ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ವಿಜ್ಞಾನಿಗಳೊಡನೆ ರಸನಿಮಿಷಗಳು

July 12, 2008 - 11:32am — shylaswamy

ಜಿ.ಟಿ. ನಾರಾಯಣ್ ರಾವ್ ರವರ ಬಗ್ಗೆ ಚಿಂತಿಸುತ್ತ ನನ್ನ ಪುಸ್ತಕದ ಆಲ್ಮೇರಾ ಬಳಿ ಪುಸ್ತಕಗಳನ್ನು ಹುಡುಕುತ್ತಿದ್ದಾಗ ಕಣ್ಣಿಗೆ ಬಿದ್ದವರು ಜೆ.ಆರ್.ಲಕ್ಷ್ಮಣರಾವ್ ರವರು. ಅವರ ಪುರ್ಣ ಹೆಸರು ಜಗಲೂರು ರಾಘವೇಂದ್ರ ರಾವ್ ಲಕ್ಷ್ಮಣ ರಾವ್. 1921ರಲ್ಲಿ ಜನಿಸಿದ ಇವರು 1943ರಿಂದ 38 ವರ್ಷಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಪರಮಾಣು ಚರಿತ್ರೆ, ಬೈಜಿಕ ವಿದ್ಯುತ್ ಹೀಗೆ ಅನೇಕ ವೈಜ್ಞಾನಿಕ ಲೇಖನಗಳನ್ನು ಬರೆದಿದ್ದಾರೆ.
ನಾವು ಸಾಧಾರಣವಾಗಿ ವಿಜ್ಞಾನಿಗಳು ಎಂದರೆ ನಮ್ಮಂತೆ ಸಾಮಾನ್ಯ ಮನುಷ್ಯರು ಎಂದು ಪರಿಗಣಿಸುವುದೇ ಇಲ್ಲ. ಅವರೆಲ್ಲೋ ಎತ್ತರದಲ್ಲಿ ಇರುವ ವಿಶಿಷ್ಟ ಮನೊಭಾವದ ವ್ಯಕ್ತಿಗಳಾಗಿರುತ್ತಾರೆ, ನಮ್ಮ ನಿಮ್ಮ ಹಾಗೆ ಸಾಮಾನ್ಯ ವಿಚಾರಗಳು ಅವರಿಗೆ ಬರುವುದೇ ಇಲ್ಲ, ಸದಾ ಗಂಭೀರ ಪ್ರವೃತ್ತಿಯವರಾಗಿ ಇರುತ್ತಾರೆ ಎಂದೆಲ್ಲ ಅವರ ಬಗ್ಗೆ ಚಿಂತಿಸಿರುತ್ತೇವೆ. ಸಾಮಾನ್ಯ ಜನರಂತೆ ಅವರು ಸಂತೋಷ ಆದಾಗ ಕುಣಿದಾಡುವುದು, ಸಣ್ಣ ತಪ್ಪು ಮಾಡಿ ಪೇಚಿಗೆ ಸಿಕ್ಕಿ ಹಾಕಿಕೊಳ್ಳುವುದು ಮುಂತಾದವು ಅವರಿಂದ ಬಲು ದೂರ ಎಂದುಕೊಳ್ಳುತ್ತೇವೆ. ಆದರೆ ಜೆ.ಆರ್. ಲಕ್ಷ್ಮಣ ರಾಯರು ವಿಜ್ಞಾನವಲ್ಲದೇ ವಿಜ್ಞಾನಿಗಳ ಬಗ್ಗೆಯೂ ಹೆಚ್ಚು ಆಸಕ್ತಿಯುಳ್ಳವರಾಗಿ ಅವರ ದಂತಕಥೆಗಳಿಂದಲೂ ಆಕರ್ಷಿತರಾದರಂತೆ. ಹೀಗಾಗಿ ತಾನು ಸವಿದು ಬಾಯಿ ಚಪ್ಪರಿಸಿದ ಸುದ್ದಿಗಳನ್ನು ನಮಗಾಗಿ “ವಿಜ್ಞಾನಿಗಳೊಡನೆ ರಸನಿಮಿಷಗಳು” ಎಂಬ ಕೃತಿ ರಚಿಸಿ ಮನರಂಜನೆ ನೀಡಿದ್ದಾರೆ. ಅವುಗಳನ್ನು ಓದುತ್ತಿದ್ದರೆ ಆ ವಿಜ್ಞಾನಿಗಳೆಲ್ಲಾ ನಮಗೆ ತೀರಾ ಹತ್ತಿರದವರೆನ್ನಿಸುತ್ತಾರೆ. ಅಪಾರ ಬುದ್ಧಿಶಕ್ತಿಯ ಅವರ ಹಸುಳೆ ಸ್ವಭಾವ, ವಿನೋದ ಪ್ರಿಯತೆ, ಮಾನವೀಯತೆ ಮತ್ತು ಮರೆಗೂಳಿತನ ನಮ್ಮ ಹೃದಯವರಳಿಸಿ ತುಟಿಯಂಚಿನಲ್ಲಿ ನಗು ಅರಳುವಂತೆ ಮಾಡುತ್ತವೆ. ಜೆ.ಆರ್. ಲಕ್ಷ್ಮಣರಾವ್ ರವರು ಇಲ್ಲಿ ಮೆರೆಸಿರುವ ಹಾಸ್ಯ ಯಾರ ಮನಸ್ಸನ್ನೂ ಘಾಸಿಗೊಳಿಸದ ಹಿತವಾದ ನಗೆರತ್ನಗಳಂತಿವೆ. ಈ ಪುಸ್ತಕದಲ್ಲಿನ ಒಂದು ಪ್ರಸಂಗವನ್ನು ಇಲ್ಲಿ ಉದಾಹರಿಸುತ್ತೇನೆ.
ಹೆನ್ರಿ ಕ್ಯವೆಂಡಿಷ್ ಅವರನ್ನು ಭೇಟಿ ಮಾಡುವುದಕ್ಕಾಗಿ ಒಮ್ಮೆ ದೊಡ್ಡ ವಿದೇಶಿ ವಿಜ್ಞಾನಿಯೊಬ್ಬರು ಕೇಂಬ್ರಿಡ್ಜ್ ನಲ್ಲಿನ ಅವರ ಪ್ರಯೋಗಾಲಯಕ್ಕೆ ಬಂದಿದ್ದರಂತೆ. ಮಾತುಕತೆ ಮುಗಿದಮೇಲೆ ಅವರನ್ನು ಬೀಳ್ಕೊಡುವುದಕ್ಕಾಗಿ ಕ್ಯಾವೆಂಡಿಷ್ ಗೇಟಿನ ವರೆಗೂ ಬಂದರು. ಆ ಗೇಟಿನ ಮೇಲೆ ಸಾಲಾಗಿ ಹೊರಟುಕೊಂಡಿದ್ದ ಕಬ್ಬಿಣದ ಸಲಾಕೆಗಳ ತುದಿಗಳಿಗೆ ಅಲಂಕಾರಕ್ಕಾಗಿ ಸಿಕ್ಕಿಸಿದ್ದ ದೊಡ್ಡ ಹಿತ್ತಾಳೆ ಗುಂಡುಗಳ ಪೈಕಿ ಒಂದನ್ನು ಕೈಯಲ್ಲಿ ಹಿಡಿದುಕೊಂಡರು. ಗುಂಡಿನ ಅರ್ಧ ಭಾಗ ತಣ್ಣಗಿತ್ತು; ಅರ್ಧ ಭಾಗ ಬಿಸಿಯಾಗಿತ್ತು. ಆದರೆ ಅದರಲ್ಲಿ ಒಂದು ಕೌತುಕದ ವಿಷಯವಿತ್ತು. ಬಿಸಿಲಿಗೆ ಎದುರಾಗಿದ್ದ ಅರ್ಧ ಭಾಗ ತಣ್ಣಗಿತ್ತು. ಬಿಸಿಲಿನಿಂದ ಆಚೆಕಡೆ ಇದ್ದ ಅರ್ಧ ಭಾಗ ಬಿಸಿಯಾಗಿತ್ತು. ಕ್ಯಾವೆಂಡಿಷ್ ಆಶ್ಚರ್ಯದಿಂದ ಅದನ್ನು ತಮ್ಮ ಮಿತ್ರರಿಗೆ ತೋರಿಸಿದರು. ಅವರೂ ನೋಡಿ ಆಶ್ಚರ್ಯಪಟ್ಟರು. ಇಬ್ಬರೂ ಇತರ ಗುಂಡುಗಳನ್ನೂ ಮುಟ್ಟಿ ನೋಡಿದರು. ಅವುಗಳೂ ಹಾಗೇ ಇದ್ದವು. ಆ ವೈಚಿತ್ರ್ಯಕ್ಕೆ ಕಾರಣವೇನೆಂಬುದನ್ನು ಕಂಡುಹಿಡಿಯಲು ಕೆಲವು ಪ್ರಯೋಗಗಳನ್ನು ನಡೆಸುವ ಯೋಚನೆ ಮಾಡಿ ಇಬ್ಬರೂ ಅದನ್ನು ಚರ್ಚಿಸುತ್ತಾ ನಿಂತರು. ಹೆಚ್ಚುಕಡಿಮೆ ಅರ್ಧ ಗಂಟೆ ಹಾಗೆಯೇ ಕಳೆಯಿತು. ಅಷ್ಟುಹೊತ್ತಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ತೋಟದ ಮಾಲಿ ಬಂದು ಆ ಹಿತ್ತಾಳೆ ಗುಂಡುಗಳೊಂದೊಂದನ್ನೂ 180ಡಿಗ್ರಿಗಳಷ್ಟು ತಿರುಗಿಸಿದ. ಗುಂಡುಗಳು ಒಂದೇಕಡೆ ಬಹುವಾಗಿ ಕಾದುಬಿಡದಂತೆ ಅವನ್ನು ಅರ್ಧ ಗಂಟೆಗೊಮ್ಮೆ ಆರೀತಿ ತಿರುಗಿಸುವುದು ಪದ್ಧತಿ ಎಂದು ಹೇಳಿದ.
ಸ್ವಾರಸ್ಯಕರವಾದ ವೈಜ್ಞಾನಿಕ ಸಮಸ್ಯೆಯೊಂದನ್ನು ಬಿಡಿಸುವ ಅವಕಾಶ ಕೈತಪ್ಪಿ ಹೋದುದಕ್ಕಾಗಿ ವಿಜ್ಞಾನಿಗಳಿಬ್ಬರೂ ವ್ಯಥೆಪಟ್ಟು ಪೆಚ್ಚುಮೋರೆ ಹಾಕಿಕೊಂಡರು.
ಹೀಗೆ ಇನ್ನೂ ನೂರಾರು ಘಟನೆಗಳು ಇಲ್ಲಿ ಇವೆ. ಒಂದಕ್ಕಿಂತ ಒಂದು ಹೆಚ್ಚಾಗಿ ನವಿರಾದ ಹಾಸ್ಯ ಹೊಂದಿವೆ ಓದಲು ಮುದ ನೀಡುವ ಈ ಪುಸ್ತಕವನ್ನು ನೀವು ಓದಿರುವಿರಾ? ಅದರ ಬಗ್ಗೆ ನಿಮಗೇನನ್ನಿಸುತ್ತದೆ?

  • ವಿಮರ್ಶೆ
~.~
  • Login or register to post comments
  • 220 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯುಗ ಯುಗಾದಿ ಕಳೆದರೂ
  • ಕನ್ನಡಪ್ರಭದಲ್ಲಿ ಯಡಿಯೂರಪ್ಪನವರ ಅರ್ಧಮೀಸೆ!
  • ಡಾ. ಯು.ಬಿ.ರಾವ್- ಒಂದು ಸವಿನೆನಪು !
  • ಹಾಗೇ ಸುಮ್ಮನೆ
  • ೯ನೇ ಸಂಚಿಕೆ: ಕಥೆಗಾರ ವಿವೇಕ ಶಾನಭಾಗರೊಂದಿಗೆ - ಸಂದರ್ಶನ: ನರೇಂದ್ರ ಪೈ
Syndicate content

ಲೇಖಕರು

shylaswamy's picture

ಪೂರ್ಣ ಹೆಸರು
shylaswamy

ಪರಿಚಯ

ನಾನು ಶಿವಮೊಗ್ಗಾದಲ್ಲಿ ವಾಸ ಮಾಡುತ್ತಿರುವ ಗೃಹಿಣಿ. ದೀರ್ಘಕಾಲ ಶಿಕ್ಷಕಿಯಾಗಿ ಈಗ ಸ್ವಯಂ ನಿವೃತ್ತಿಹೊಂದಿ ಮನೆಯಲ್ಲಿದ್ದೇನೆ. ನನ್ನ ಆಸಕ್ತಿಯ ಕ್ಷೇತ್ರಗಳೆಂದರೆ, ಸಂಗೀತ, ಸಾಹಿತ್ಯ ಮತ್ತು ನಾಟಕ. ನಾನು ಕೆಲವು ನಾಟಕಗಳನ್ನು ಬರೆದು ನಿರ್ದೇಶಿಸಿದ್ದೇನೆ. ಹೆಚ್ಚಾಗಿ ಬರೆದಿರುವುದು ಮತ್ತು ನಿರ್ದೇಶಿಸಿರುವುದು ಮಕ್ಕಳ ನಾಟಕಗಳನ್ನು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ತಕ್ಕಮಟ್ಟಿಗೆ ವಿಕಿಪೀಡಿಯಾದ ಒಂದು ವಿಸ್ತೃತ ಪರಿಚಯ
  • ಹಬ್ಬಗಳ ನಡುವೆ ಸಂಪದದ ಹಬ್ಬ
  • ಬಿಡುಗಡೆಯ ನಂತರದ ಬೇಡಿಗಳು (೩)
  • ಧಾರವಾಡದಲ್ಲಿ ಹುಟ್ಟಿ ಬಾಲ್ಟಿಮೋರ್‌ನಲ್ಲಿ ಹರಿದ ನಮ್ಮೆಲ್ಲರ ಶಾಲ್ಮಲಾ!
  • ಬಿಡುಗಡೆಯ ನಂತರದ ಬೇಡಿಗಳು (೨)
  • ‘ಮನೆ ಅಂಗಳದ ಕೈತೋಟ-ವಿಶ್ವ ದಿನಾಚರಣೆ’ (ಆಗಸ್ಟ್ ೨೬) ಇಂದು!
  • ಫೈರ್ಫಾಕ್ಸಿನಲ್ಲಿ ಉದಯವಾಣಿಯನ್ನು ಓದುವ ಬಗ್ಗೆ

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 4:44am
  • kannadakanda
    ಉ: ಸರ್ವಜ್ಞನ ವಚನಗಳು ಮೂಲರೂಪ (ಹರಿಪ್ರಸಾದ ನಾಡಿಗರ ಸರ್ವಜ್ಞವಚನಗಳ ಮೂಲರೂಪ ತೋಱಿ)
    August 29, 2008 - 4:24am
  • kannadakanda
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 4:13am
  • kalpana
    ಉ: ಆರದ ದೀಪ
    August 29, 2008 - 2:42am
  • ಗಣೇಶ
    ಉ: ಗೆಳೆಯ
    August 29, 2008 - 12:26am
  • hpn
    ಉ: ಕನ್ನಡ ವಿಕಿಪೀಡಿಯಾ
    August 28, 2008 - 10:37pm
  • Rajeshwari
    ಉ: ಕಚೇರಿ ಎಂಬ ನರಕ-೧
    August 28, 2008 - 10:36pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 28, 2008 - 10:29pm
  • anil.ramesh
    ಉ: ಒಂದು ನಾಯಿ ಕತೆ
    August 28, 2008 - 10:19pm
  • Sunil Jayaprakash
    ಉ: ಆರದ ದೀಪ
    August 28, 2008 - 10:19pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 96 ಅತಿಥಿಗಳು ಆನ್ಲೈನ್ ಇರುವರು.


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator