ವಿಧ: ರುಚಿ
April 14, 2024
ಒಂದು ಪಾತ್ರೆಗೆ ಎಲ್ಲ ಹಿಟ್ಟಿನ ಜೊತೆಗೆ ತುರಿದ ಸೌತೇಕಾಯಿ, ಹಸಿ ಮೆಣಸಿನಕಾಯಿ ಪೇಸ್ಟ್, ಅರಶಿನ ಹುಡಿ, ಇಂಗು, ಉಪ್ಪು, ಕೊತ್ತಂಬರಿ ಸೊಪ್ಪು ಇವೆಲ್ಲವನ್ನು ಬೆರೆಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ೫ ನಿಮಿಷ ಬಿಟ್ಟು ಕೈಯಿಂದ ತಟ್ಟಿ ರೊಟ್ಟಿ ಮಾಡಿ ಎರಡು ಬದಿ ಕೆಂಪಗೆ ಬೇಯಿಸಿದರೆ ಬಿಸಿ ಬಿಸಿ ರೊಟ್ಟಿ ಸಿದ್ಧ. ಉತ್ತರ ಕರ್ನಾಟಕದ ಕಡೆ ಇದನ್ನು ತಾಲಿಪಟ್ಟು ಎನ್ನುತ್ತಾರೆ. ಇದನ್ನು ಬೆಣ್ಣೆ ಅಥವಾ ಮೊಸರಿನ ಜೊತೆ ತಿಂದರೆ ತುಂಬಾ ರುಚಿಯಾಗಿರುತ್ತದೆ.
ವಿಧ: ಪುಸ್ತಕ ವಿಮರ್ಶೆ
April 12, 2024
ಕಾಡು ಕಾಡ್ತು’ ರೇಖಾ ಹೆಗಡೆಯವರು ಕಾಡಿನ ಅನುಭವಗಳ ಕುರಿತು ಬರೆದ ಕೃತಿಯಾಗಿದೆ. ಇದಕ್ಕೆ ಅವರದ್ದೇ ಮುನ್ನುಡಿ ಬರಹವಿದೆ: ಅಡವಿಯೆಂದರೆ ಅದೇನು ಹುಚ್ಚೋ.. ನನ್ನ ಬಾಲ್ಯ, ಹದಿಹರೆಯ ದಿನಗಳಲ್ಲಿ ಪುಸ್ತಕಗಳನ್ನು ಬಿಟ್ಟರೆ ನಾನು ಅತಿಹೆಚ್ಚು ಪ್ರೀತಿಸಿದ್ದು ಅಡವಿಯನ್ನು ಮುಗಿಲಿಗೆ ಏಣಿ ಚಾಚುವ ಸಾಗವಾನಿ, ಮತ್ತಿ, ಹೆದ್ದೇಗ, ಬೀಟೆ ಮರಗಳು, ಗಾಳಿ ಬೀಸಿದಾಗೆಲ್ಲ. ಒಂಥರಾ 'ಸುಂಯ್' ಎಂದು ಸದ್ದು ಮಾಡುವ ಬಿದಿರು ಮಟ್ಟಿಗಳು, ಆ ಮಟ್ಟಿಗಳ ಬುಡದಲ್ಲಿ ಬಿದ್ದಿರುತ್ತಿದ್ದ ಪುಟ್ಟ ಪುಟ್ಟ ನವಿಲು ಗರಿಗಳು.…
ವಿಧ: ಬ್ಲಾಗ್ ಬರಹ
April 11, 2024
ರೈಲು ಬೆಳಿಗ್ಗೆ 8 ಗಂಟೆಗೆ ಊರಿಗೆ ಬಂದು ಸೇರಲಿತ್ತು. ಊರಿನ ಖ್ಯಾತ ನಾಯಕ ಮೋಹನದಾಸ್ ಅವರು ರಾಜಧಾನಿಯಿಂದ ವಾಪಸ್ಸು ಬರಲಿದ್ದರು. ಎಲ್ಲರಿಗೂ ಕುತೂಹಲ! ಇಂದು ಅವರ ಕೊರಳಿನಲ್ಲಿ ಯಾವ ಹೂವಿನ ಹಾರ ಇರುತ್ತದೆ? ಸಂಪಿಗೆಯೇ? ಮಲ್ಲಿಗೆಯೇ? ಗೋಪಾಲದಾಸರು ತಾವು ರೈಲಿನಿಂದ ಇಳಿಯುವಾಗ ತಮ್ಮ ಇತ್ತೀಚಿನ ಪಕ್ಷದ ಹೂವಿನ ಹಾರವನ್ನು ಹಾಕಿಕೊಂಡಿರುತ್ತೇನೆ ಎಂದು ಪೋನ್ ಮಾಡಿದ್ದರು
ನಮ್ಮ ರಾಜ್ಯದಲ್ಲಿ ಎರಡು ರಾಜಕೀಯ ಪಕ್ಷಗಳು – ಸಂಪಿಗೆ ಮತ್ತು ಮಲ್ಲಿಗೆ – ಇರುವುದು ನಿಮಗೆ ಗೊತ್ತು. ಹಳೆಯವರನ್ನು ಕೇಳಿದರೆ…
ವಿಧ: ಪುಸ್ತಕ ವಿಮರ್ಶೆ
April 10, 2024
ಲೇಖಕ, ತಾಳಮದ್ದಳೆ ಅರ್ಥಧಾರಿ, ಉಪನ್ಯಾಸಕ ಹೀಗೆ ಹಲವು ಮುಖಗಳಿಂದ ಪ್ರಸಿದ್ಧರಾಗಿರುವವರು ರಾಧಾಕೃಷ್ಣ ಕಲ್ಚಾರ್. ಅವರ ಹಲವು ಕೃತಿಗಳು ಈಗಾಗಲೇ ಪ್ರಕಟವಾಗಿದ್ದು ಜನಪ್ರಿಯತೆ ಗಳಿಸಿವೆ. ತನ್ನದೇ ಆದ ಓದುಗರನ್ನು ಪಡೆದುಕೊಂಡ ಕಲ್ಚಾರ್ ಅವರು ಅಂಕಣಕಾರರಾಗಿಯೂ ಜನಪ್ರಿಯರು. ‘ಕೂಡುಮನೆ' ಎಂಬ ಈ ಪುಟ್ಟ ಕಾದಂಬರಿ ಸುಮಾರು ಮೂರು ದಶಕಗಳ ಹಿಂದೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿತ್ತು. ಸದ್ಯ ಮುದ್ರಿತ ಪ್ರತಿಗಳೆಲ್ಲ ಮುಗಿದಿರುವುದರಿಂದ ಎರಡನೆಯ ಬಾರಿಗೆ ಪ್ರಕಟವಾಗುತ್ತಿದೆ.
ಒಂದು…
ವಿಧ: ರುಚಿ
April 07, 2024
ಕಡಲೆ ಹಿಟ್ಟು, ಅಕ್ಕಿ ಹಿಟ್ಟುಗಳನ್ನು ಒಂದು ಚಮಚ ಬಿಸಿ ಎಣ್ಣೆ ಸೇರಿಸಿ ಕಲಸಿಡಿ. ತೆಂಗಿನ ತುರಿ, ಕರಿಬೇವಿನ ಎಲೆಗಳು, ಅರಶಿನ, ಮೆಣಸಿನ ಹುಡಿ, ಉಪ್ಪು, ಗರಮ್ ಮಸಾಲೆಗಳನ್ನು ಸೇರಿಸಿ ತರಿತರಿಯಾಗಿ ಅರೆದು, ಬ್ರೆಡ್ ತುಂಡುಗಳೊಂದಿಗೆ ಬೆರೆಸಿ. ಕಡಲೆ ಹಿಟ್ಟಿನ ಹಾಗೂ ಬ್ರೆಡ್ ಮಿಶ್ರಣಗಳನ್ನು ಸೇರಿಸಿ ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ವಡೆಯ ಹದಕ್ಕೆ ಕಲಸಿಡಿ. ಮಿಶ್ರಣದಿಂದ ನಿಂಬೆಯ ಗಾತ್ರದ ಹಿಟ್ಟು ತೆಗೆದುಕೊಂಡು ವಡೆಯಾಕಾರದಲ್ಲಿ ತಟ್ಟಿ, ಕಾಯಿಸಿದ ಎಣ್ಣೆಯಲ್ಲಿ ಕರಿದರೆ ಸ್ವಾದಿಷ್ಟವಾದ ಬ್ರೆಡ್…
ವಿಧ: ಪುಸ್ತಕ ವಿಮರ್ಶೆ
April 05, 2024
ವೃತ್ತಿಯಲ್ಲಿ ದೈಹಿಕ ಶಿಕ್ಷಕರೂ, ಪ್ರವೃತ್ತಿಯಲ್ಲಿ ಸಾಹಿತಿಯೂ ಆಗಿರುವ ಹಾ ಮ ಸತೀಶರು ಬರೆದ ‘ಕೊನೆಯ ನಿಲ್ದಾಣ' ಎನ್ನುವ ಕವನ ಸಂಕಲನವು ಕಥಾಬಿಂದು ಪ್ರಕಾಶನದ ಮೂಲಕ ಬಿಡುಗಡೆಯಾಗಿದೆ. ಹರಿನರಸಿಂಹ ಉಪಾಧ್ಯಾಯ (ವಿಹಾರಿ) ಇವರು ಈ ಕೃತಿಗೆ ಬಹಳ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ಸತೀಶರ ಪರಿಚಯ ಮಾಡಿಕೊಡುತ್ತಾ ಅವರ ಕವನಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಅವರು ವ್ಯಕ್ತ ಪಡಿಸಿದ ಕೆಲವು ಭಾವಗಳ ಆಯ್ದ ಸಾಲುಗಳು ಇಲ್ಲಿವೆ…
“ಇನ್ನೂ ಒಂದು ಹೆಜ್ಜೆ ಮುಂದಿಟ್ಟು…
ವಿಧ: ಪುಸ್ತಕ ವಿಮರ್ಶೆ
April 03, 2024
‘ವರ್ತಮಾನ ಭಾರತ' ಎನ್ನುವ ನೂತನ ಕೃತಿಯಲ್ಲಿ ಖ್ಯಾತ ಚಿಂತಕ, ಲೇಖಕ ಪುರುಷೋತ್ತಮ ಬಿಳಿಮಲೆ ಇವರು ಪ್ರಕಟ ಮಾಡಿದ್ದಾರೆ. ಸಮಕಾಲೀನ ಘಟನೆಗಳ ಬಗ್ಗೆ ಇವರು ಬರೆದ ಪುಟ್ಟ ಪುಟ್ಟ ಬರಹಗಳೇ ಸಂಗ್ರಹಗೊಂಡು ‘ವರ್ತಮಾನ ಭಾರತ’ ಎನ್ನುವ ಕೃತಿಯಾಗಿ ಹೊರಬಂದಿದೆ. ಈ ಕೃತಿಗೆ ಬರೆದ ಲೇಖಕರ ಮಾತಿನಲ್ಲಿ ಪುರುಷೋತ್ತಮ ಬಿಳಿಮಲೆ ಅವರು ವ್ಯಕ್ತ ಪಡಿಸಿದ ಕೆಲವು ಮಾತುಗಳು ನಿಮ್ಮ ಓದಿಗಾಗಿ...
“ಸಂಸ್ಥೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದುದರಿಂದ ವೈಯಕ್ತಿಕವಾಗಿ ಹೆಚ್ಚು ಬರೆಯಲಾಗಲಿಲ್ಲ. ೨೦೨೦ರಲ್ಲಿ…
ವಿಧ: ಪುಸ್ತಕ ವಿಮರ್ಶೆ
April 01, 2024
ನಿವೃತ್ತ ಮುಖ್ಯ ಶಿಕ್ಷಕಿ, ಕವಯತ್ರಿ ಶ್ರೀಮತಿ ರತ್ನಾ ಕೆ ಭಟ್ ತಲಂಜೇರಿ ಇವರ ನೂತನ ಕೃತಿ 'ಹನಿ ಹನಿಗಳ ನಡುವೆ' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕೃತಿಯ ಪ್ರಮುಖ ಅಂಶವೆಂದರೆ ಇದೊಂದು ‘ಆಲ್ ಇನ್ ಒನ್' ಎನ್ನುವಂಥ ಪುಸ್ತಕ. ಏಕೆಂದರೆ ಹನಿ ಕವನದ ಎಲ್ಲಾ ಪ್ರಕಾರಗಳು ಇದರಲ್ಲಿವೆ. ಹಾಯ್ಕು, ಟಂಕಾ, ಅಬಾಬಿ, ಚುಟುಕು, ರುಬಾಯಿ, ಶಿಶುಗೀತೆ, ಮಿನಿ ಕವನ ಎಲ್ಲಾ ಈ ಸಂಕಲನದಲ್ಲಿ ಅಡಕವಾಗಿದೆ.
‘ಹನಿ ಹನಿಗಳ ನಡುವೆ' ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಕವಿ, ಸಾಹಿತಿ, ಶಿಕ್ಷಕರಾದ ಹಾ ಮ ಸತೀಶ್.…
ವಿಧ: ರುಚಿ
March 31, 2024
ತೊಗರಿಬೇಳೆ ಹಾಗೂ ಕಡ್ಲೆಬೇಳೆಯನ್ನು ೨ ರಿಂದ ೩ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ ಸೋಸಿ, ನೀರು ತೆಗೆದು ಅದಕ್ಕೆ ತೆಂಗಿನ ತುರಿ, ಹೆಚ್ಚಿದ ಹಸಿಮೆಣಸು, ಉಪ್ಪು ಬೆರೆಸಿ ಗಟ್ಟಿಯಾಗಿ ರುಬ್ಬಿಕೊಳ್ಳಿರಿ. ಅದಕ್ಕೆ ಶುಂಠಿ, ಕರಿಬೇವು, ಕೊತ್ತಂಬರಿ, ಇಂಗು, ಈರುಳ್ಳಿ ಸೇರಿಸಿ ಸಣ್ಣ ಉಂಡೆಗಳನ್ನಾಗಿ ಮಾಡಿ. ಒಲೆಯ ಮೇಲೆ ಕಾದ ಎಣ್ಣೆಯಲ್ಲಿ ಮಂದ ಉರಿಯಲ್ಲಿ ಕಂದು ಬಣ್ಣ ಬರುವವರೆಗೆ ಕರಿಯಿರಿ. ಈಗ ತೊಗರಿಬೇಳೆ ಬೋಂಡಾ ತಿನ್ನಲು ಸಿದ್ಧ.
ವಿಧ: ಪುಸ್ತಕ ವಿಮರ್ಶೆ
March 30, 2024
ಬಾಲ್ಯದಲ್ಲಿ ಅಜ್ಜ ಅಜ್ಜಿಯರಿಂದ ಜಾನಪದ ಕತೆಗಳನ್ನು ಕೇಳಿದವರಿಗೆ ಗೊತ್ತು ಅವುಗಳ ಸೊಗಡು. ಅವು ಚಿರನೂತನ ಕತೆಗಳು. ಈ ಸಂಗ್ರಹದಲ್ಲಿವೆ 42 ಜಾನಪದ ಕತೆಗಳು. “ಸುಮಾರು 70 ವರ್ಷದ ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರಕಟಗೊಂಡಿದ್ದ ಜಾನಪದ ಕಥೆಗಳ ಸಂಕಲನದಲ್ಲಿವನ್ನು ಸಂಗ್ರಹಿಸಿ, ತಿದ್ದಿ, ಒಂದು ಆಕಾರವನ್ನು ಕೊಟ್ಟು, ಈ ಪುಸ್ತಕವನ್ನು ಬರೆದಿದ್ದೇನೆ” ಎಂದು “ನನ್ನುಡಿ"ಯಲ್ಲಿ ತಿಳಿಸಿದ್ದಾರೆ ಲೇಖಕಿ ಎಸ್.ಬಿ. ಸರಸ್ವತಿ.
"ಜಿಪುಣ ಮುದುಕಿ” ಎಂಬ ಕತೆಯ ಸಾರಾಂಶ: ಒಂದೂರಿನಲ್ಲಿ ಜಿಪುಣ ಮುದುಕಿ…