ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ನೆನಪು: ಎಂ ವ್ಯಾಸ | ಚರ್ಚೆ: ‘ಅನಾಗರಿಕರ ಬಾಂಬ್’ - ಉತ್ತರವೇ? ಪ್ರಶ್ನೆಯೇ?

ಸಂಪದ

ಭಾರತದ ಜ್ಞಾನಾವತಾರ

May 10, 2008 - 2:30am — thewiseant

ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ (೧೦ ಮೇ ೧೯೫೫-೭ ಮಾರ್ಚ್ ೧೯೩೬)

ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ
(೧೦ ಮೇ ೧೯೫೫-೭ ಮಾರ್ಚ್ ೧೯೩೬)

ಇಂದು ಭಾರತದ ಜ್ಞಾನಾವತಾರವೆಂದು ಹೇಳಲಾದ ಸ್ವಾಮಿ ಶ್ರೀ ಯುಕ್ತೇಶ್ವರರ ಜಯಂತಿ. ಇವರ ಬಗ್ಗೆ ಬರೆಯಲು ಹೊರಟರೆ ದೊಡ್ಡ ಪುಸ್ತಕವೇ ಆಗುವುದು.
ಈ ಮಹಾತ್ಮರ ಬಗ್ಗೆ ತಿಳಿಯಬಯಸುವವರು ಪರಮಹಂಸ ಯೋಗಾನಂದರ "ಯೋಗಿಯ ಆತ್ಮ ಕಥೆ" (ಇಂಗ್ಲಿಷ್ ನಲ್ಲಿ "Autobiography of a Yogi" ಪುಸ್ತಕವನ್ನು ಓದಬಹುದು.
ಈ ಲೇಖನದಲ್ಲಿ ಅವರ ಬಗ್ಗೆ ಹೇಳಲಾದ ಕೆಲವು ಮಾತುಗಳನ್ನಷ್ಟೇ ಉಲ್ಲೇಖಿಸಿರುವೆ.

ಶ್ರೀಗಳು ಮೊದಲ ಬಾರಿಗೆ ತಮ್ಮ ಆಶ್ರಮಕ್ಕೆ ಬಂದ ತಮ್ಮ ಪ್ರಿಯ ಶಿಷ್ಯ ಪರಮಹಂಸ ಯೋಗಾನಂದರು ತಮ್ಮ ಜೀವನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ " ನನ್ನ ವಂಶದ ಹೆಸರು ಪ್ರಿಯನಾಥ್ ಕರಾರ್. ಈ ಸಿರಾಂಪುರದಲ್ಲಿ ಹುಟ್ಟಿದೆ. ತಂದೆ ಶ್ರೀಮಂತ ವ್ಯಾಪಾರಿ. ಈಗ ನನ್ನ ಆಶ್ರಮವಾಗಿರುವ ಈ ಅನುವಂಶಿಕ ಭವನವನ್ನು ನನಗೆ ಬಿಟ್ಟು ಹೋದರು. ನನ್ನ ಸಾಂಪ್ರದಾಯಿಕವಾದ ಶಾಲಾಶಿಕ್ಷಣ ಬಹಳ ಕಡಿಮೆ. ನನ್ನ ಪಾಲಿಗೆ ಅದು ಮಂದಗತಿಯದೂ ಆಳವಿಲ್ಲದುದೂ ಆಗಿತ್ತು. ಯೌವನದ ಪ್ರಾರಂಭದಲ್ಲೇ ಗೃಹಸ್ಥನ ಹೊಣೆಗಾರಿಕೆಯನ್ನು ಹೊತ್ತೆ; ಒಬ್ಬಳು ಮಗಳಿದ್ದಾಳೆ, ಈಗ ಅವಳಿಗೆ ಮದುವೆಯಾಗಿದೆ. ನನ್ನ ನಡುಹರೆಯದ ಜೀವನ ವಾರಣಾಸಿಯ ಯೋಗಾವತಾರ ಶ್ರೀ ಲಾಹಿರಿ ಮಹಾಶಯರ ನೇತೃತ್ವದಿಂದ ಅನುಗ್ರಹೀತವಾಯಿತು. ನನ್ನ ಪತ್ನಿ ತೀರಿಕೊಂಡ ಮೇಲೆ ನಾನು ಸಂನ್ಯಾಸವನ್ನು ಸ್ವೀಕರಿಸಿದೆ. ಶ್ರೀ ಯುಕ್ತೇಶ್ವರ ಗಿರಿ ಎಂದು ನನಗೆ ಹೊಸ ನಾಮಕಾರಣವಾಯಿತು. ಇದೇ ನನ್ನ ಸರಳ ವೃತ್ತಾಂತ."
ಎಲ್ಲ ಜೀವನ ಚರಿತ್ರೆಗಳ ರೂಪರೇಷೆಗಳಂತೆಯೇ ಅವರ ಮಾತುಗಳು ಒಳಗಿನ ವ್ಯಕ್ತಿತ್ವವನ್ನು ತೋರದೆ ಹೊರಗಿನ ಸಂಗತಿಗಳನ್ನು ಮಾತ್ರ ಕೊಟ್ಟಿವೆ.

ಶ್ರೀ ಯುಕ್ತೇಶ್ವರರ ಮಹಾಸಮಾಧಿಯ ಸಂದರ್ಭದಲ್ಲಿ ಕೊಲ್ಕತಾದ ಪ್ರಮುಖ ದಿನಪತ್ರಿಕೆಯಾದ "ಅಮೃತ್ ಬಜಾರ್ ಪತ್ರಿಕಾ" ಅವರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಾ "ಭಗವದ್ಗೀತೆಯ ಸುಪ್ರಸಿದ್ದ ವ್ಯಾಖ್ಯಾನಕಾರರಲ್ಲಿ ಒಬ್ಬರಾದ ಸ್ವಾಮೀಜಿಯವರು ವಾರಣಾಸಿಯ ಯೋಗಿರಾಜ ಶ್ರೀ ಶ್ಯಾಮ ಚರಣ ಲಾಹಿರಿ ಮಹಾಶಯರ ಶಿಷ್ಯರು. ಭಾರತದಲ್ಲಿ ಹಲವು ಯೋಗದಾ ಸತ್ಸಂಗ ಕೇಂದ್ರಗಳ ಸ್ಥಾಪಕರೂ , ತಮ್ಮ ಪ್ರಮುಖ ಶಿಷ್ಯರೂ ಆದ ಪರಮಹಂಸ ಯೋಗಾನಂದರು ಪಶ್ಚಿಮಕ್ಕೆ ಒಯ್ದ ಯೌಗಿಕ ಕಾರ್ಯಚಟುವಟಿಕೆಗಳಿಗೆ ಹಿನ್ನೆಲೆಯಲ್ಲಿ ಮಹಾಪ್ರೇರಕ ಶಕ್ತಿಯಾಗಿದ್ದವರೂ ಸ್ವಾಮೀಜಿಯವರೇ. ಶ್ರೀ ಯುಕ್ತೇಶ್ವರರ ಭವಿಷ್ಯ ನಿರ್ಮಾಣಶಕ್ತಿ ಹಾಗೂ ಗಾಢವಾದ ಸಿದ್ಧಿಯೇ ಸ್ವಾಮಿ ಯೋಗಾನಂದರನ್ನು ಪ್ರೇರಿಸಿ ಸಮುದ್ರಗಳನ್ನು ದಾಟಿ ಹೋಗಿ ಅಮೇರಿಕಾದಲ್ಲಿ ಭಾರತದ ಸಂತರ ಸಂದೇಶವನ್ನು ಪ್ರಚುರಪಡಿಸುವಂತೆ ಮಾಡಿದುದು.
"ಭಗವದ್ಗೀತೆ ಮತ್ತಿತರ ಧರ್ಮಗ್ರಂಥಗಳ ಮೇಲೆ ಅವರು ಬರೆದಿರುವ ವ್ಯಾಖ್ಯಾನವನ್ನು ನೋಡಿದರೆ ಪೌರಾತ್ಯ ಹಾಗೂ ಪಾಶ್ಚ್ಯಾತ್ಯ ದರ್ಶನದ ಮೇಲೆ ಶ್ರೀ ಯುಕ್ತೇಶ್ವರರು ಎಂಥಹಾ ಗಾಢವಾದ ಅಧಿಕಾರವನ್ನು ಪಡೆದಿದ್ದರೆಂದು ಪ್ರಮಾಣಿತವಾಗುತ್ತದೆ. ಅಲ್ಲದೆ ಪೂರ್ವ ಪಶ್ಚಿಮಗಳನ್ನು ಬೆಸೆಯಲು ಬಯಸುವವರಿಗೆ ಇದು ಕಣ್ಣು ತೆರೆಸಿದಂತಾದೀತು. ಎಲ್ಲಾ ಧಾರ್ಮಿಕ ಪಂಥಗಳನ್ನು ಒಟ್ಟುಗೂಡಿಸಬೇಕೆಂದು ಬಯಸುತ್ತಿದ್ದುದರಿಂದ ಶ್ರೀ ಯುಕ್ತೇಶ್ವರರು ಧರ್ಮದಲ್ಲಿ ವೈಜ್ಞಾನಿಕ ಧೋರಣೆಯನ್ನು ಬೋಧಿಸಲು ಅನುಕೂಲವಾಗುವಂತೆ ಎಲ್ಲಾ ಪಂಥಗಳ ಮುಖ್ಯಸ್ಥರ ಸಹಕಾರವನ್ನು ಪಡೆದು 'ಸಾಧು ಸಭಾ 'ಎಂಬ ಸಂಸ್ಥೆಯನ್ನು ಸ್ಥಾಪಿಸಿದರು. ತಮ್ಮ ದೇಹತ್ಯಾಗದ ಸಮಯದಲ್ಲಿ ತಮ್ಮ ಸ್ಥಾನದಲ್ಲಿ ಪರಮಹಂಸ ಯೋಗಾನಂದರನ್ನು ಸಾಧು ಸಭೆಯ ಅಧ್ಯಕ್ಷರನ್ನಾಗಿ ನಾಮಕರಣ ಮಾಡಿದರು..."

ಈ ಮಹಾತ್ಮರ ಜೀವನದ ವಿವರಗಳು ಇಂಗ್ಲಿಷ್ ಬಾಷೆಯಲ್ಲಿರುವ ಈ ಕೊಂಡಿಯಲ್ಲಿ ಉಚಿತವಾಗಿ ಲಭ್ಯವಿದೆ
http://www.anandaindia.org/inspiration/books/ay/index.html

  • ಅಧ್ಯಾತ್ಮ
~.~
  • Login or register to post comments
  • 269 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯೋಗಿಯ ಆತ್ಮ ಕಥೆ
  • ನನ್ನ ಮೆಚ್ಚಿನ ಪುಸ್ತಕ
  • ವಿಶ್ವ ಗೋ ಸಮ್ಮೇಳನ -ಶ್ರೀ ರಾಮಚ೦ದ್ರಾಪುರ ಮಠ, ಹೊಸನಗರ,ಶಿವಮೊಗ್ಗ ಜಿಲ್ಲೆ
  • ಮಹಾತ್ಮಾ ಗಾಂಧಿಯವರ ಜ್ಞಾಪಕಾರ್ಥ
  • ದುಡಿಮೆಗೆ ಗುರಿಯಿರಲಿ - ಸ್ವಾತಂತ್ರ ಹಬ್ಬ ವಿಶೇಷ
Syndicate content

ಲೇಖಕರು

thewiseant's picture

ಪೂರ್ಣ ಹೆಸರು
ಎನ್. ಅಂಜನ್ ಕುಮಾರ್

ಪರಿಚಯ

ಯೋಗ, ಆಧ್ಯಾತ್ಮ , ಗಾಂಧೀವಾದ, ಓದು, ಬರವಣಿಗೆ, ಮಕ್ಕಳ ಸಾಹಿತ್ಯ , ಇಂಟರ್‍ನೆಟ್ ಮುಂತಾದುವು ನನ್ನ ಆಸಕ್ತಿಯ ವಿಷಯಗಳು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮಿಂಚಿನ ಸುದ್ದಿ : ಬೆಂಗಳೂರಿನಲ್ಲಿ 3 ಕಡೆ ನಿಗೂಢ ಸ್ಫೋಟ. ಬೆಂಗಳೂರಿನ ನಾಗರಿಕರೆ, ಸಾವಧಾನರಾಗಿರಿ .
  • ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
  • ’ಸ್ಪೇಸ್ ಮೌಂಟೆನ್”, ’ಡಿಸ್ನಿ ಲ್ಯಾಂಡ್” ನ ಮತ್ತೊಂದು ರೋಮಾಂಚಕ ತಾಣ ; ’ರೋಲರ್ ಕೋಸ್ಟರ್,’ ನಲ್ಲಿ ರಮಿಸುವುದೇ ಇಲ್ಲಿನ ವಿಶೇಷತೆ !
  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Sex - ಕಾಮ; ಅದರ ಮಹತ್ವ !
    July 26, 2008 - 5:21am
  • venkatesh
    ಉ: ಒಂದು ಜೋಕ್ಸ (??????)
    July 26, 2008 - 4:16am
  • venkatesh
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 26, 2008 - 4:11am
  • shaamala
    ಉ: ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
    July 25, 2008 - 11:36pm
  • Jayalaxmi.Patil
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 9:39pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 9:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:35pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:33pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:13pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 30 ಅತಿಥಿಗಳು ಆನ್ಲೈನ್ ಇರುವರು.


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator