ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ಶಿಕ್ಷಣದ ವ್ಯವಸ್ಥೆ ಹೇಗಿರಬೇಕು?

July 10, 2008 - 1:51pm — shylaswamy

ಶಿಕ್ಷಣದ ವ್ಯವಸ್ಥೆ ಹೇಗಿರಬೇಕು?
ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವೇ? ಹೈಕೋರ್ಟಿನ ತೀರ್ಪು ಎಷ್ಟರ ಮಟ್ಟಿಗೆ ಸರಿ?
ಹೈ ಕೋರ್ಟ್ ನಮ್ಮ ಮಕ್ಕಳನ್ನು ಈ ಮಾಧ್ಯಮದಲ್ಲೇ ಓದಿಸಿ ಆ ಮಾಧ್ಯಮದಲ್ಲೇ ಓದಿಸಿ ಎಂದು ಯಾವುದೇ ಕಟ್ಟಪ್ಪಣೆ ಮಾಡಿಲ್ಲ.ಇದನ್ನು ಇಂಗ್ಲಿಷ್ ಮಾಧ್ಯಮಗಳ ಶಾಲೆಗಳ ಜಯ ಅಥವಾ ಕನ್ನಡ ಶಾಲೆಗಳ ಸೋಲು ಎಂದಾಗಲಿ ನಾವು ಪರಿಗಣಿಸಬೇಕಾಗಿಲ್ಲ. ನಮ್ಮ ಮಕ್ಕಳ ಜವಾಬ್ದಾರಿ ನಮಗೆ ಸೇರಿದ್ದು. ಹೀಗಾಗಿ ಚಿಂತಿಸಬೇಕಾದವರು ನಾವು. ಮಗುವಿನ ಹಕ್ಕು ಮತ್ತು ಆಸಕ್ತಿಯನ್ನೂ ಗೌರವಿಸಿ ನಿರ್ಧಾರ ತೆಗೆದುಕೊಳ್ಳಬೇಕಾದವರು ನಾವು.
ಎಳೆಯ ಮಕ್ಕಳ ಮೆದುಳಿನ ಶಕ್ತಿ ಅಪಾರವಾಗಿರುತ್ತದೆ ಎನ್ನುತ್ತಾರೆ ತಜ್ಞರು. ಹೀಗಾಗಿ ಹಲವು ಭಾಷೆಗಳನ್ನು ಕಲಿಯುವ ಸಾಮರ್ಥ್ಯ ಮಕ್ಕಳು ಹೊಂದಿರುತ್ತಾರೆ ಎನ್ನುತ್ತಾರೆ ಅವರು. ಆದರೂ ಎಲ್ಲಾ ಮಕ್ಕಳೂ ಒಂದೇ ರೀತಿಯ ಸಾಮರ್ಥ್ಯ ಹೊಂದಿರುವುದಿಲ್ಲ. ಅವುಗಳಿಗೆ ಅವುಗಳದ್ದೇ ಆದ ನೂರಾರು ಕಾರಣಗಳಿರುತ್ತವೆ. ಆದಕಾರಣ ತಮ್ಮ ಮಕ್ಕಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾದವರು ಅವರ ಪೋಷಕರು. ಹಾಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ಪೋಷಕರು ಗಮನಿಸಬೇಕಾದ ಮೂರು ಅಂಶಗಳಿವೆ. ಅವು,
೧. ತಮ್ಮ ಮಕ್ಕಳ ಬಗ್ಗೆ ಕುರುಡು ವ್ಯಾಮೋಹಕ್ಕೆ ಒಳಗಾಗದೇ ಅವರ ಸಾಮರ್ಥ್ಯದ ನಿಜವಾದ ಅರಿವು ಪೋಷಕರು ಹೊಂದಿದವರಾಗಿರಬೇಕು. ಪೋಷಕರು ತಮ್ಮ ಮಕ್ಕಳಿಗೆ ಯಾವ ಮಾಧ್ಯಮದಲ್ಲಾದರೂ ಮಾರ್ಗದರ್ಶನ ನೀಡುವ ಸಾಮರ್ಥ್ಯ ತಮಗೆ ಇದೆಯೇ ಎಂಬುದನ್ನೂ ತಿಳಿದಿರಬೇಕು. ಏಕೆಂದರೆ ಒಮ್ಮೊಮ್ಮೆ ಶಾಲೆಯಲ್ಲಿ ಒಟ್ಟಿಗೆ ಎಲ್ಲಾ ಮಕ್ಕಳಿಗೂ ಶಿಕ್ಷಕರು ಹೇಳಿಕೊಟ್ಟಾಗ ಬಾರದ ಅನುಮಾನ ಮನೆಯಲ್ಲಿ ಬರಬಹುದು. ಆಗ ಸ್ವಲ್ಪವಾದರೂ ಮಕ್ಕಳಿಗೆ ಹೀಗಲ್ಲ ಹೀಗೆ ಎಂದು ತಿಳಿಸುವಷ್ಟಾದರೂ ಜ್ಞಾನ ಇರಬೇಕು. ತಮ್ಮ ಹೆತ್ತವರು ಅಜ್ಞಾನಿಗಳು ಎಂದು ತಿಳಿದರೆ ಮಕ್ಕಳು ಅವರನ್ನು ಮೋಸ ಮಾಡುವ ಸಾಧ್ಯತೆಗಳು ಹೆಚ್ಚು. ಹೀಗಾಗಿ ಮಕ್ಕಳ ಸಾಮರ್ಥ್ಯ ತಿಳಿಯುವುದರೊಂದಿಗೆ ಪೋಷಕರು ತಮ್ಮ ಸಾಮರ್ಥ್ಯವನ್ನೂ ಓರೆಗಲ್ಲು ಹಚ್ಚಿ ತಿಳಿದುಕೊಂಡಿರುವುದು ಒಳ್ಳೆಯದು. ಮನೆಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿ ಆತಂಕಗಳನ್ನು ಒಡ್ಡದ ಸ್ವಚ್ಚ ವಾತಾವರಣವಿರಬೇಕು. ಹೆತ್ತವರು ಮತ್ತು ಮಕ್ಕಳ ನಡುವೆ ಪ್ರೀತಿ ವಿಶ್ವಾಸ ಹಾಗೂ ಸ್ನೇಹಮಯ ವಾತಾವರಣವಿದ್ದರೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಹೆತ್ತವರು ಮತ್ತು ಮಕ್ಕಳು ಇಬ್ಬರಲ್ಲೂ ಸಾಮರ್ಥ್ಯ ಸಾಕಷ್ಟು ಇದೆ ಎಂದು ನಿಶ್ಚಿತವಾದಲ್ಲಿ ಮಕ್ಕಳನ್ನು ಯಾವ ಮಾಧ್ಯಮದಲ್ಲಾದರೂ ಸೇರಿಸಬಹುದು. ಅವರ ಸರ್ವತೋಮುಖ ಬೆಳವಣಿಗೆಗೆ ಯಾವುದೇ ರೀತಿಯ ಕುಂದು ಬರುವುದಿಲ್ಲ.
೨. ಮಕ್ಕಳು ಯಾವ ಮಾಧ್ಯಮದಲ್ಲಿ ಬೇಕಾದರೂ ಕಲಿಯಲಿ, ಆದರೆ ತಮ್ಮ ಮಾತೃಭಾಷೆಗೆ ಪ್ರಥಮ ಸ್ಥಾನ ಕೊಡುವುದನ್ನು ಮರೆಯಬಾರದು. ಇದರಲ್ಲಿ ಮಕ್ಕಳ ಪಾತ್ರಕ್ಕಿಂತ ಪೋಷಕರ ಪಾತ್ರ ದೊಡ್ಡದು. ಇಲ್ಲಿ ಪೋಷಕರೊಂದಿಗೆ ಶಾಲೆಗಳ ಮುಖ್ಯಸ್ಥರೂ ಕೈಜೋಡಿಸಬೇಕಾಗುತ್ತದೆ. ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವಿದ್ದಲ್ಲಿ ಪ್ರಥಮ ಭಾಷೆ ಕನ್ನಡವಾಗಿರಬೇಕು. ಉತ್ತಮ ಸಾಹಿತ್ಯಾಭಿರುಚಿಯನ್ನು ತರಿಸುವಂಥ ಪಠ್ಯ ಪುಸ್ತಕಗಳನ್ನು ಅಳವಡಿಸಿಕೊಳ್ಳಬೇಕು. ಯಾವ ಮಾಧ್ಯದಲ್ಲಿ ಮಿಕ್ಕ ವಿಚಾರಗಳನ್ನು ಕಲಿತರೂ ಪ್ರಥಮ ಭಾಷೆ ಕನ್ನಡದಲ್ಲಿ ಪಡೆವ ಅಂಕಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಜೊತೆಗೆ ಕನ್ನಡ ಸಾಹಿತ್ಯದಲ್ಲಿ ಮಕ್ಕಳಿಗೆ ಹೆಚ್ಚು ಆಸಕ್ತಿ ಬರುವಂತೆ ಮಾಡುವುದು ಶಿಕ್ಷಕರ ಕೈಯಲ್ಲಿದೆ. ಆಗ ತಾನೇ ತಾನಾಗಿ ಮಕ್ಕಳಲ್ಲಿ ಕನ್ನಡಾಭಿಮಾನ ಬರುತ್ತದೆ.
೩. ಒಂದುವೇಳೆ ಇಂಗ್ಲಿಷ್ ಮಾಧ್ಯಮದಲ್ಲೇ ಓದಿಸಬೇಕೆಂದು ಪೋಷಕರು ನಿರ್ಧರಿಸಿದರೆ ಹೈಕೋರ್ಟ್ ಅನುದಾನರಹಿತ ಶಾಲೆಗಳಿಗೆ ಮಾತ್ರ ಇಂಗ್ಲಿಷ್ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಮಕ್ಕಳ ವಿದ್ಯಾಭ್ಯಾಸದ ಖರ್ಚು ದುಬಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಆಗ ತಮ್ಮ ಹಣಕಾಸಿನ ವ್ಯವಸ್ಥೆಯ ಪರಿಸ್ಥಿತಿಯ ಅಂದಾಜೂ ಪೋಷಕರಿಗಿರಬೇಕು.
ಇಂದು ವಿದ್ಯೆ ಮಕ್ಕಳ ಉನ್ನತಿಗಾಗಿ ಮಾತ್ರವಲ್ಲ. ಅವರ ಭವಿಷ್ಯ ರೂಪಿಸುವಲ್ಲಿ ಅದು ಮುಖ್ಯ ಪಾತ್ರ ವಹಿಸುತ್ತದೆ. ಅವರ ಮುಂದಿನ ವೃತ್ತಿ ಜೀವನಕ್ಕೆ ಇದು ಅಡಿಪಾಯವಾಗುತ್ತದೆ. ಹೀಗಾಗಿ ಮಾತೃಭಾಷೆಯೊಂದು ಕಲಿತರೆ ಮಾತ್ರ ಸಾಕಾಗುವುದಿಲ್ಲ. ಜೊತೆಗೆ ಎಲ್ಲರೊಡನೆ ಬೆರೆವಂತಹಾ ಸಾಮಾನ್ಯ ಭಾಷೆಯೊಂದರ ಅವಷ್ಯಕತೆ ಇಂದಿನ ಮಕ್ಕಳಿಗೆ ಇದೆ. ಹೀಗಾಗಿ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲೇ ಕಲಿಸಿದರೂ ಇಂಗ್ಲಿಷ್ ಕಲಿಸುವ ಅವಶ್ಯಕತೆ ಶಾಲೆಗಳಲ್ಲಿ ಇದೆ. ಇಂದಿನ ಪೋಷಕರ ಆತಂಕ ಅದೇ ಆಗಿದೆ. ಅಕಸ್ಮಾತ್ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯದ ಒಂದೇ ಕಾರಣಕ್ಕಾಗಿ ಭವಿಷ್ಯದಲ್ಲಿ ತಮ್ಮ ಅವಕಾಶಗಳನ್ನು ಕಳೆದುಕೊಳ್ಳುವಂತಾದರೆ ಎಂಬ ಭಯ ಅವರನ್ನು ಕಾಡುತ್ತಿದೆ. ಹೀಗಾಗಿ ಇವರು ಕಷ್ಟವೋ ನಿಷ್ಟೂರವೋ ಮಕ್ಕಳಿಗೆ ಆದಷ್ಟು ಇಂಗ್ಲಿಷ್ ಮಾಧ್ಯಮದಲ್ಲೇ ಕಲಿಸಲು ಬಯಸುತ್ತಾರೆ. ಹೀಗಾಗಿ ಮಾಧ್ಯಮ ಯಾವುದೇ ಆಗಲಿ ಎರಡೂ ಭಾಷೆಗಳನ್ನೂ ಕಲಿಯುವ ಅವಕಾಶವಿದ್ದಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರಿಡುತ್ತಾರೆ.
ಯಾವ ಭಾಷೆಯನ್ನೇ ಆಗಲಿ ಒತ್ತಾಯದಿಂದ ಹೇರಲು ಸಾಧ್ಯವಿಲ್ಲ. ಆ ಭಾಷೆಯ ಮೇಲೆ ಪ್ರೀತಿ ಇರಬೇಕು ಅದಕ್ಕಾಗಿ ಶ್ರಮಿಸಬೇಕು. ಅದನು ಮಾಡುವ ನಿಟ್ಟಿನಲ್ಲಿ ಇಂದಿನ ದೊಡ್ಡವರು ಮಾದರಿಯಾಗಿ ಮಕ್ಕಳಿಗೆ ಮಾರ್ಗದರ್ಶನ ನೀಡಿ ಮಕ್ಕಳಲ್ಲಿ ಕನ್ನಡಾಭಿಮಾನ ತುಂಬಬಹದೇನೋ ಎಂದು ನನ್ನ ಅನಿಸಿಕೆ. ನೀವೇನಂತೀರಾ?

  • ಚಿಂತನೆ
~.~
  • Login or register to post comments
  • 263 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಮಾಧ್ಯಮ ಕುರಿತ ಹೈಕೋರ್ಟ್ ತೀ‌ರ್ಪಿಗೆ ಪ್ರತಿಕ್ರಿಯೆ:
  • ಒಂದನೇ ತರಗತಿಯಿಂದ "ಇಂಗ್ಲಿಷ್" ಕಲಿಕೆ - ಒಂದು ಚಿಂತನೆ
  • ಕನ್ನಡದ ಹೆಸರಲ್ಲಿ ಇಂಗ್ಲೀಷ್ ಕಲಿಕೆ... ಮಾನ್ಯತೆ ರದ್ದು! ಈ ಪರಿಸ್ಥಿತಿಗೆ ಯಾರು ಹೊಣೆ?
  • ನೈತಿಕತೆಯನ್ನು ಮರೆತು ಮರೆಮಾಚುತ್ತಿರುವ ಕಂಗ್ಲೀಷ ಶಾಲೆಗಳು.
  • ಮಾಧವ ನೆಲೆ...
Syndicate content

ಲೇಖಕರು

shylaswamy's picture

ಪೂರ್ಣ ಹೆಸರು
shylaswamy

ಪರಿಚಯ

ನಾನು ಶಿವಮೊಗ್ಗಾದಲ್ಲಿ ವಾಸ ಮಾಡುತ್ತಿರುವ ಗೃಹಿಣಿ. ದೀರ್ಘಕಾಲ ಶಿಕ್ಷಕಿಯಾಗಿ ಈಗ ಸ್ವಯಂ ನಿವೃತ್ತಿಹೊಂದಿ ಮನೆಯಲ್ಲಿದ್ದೇನೆ. ನನ್ನ ಆಸಕ್ತಿಯ ಕ್ಷೇತ್ರಗಳೆಂದರೆ, ಸಂಗೀತ, ಸಾಹಿತ್ಯ ಮತ್ತು ನಾಟಕ. ನಾನು ಕೆಲವು ನಾಟಕಗಳನ್ನು ಬರೆದು ನಿರ್ದೇಶಿಸಿದ್ದೇನೆ. ಹೆಚ್ಚಾಗಿ ಬರೆದಿರುವುದು ಮತ್ತು ನಿರ್ದೇಶಿಸಿರುವುದು ಮಕ್ಕಳ ನಾಟಕಗಳನ್ನು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
  • ಮುಂಬಯಿ ಘಟನೆಯ ಬಗ್ಗೆ "ಪ್ರಸೂನ್ ಜೋಶಿಯ" ಕವನ: ಈ ಬಾರಿ ಇಲ್ಲ
  • ಸಾವಿನ ಹತ್ತಿರ
  • ಸಕಲವೂ ಈಶ್ವರಮಯವಾದುದು
  • ನಿಟ್ಟೆ:ವಾರದ ಅಂತರದಲ್ಲಿ ಎರಡು ಅಂತಾರ್ರಾಷ್ಟ್ರೀಯ ಸಮಾವೇಶಗಳು
  • ನನ್ನ ತಪ್ಪೇ ಅಥವಾ ಸಿನಿಕತನವೇ?
  • ರಾಜಕಾರಣಿಗಳಿಗೆ ತಮ್ಮ ಅದ್ದೂರಿತನ ತೋರಿಸಿಕೊಳ್ಳುವ ಗೀಳಿದೆಯೇ?

ಇತ್ತೀಚಿನ ಪ್ರತಿಕ್ರಿಯೆಗಳು

  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 137 ಅತಿಥಿಗಳು ಆನ್ಲೈನ್ ಇರುವರು.


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator