, ನಂತರ ಇಸವಿ ೧೦೫೯ರಲ್ಲಿ ದೇವಾಲಯವನ್ನು ತ್ರಿಕೂಟಾಚಲ ಶೈಲಿಯಲ್ಲಿ ನಿರ್ಮಿಸಿ ಪೂರ್ಣಗೊಳಿಸಿದವರು ಹೊಯ್ಸಳರು. ಸಳ ಮಹಾರಾಜ ಹುಲಿ ಕೊಲ್ಲುವ ದೃಶ್ಯದ ಕೆತ್ತನೆ ಪ್ರಮುಖ ಗರ್ಭಗುಡಿಯ ಗೋಪುರದ ಮುಂಭಾಗದಲ್ಲಿ ರಾರಾಜಿಸುತ್ತಿದೆ. ಈ ದೇವಾಲಯದ ಮುಖಮಂಟಪ ದೇವಾಲಯಕ್ಕೆ ತಾಗಿಕೊಂಡು ಇಲ್ಲ. ಮುಖಮಂಟಪ ಮತ್ತು ದೇವಾಲಯಕ್ಕೆ ಸುಮಾರು ೧೫ ಅಡಿಗಳ ಅಂತರವಿದೆ. ಸಾಧಾರಣವಾಗಿರುವ ೧೬ ಕಂಬಗಳ ಮುಖಮಂಟಪವನ್ನು ದಾಟಿ ಬಂದರೆ ದೇವಾಲಯದ ಸುಖನಾಸಿಯೊಳಗೆ ಪ್ರವೇಶ. ಸುಖನಾಸಿಯ ಆರಂಭದಲ್ಲೇ ನಂದಿ ಆಸೀನನಾಗಿದ್ದಾನೆ. ಹೆಚ್ಚಾಗಿ ನಂದಿ ಮುಖಮಂಟಪದ ಆಸುಪಾಸಿನಲ್ಲಿ ಇರುತ್ತದಾದರೂ, ಈ ದೇವಾಲಯ ಒಂದು ಅಪವಾದ.

ಸುಖನಾಸಿಯ ನಂತರ ೪೪ ಕಂಬಗಳ ನವರಂಗ. ನಂತರ ಅಂತರಾಳ ಮತ್ತು ಪ್ರಮುಖ ಗರ್ಭಗುಡಿ. ಗರ್ಭಗುಡಿಯಲ್ಲಿ ಕೇದಾರೇಶ್ವರ ಲಿಂಗ. ಎಡಕ್ಕಿರುವ ಗರ್ಭಗುಡಿಯಲ್ಲಿ ವಿಷ್ಣುವಿನ ವಿಗ್ರಹ ಮತ್ತು ಬಲಕ್ಕಿರುವ ಗರ್ಭಗುಡಿಯಲ್ಲಿ ಬ್ರಹ್ಮೇಶ್ವರ ಲಿಂಗವಿದೆ. ನವರಂಗದಲ್ಲಿ ೨೫ಕ್ಕೂ ಅಧಿಕ ಚಾಲುಕ್ಯ ಶೈಲಿಯ ಪ್ರತಿಬಿಂಬ ನೇರವಾಗಿಯೂ ತಲೆಕೆಳಗಾಗಿಯೂ ಕಾಣುವ ಕಂಬಗಳು. ಒತ್ತೊತ್ತಾಗಿ ನಿಲ್ಲಿಸಲಾಗಿರುವ ಈ ಕಂಬಗಳ ಸಮೂಹವನ್ನು ನೋಡುವುದೇ ಚಂದ. ಈ ದೇವಾಲಯವು ಪ್ರಸಿದ್ಧ ಶಿಕ್ಷಣ ಕೇಂದ್ರವಾಗಿತ್ತು.

ಕೇದಾರೇಶ್ವರ ದೇವಾಲಯದ ಪಕ್ಕದಲ್ಲಿರುವುದೇ ಅಲ್ಲಮ ಪ್ರಭು ದೇವಾಲಯ. ಬಳ್ಳಿಗಾವಿ ಅಲ್ಲಮ ಪ್ರಭು ಜನಿಸಿದ ಸ್ಥಳ. ಈ ಗುಡಿಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ್ದರೂ, ಪ್ರಖ್ಯಾತ ವಚನಕಾರ ಅಲ್ಲಮ ಪ್ರಭು ತನ್ನ ಹೆಚ್ಚಿನ ಸಮಯವನ್ನು ಇದೇ ಗುಡಿಯಲ್ಲಿ ಕಳೆಯುತ್ತಿದ್ದರಿಂದ ಆತನ ಹೆಸರಿಂದಲೇ ಈ ಗುಡಿಯನ್ನು ಗುರುತಿಸಲಾಗುತ್ತದೆ. ಅಲ್ಲಮ ಪ್ರಭು ದೇವಾಲಯ ಎಂದು ಕರೆಯುವ ಮೊದಲು, ಗೋಪುರರಹಿತ ತ್ರಿಕೂಟಾಚಲ ರಚನೆಯುಳ್ಳ ಈ ದೇವಾಲಯವನ್ನು ನಗರೇಶ್ವರ ದೇವಾಲಯವೆಂದು ಕರೆಯಲಾಗುತ್ತಿತ್ತು ಮತ್ತು ಬಳ್ಳಿಗಾವಿಯ ಮೂಲ ದೇವಸ್ಥಾನವೂ ಇದೇ. ಪಟ್ಟದಕಲ್ಲಿನ ವ್ಯಾಪಾರಿ ಸಮುದಾಯದವರಾದ ವೀರ ಬಣಂಜರು ೧೨ನೇ ಶತಮಾನದಲ್ಲಿ ನಗರೇಶ್ವರ ದೇವಾಲಯವನ್ನು ನಿರ್ಮಿಸಿದರು ಎಂದು ಶಾಸನಗಳು ತಿಳಿಸುತ್ತವೆ. ಪುಟ್ಟದಾಗಿರುವ ಈ ದೇಗುಲ ಮುಖಮಂಟಪ, ನವರಂಗ ಮತ್ತು ೩ ಗರ್ಭಗುಡಿಗಳನ್ನು ಹೊಂದಿದೆ.

ಬಳ್ಳಿಗಾವಿ ಊರಿನ ಮಧ್ಯದಲ್ಲಿರುವುದು ತ್ರಿಪುರಾಂತಕೇಶ್ವರ ದೇವಾಲಯ. ಹೊರಗಿನಿಂದ ನೋಡಿದರೆ ಏನೂ ವಿಶೇಷವಿಲ್ಲದಂತೆ ತೋರುವ ಈ ದೇವಸ್ಥಾನ ಒಳಹೊಕ್ಕರೆ ವಿಸ್ಮಯಗಳ ರಾಶಿಯನ್ನೇ ಕಣ್ಣೆದುರಿಗೆ ಇಡುತ್ತದೆ. ಸಂಪೂರ್ಣವಾಗಿ ಕುಸಿದಿದ್ದ ಈ ದೇವಸ್ಥಾನವನ್ನು ಭಾರತೀಯ ಪುರಾತತ್ವ ಇಲಾಖೆ ಮೂಲ ರಚನೆಗೆ ತಕ್ಕಂತೆ ಪುನ: ನಿರ್ಮಿಸಿದೆ. ಹಾಗಿದ್ದರೂ ದೇವಾಲಯ ಕುಸಿದು ಬಿದ್ದಿರುವಂತೆಯೇ ತೋರುತ್ತದೆ. ಹಾಗೆಂದುಕೊಂಡೇ ದೇವಾಲಯದ ಸಮೀಪ ತೆರಳಿದ ನಮಗೆ, ಸಂಪೂರ್ಣವಾಗಿ ಕುಸಿದಿದ್ದನ್ನು ಈ ಮಟ್ಟಕ್ಕೆ ಪುನ: ನಿರ್ಮಿಸಲಾಗಿದೆ ಎಂದು ಅಲ್ಲಿನ ಉದ್ಯೋಗಿ ತಿಳಿಸಿದರು.

ತ್ರಿಪುರಾಂತಕೇಶ್ವರ ದೇವಾಲಯವನ್ನು ಇಸವಿ ೧೦೩೯ರಲ್ಲಿ ನಿರ್ಮಿಸಲಾಗಿತ್ತು. ಹೊಯ್ಸಳ ಶೈಲಿಯ ನಕ್ಷತ್ರಾಕಾರದ ಅಡಿಪಾಯ ಈ ದೇವಾಲಯಕ್ಕಿದೆ. ೨ ದ್ವಾರಗಳಿರುವ ಈ ದೇವಸ್ಥಾನದ ಪ್ರಮುಖ ದ್ವಾರ ಯಾವುದೆಂದು ತಿಳಿದುಕೊಳ್ಳುವುದೇ ಸಮಸ್ಯೆ. ನಂತರ ನಂದಿ ಇದ್ದ ದ್ವಾರವೇ ಪ್ರಮುಖ ದ್ವಾರ ಎಂದು ತಿಳಿದುಬಂತು. ಇದೊಂದು ವಿಚಿತ್ರ ಶೈಲಿಯ ತ್ರಿಕೂಟಾಚಲ ದೇವಸ್ಥಾನ. ಎಲ್ಲಾ ತ್ರಿಕೂಟಾಚಲ ದೇವಸ್ಥಾನಗಳು ಅಂಗ್ಲ ಅಕ್ಷರಮಾಲಿಕೆಯ 'ವಿ' ಆಕಾರದಲ್ಲಿದ್ದರೆ, ಈ ದೇವಾಲಯ 'ಎಲ್' ಆಕಾರದಲ್ಲಿತ್ತು!

ನಂದಿ ಮುಖ ಮಾಡಿ ನಿಂತಿರುವ ಪ್ರಮುಖ ಗರ್ಭಗುಡಿಯಲ್ಲಿ ಶಿವಲಿಂಗವಿದೆ. ಇದರ ಬಲಕ್ಕೆ ತ್ರಿಕೂಟಾಚಲ ಶೈಲಿಗೆ ತಕ್ಕಂತೆ ಇರುವ ಗರ್ಭಗುಡಿಯಲ್ಲಿ ವಿಷ್ಣುವಿನ ವಿಗ್ರಹವಿದೆ. ತ್ರಿಕೂಟಾಚಲ ರಚನೆಯಂತೆ ಪ್ರಮುಖ ಗರ್ಭಗುಡಿಯನ್ನು ಹೊರತುಪಡಿಸಿ ಉಳಿದೆರಡು ಗರ್ಭಗುಡಿಗಳು ಎದುರುಬದುರಾಗಿರಬೇಕು.

ಆದರೆ ಈ ೩ನೇ ಗರ್ಭಗುಡಿ, ವಿಷ್ಣು ಇರುವ ಗರ್ಭಗುಡಿಗೆ ಮುಖ ಮಾಡಿರುವುದರ ಬದಲಾಗಿ ಪ್ರಮುಖ ಗರ್ಭಗುಡಿಗೆ ತಾಗಿಕೊಂಡೇ ಇದೆ ಮತ್ತು ನಂದಿ ಇರುವ ದಿಕ್ಕಿಗೇ ಮುಖಮಾಡಿಕೊಂಡು ಇದೆ!! ಇಷ್ಟೇ ಅಲ್ಲದೆ ಈ ೩ನೇ ಗರ್ಭಗುಡಿಗೆ ಬೇರೇನೆ ಆದ ನವರಂಗ ಮತ್ತು ಉಳಿದ ೨ ಗರ್ಭಗುಡಿಗಳಿಗೆ ಬೇರೇನೇ ನವರಂಗ. ಈ ದೇವಾಲಯದಲ್ಲಿ ೨ ನವರಂಗಗಳು! ಪ್ರಮುಖ ಶಿವಲಿಂಗ ಮತ್ತು ವಿಷ್ಣು ಇರುವ ಗರ್ಭಗುಡಿಗಳ ನವರಂಗವನ್ನು ನಾಟ್ಯರಂಗವೆಂದೂ, ೩ನೇ ಗರ್ಭಗುಡಿಯ ಮುಂದಿರುವ ನವರಂಗವನ್ನು ಸಭಾರಂಗವೆಂದೂ ಕರೆಯುತ್ತಾರೆ. ದೇವಾಲಯದ ಪ್ರಮುಖ ದ್ವಾರ ತೆರೆದುಕೊಳ್ಳುವುದು ನಾಟ್ಯರಂಗಕ್ಕೆ. ನಾಟ್ಯರಂಗದಿಂದ ಸಭಾರಂಗಕ್ಕೆ ಬರಲು ದ್ವಾರವಿದೆ. ಈ ದ್ವಾರದಲ್ಲಿ ಸುಂದರವಾಗಿ ಕೆತ್ತಲಾಗಿರುವ 'ದ್ವಾರಪಾಲಕಿ'ಯರಿದ್ದಾರೆ. ದ್ವಾರಪಾಲಕಿಯರ ಬದಿಯಲ್ಲಿರುವ ಕಿಟಕಿಗಳ ಮೇಲೆ ಕೆತ್ತನೆ ಅದ್ಭುತ. ನಾಟ್ಯರಂಗದಿಂದ ೨ ಗರ್ಭಗುಡಿಗಳಿಗೆ ಮತ್ತು ಸಭಾರಂಗಕ್ಕೆ ತೆರೆದುಕೊಳ್ಳುವ ದ್ವಾರಗಳು ೫ ತೋಳಿನವು. ಪ್ರತಿ ತೋಳಿನಲ್ಲೂ ಉನ್ನತ ಮಟ್ಟದ ಕೆತ್ತನೆ ಕೆಲಸ.

ಇದೊಂದು ಮೂಲತ: ದ್ವಿಕೂಟ ರಚನೆಯಾಗಿದ್ದು, ೩ನೇ ಗರ್ಭಗುಡಿಯನ್ನು ನಂತರ ಸೇರಿಸಲಾಗಿದೆ ಎಂಬ ಮಾತೂ ಇದೆ. ದೇವಾಲಯದ ವಿಚಿತ್ರ ತ್ರಿಕೂಟ ರಚನೆಯನ್ನು ಗಮನಿಸಿದರೆ ಈ ವಾದವನ್ನು ತಳ್ಳಿಹಾಕುವಂತಿಲ್ಲ. ಸಾಮಾನ್ಯವಾಗಿ ತ್ರಿಕೂಟ ರಚನೆಯಲ್ಲಿ ಒಂದೇ ನವರಂಗವಿರುತ್ತದೆ ಮತ್ತು ೩ ಗರ್ಭಗುಡಿಗಳು ಈ ನವರಂಗಕ್ಕೇ ತೆರೆದುಕೊಳ್ಳುತ್ತವೆ. ಇಲ್ಲಿ ೨ ಗರ್ಭಗುಡಿಗಳು ಮಾತ್ರ ನವರಂಗಕ್ಕೆ ತೆರೆದುಕೊಳ್ಳುತ್ತವೆ. ನಂತರ ನಿರ್ಮಿಸಲಾದ ೩ನೇ ಗರ್ಭಗುಡಿಗೆ ಬೇರ್‍ಏನೆ ನವರಂಗವನ್ನು ನಿರ್ಮಿಸಿರುವಂತೆ ಕಾಣಬರುತ್ತದೆ ಮತ್ತು ದ್ವಿಕೂಟ ದೇವಾಲಯದ ಎರಡನೇ ದ್ವಾರವನ್ನು ಈ ನವರಂಗಕ್ಕೆ ತೆರೆದುಕೊಳ್ಳುವಂತೆ ಮಾಡಲಾಗಿದೆ. ಮೇಲ್ನೋಟಕ್ಕೆ ಈ ವಾದವೇ ಸರಿ ಎಂದು ಕಾಣಬಹುದು. ಆದರೆ ಏನೇ ಇರಲಿ, ಪ್ರಾಚೀನ ದೇವಾಲಯಗಳಲ್ಲಿ ಆಸಕ್ತಿ ಇರುವವರಿಗೆ ಬಳ್ಳಿಗಾವಿಯ ತ್ರಿಪುರಾಂತಕೇಶ್ವರ ದೇವಾಲಯ ಒಂದು ಸೋಜಿಗ.

ತ್ರಿಪುರಾಂತಕೇಶ್ವರ ದೇವಾಲಯದ, ಪ್ರಮುಖ ಗರ್ಭಗುಡಿಯ ಅಂತರಾಳಕ್ಕೆ ತೆರೆದುಕೊಳ್ಳುವ ದ್ವಾರದ ಮೇಲೆ ಅತ್ಯದ್ಭುತ ಕೆತ್ತನೆ ಮತ್ತು ನಾಟ್ಯರಂಗದಲ್ಲಿ ೪ ಬೃಹತ್ ಪ್ರತಿಬಿಂಬ ನೇರವಾಗಿಯೂ ತಲೆಕೆಳಗಾಗಿಯೂ ಕಾಣುವ ಕಂಬಗಳಿವೆ. ನಾಲ್ಕು ಕಂಬಗಳಲ್ಲೂ ಪ್ರಭಾವಳಿಯಂತೆ ಬೇರೆ ಬೇರೆ ಕೆತ್ತನೆಗಳು. ಒಂದರಲ್ಲಿ ವಿಷ್ಣುವಿನ ಅವತಾರಗಳಿಗೆ ಸಂಬಂಧಿಸಿದ ಕೆತ್ತನೆಗಳು, ಇನ್ನೊಂದರಲ್ಲಿ ಶ್ರೀ ಕೃಷ್ಣನ ವಿವಿಧ ಲೀಲೆಗಳು, ಮತ್ತೊಂದರಲ್ಲಿ ಶಿವ, ಪಾರ್ವತಿ ಮತ್ತು ಷಣ್ಮುಖರ ಕೆತ್ತನೆಗಳು ಹಾಗೂ ಕೊನೆಯದರಲ್ಲಿ ಜೈನ ತೀರ್ಥಂಕರರ ಕೆತ್ತನೆಗಳು. ಈ ನಾಟ್ಯರಂಗದಲ್ಲೇ ಹೊಯ್ಸಳ ದೊರೆ ಬಿಟ್ಟಿದೇವ ತನ್ನ ಪ್ರಮುಖ ರಾಣಿ ಶಾಂತಲಾದೇವಿಯನ್ನು ಪ್ರಥಮ ಬಾರಿಗೆ ನೋಡಿದ್ದು!

ಅದೊಂದು ದಿನ ಬೇಲೂರಿಗೆ ಹಿಂತಿರುಗುತ್ತಿದ್ದ ಬಿಟ್ಟಿದೇವ, ಬಳ್ಳಿಗಾವಿಯಲ್ಲಿ ತಂಗಿದ್ದನು. ಮುಂಜಾನೆ ತ್ರಿಪುರಾಂತಕೇಶ್ವರ ದೇವಾಲಯದಿಂದ ಕೇಳಿಬರುತ್ತಿದ್ದ ತಾಳ, ರಾಗಗಳ ಸದ್ದಿಗೆ ದೇವಸ್ಥಾನದ ಕಡೆಗೆ ಬಂದ ಬಿಟ್ಟಿದೇವ ನಾಟ್ಯರಂಗದಲ್ಲಿ ನೃತ್ಯ ಮಾಡುತ್ತಿದ್ದ ಶಾಂತಲಾದೇವಿಯನ್ನು ಕಂಡು ಅವಳಲ್ಲಿ ಮೋಹಿತನಾದ. ಶಾಂತಲಾದೇವಿ ಬಳ್ಳಿಗಾವಿಯ ನಿವಾಸಿಯಾಗಿದ್ದಳು ಮತ್ತು ಆಕೆ ಒಬ್ಬ ಜೈನ ಧರ್ಮೀಯಳಾಗಿದ್ದಳು. ಬಿಟ್ಟಿದೇವ ಹಿಂದೂ ಧರ್ಮೀಯನಾಗಿದ್ದ. ತನ್ನನ್ನು ವರಿಸಬೇಕಾದರೆ ಜೈನ ಧರ್ಮಕ್ಕೆ ಮತಾಂತರಗೊಳ್ಳಬೇಕೆಂದು ಶಾಂತಲಾದೇವಿ ಬಿಟ್ಟಿದೇವನಲ್ಲಿ ಹೇಳಿದಾಗ, ಬಿಟ್ಟಿದೇವ ವಿಷ್ಣುವರ್ಧನನಾದ ಮತ್ತು ಶಾಂತಲಾದೇವಿ ಹೊಯ್ಸಳ ರಾಜ್ಯದ ಪ್ರಮುಖ ರಾಣಿಯಾದಳು.

ಸಭಾರಂಗದಲ್ಲೂ ಮತ್ತವೇ ಚಾಲುಕ್ಯ ಶೈಲಿಯ ೪ ಕಂಬಗಳಿವೆ. ಛಾವಣಿಯಲ್ಲಿ ಬೆರಗುಗೊಳಿಸುವ ಕೆತ್ತನೆ ಇದೆ. ತ್ರಿಪುರಾಂತಕೇಶ್ವರ ದೇವಾಲಯದ ಎದುರಿಗೇ ಸಭಾಮಂಟಪವಿದೆ. ಅಲ್ಲಿಂದ ಸ್ವಲ್ಪ ಮುಂದೆ ವೀರಭದ್ರಸ್ವಾಮಿ ದೇವಸ್ಥಾನವಿದೆ. ಇದು ಇತ್ತೀಚೆಗಿನ ದೇವಸ್ಥಾನ. ಆದರೆ, ಇಲ್ಲಿ ಹಸಿರು ಬಣ್ಣದ ಶಿವಲಿಂಗವೊಂದಿದೆ. ಈ ಶಿವಲಿಂಗ, ಪಚ್ಚೆ ನೀಲಕಂಠೇಶ್ವರ ದೇವಾಲಯದಲ್ಲಿತ್ತು. ಯಾರೋ ಅದನ್ನು ಕದ್ದೊಯ್ಯುತ್ತಿರುವಾಗ ಸಿಕ್ಕುಬಿದ್ದು, ಈಗ ಅದನ್ನು ಊರಿನ ದೇವಸ್ಥಾನದಲ್ಲಿ ಜೋಪಾನವಾಗಿ ಇಡಲಾಗಿದೆ. ತ್ರಿಪುರಾಂತಕೇಶ್ವರ ದೇವಾಲಯದಿಂದ ಸ್ವಲ್ಪ ಮುಂದೆ ಭೇರುಂಡೇಶ್ವರ ಸ್ತಂಭ ಅಥವಾ ವಿಜಯ ಸ್ತಂಭ ಇರುವುದು. ೩ ಮೀಟರ್ ಎತ್ತರದ ಪೀಠದ ಮೇಲೆ ಇರುವ ಈ ಸ್ತಂಭ ೯.೭೫ ಮೀಟರ್ ಎತ್ತರವಿದೆ. ಇದನ್ನು ಚಾಲುಕ್ಯ ದೊರೆ ತ್ರಿಲೋಕಮಲ್ಲನ ದಂಡನಾಯಕನಾಗಿದ್ದ ಚಾವುಂಡರಾಯ ಅರಸನು ತನ್ನ ವಿಜಯದ ಸ್ಮರಣಾರ್ಥ ನಿರ್ಮಿಸಿದ್ದಾನೆ.

  • ಪ್ರವಾಸ ಕಥನ
~.~
  • Login or register to post comments
  • 331 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 9, 2008 - 11:14pm — ಗಣೇಶ

ಉ: ಬಳ್ಳಿಗಾವಿಯ ದೇವಾಲಯಗಳು

ಗಣೇಶ's picture

ಅಲ್ಲಮಪ್ರಭು ಜನಿಸಿದ ಸ್ಥಳ ಬಳ್ಳಿಗಾವಿ.

ಶಾಂತಲಾದೇವಿಯನ್ನು ಬಿಟ್ಟಿದೇವ ಮೊದಲು ಭೇಟಿಯಾದ ಸ್ಥಳ ಬಳ್ಳಿಗಾವಿ.

ಒಂದಕ್ಕಿಂತ ಒಂದು ಸುಂದರ ದೇವಾಲಯಗಳನ್ನು ಹೊಂದಿರುವ ಸ್ಥಳ ಬಳ್ಳಿಗಾವಿ.

೨೪ ವರ್ಷಗಳಿಗೆ ಮೊದಲು ಬಳ್ಳಿಗಾವಿಗೆ ಹೋದವನು ಈ ದೇವಾಲಯಗಳನ್ನು ನೋಡಿ ಬಂದಿದ್ದೆ.
ದೇವಾಲಯಗಳ ಚಿತ್ರ ಕಣ್ಣಿಗೆ ಕಟ್ಟುವಂತೆ ಚೆನ್ನಾಗಿ ವಿವರಿಸಿದ್ದೀರಿ.
ರಾಜೇಶ್ ನಿಮಗೆ ವಂದನೆಗಳು,
ಗಣೇಶ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಲ್ಲೇಶ್ವರ ದೇವಾಲಯ - ಅಂಬಳಿ
  • ಸೋಮೇಶ್ವರ ದೇವಾಲಯ - ಹರಳಹಳ್ಳಿ
  • ಕಲ್ಲೇಶ್ವರ ದೇವಾಲಯ - ಬಾಗಳಿ
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಅಮೃತೇಶ್ವರ ದೇವಾಲಯ - ಅಣ್ಣಿಗೇರಿ
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
  • ಮುಂಬಯಿ ಘಟನೆಯ ಬಗ್ಗೆ "ಪ್ರಸೂನ್ ಜೋಶಿಯ" ಕವನ: ಈ ಬಾರಿ ಇಲ್ಲ
  • ಸಾವಿನ ಹತ್ತಿರ
  • ಸಕಲವೂ ಈಶ್ವರಮಯವಾದುದು
  • ನಿಟ್ಟೆ:ವಾರದ ಅಂತರದಲ್ಲಿ ಎರಡು ಅಂತಾರ್ರಾಷ್ಟ್ರೀಯ ಸಮಾವೇಶಗಳು
  • ನನ್ನ ತಪ್ಪೇ ಅಥವಾ ಸಿನಿಕತನವೇ?
  • ರಾಜಕಾರಣಿಗಳಿಗೆ ತಮ್ಮ ಅದ್ದೂರಿತನ ತೋರಿಸಿಕೊಳ್ಳುವ ಗೀಳಿದೆಯೇ?

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 260 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator