ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › BogaleRagale ರವರ ಬ್ಲಾಗ್

ವಿಶ್ವ ಕನ್ನಡ ಸಮ್ಮೇಳನ ಉದ್ಘಾಟನೆಗೆ ವಿಶ್ವ ಸುಂದರಿ

January 23, 2007 - 9:55am — BogaleRagale

ಬೊಗಳೂರು, ಜ.23- ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮಾವೇಶಕ್ಕೆ ಗ್ಲ್ಯಾಮರಸ್-ಸ್ಪರ್ಷ ನೀಡಲು ಉದ್ದೇಶಿಸಿರುವ ಆಯೋಜಕ ಬಳಗದವರೊಬ್ಬರ ಸಲಹೆಗೆ ಬೊಗಳೆ ವಲಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. (bogaleragale.blogspot.com)

ಇದುವರೆಗೆ ಕನ್ನಡಕ್ಕಾಗಿ, ಕನ್ನಡದ ಏಳಿಗೆಗಾಗಿ ಹೇಳಿಕೊಳ್ಳುವಂಥದ್ದೇನನ್ನು ಮಾಡದಿರುವ ಆಕೆಗೆ ಕನ್ನಡಕ್ಕಾಗಿ ಏನಾದರೂ ಮಾಡಲು ಈ ಸದವಕಾಶವನ್ನು ಒದಗಿಸಲು ನಿರ್ಧರಿಸಿರುವುದಾಗಿ ಬೊಗಳೆ ರಗಳೆ ಬ್ಯುರೋ ನಡೆಸಿದ ತನಿಖೆಯಿಂದ ಸಾಬೀತಾಗಿದೆ. ಕನ್ನಡದಾ ಸಮ್ಮೇಳನಕ್ಕೆ ಹೆಚ್ಚು ಜನರನ್ನು ಬರುವಂತೆ ಮಾಡುವುದೇ ಆಕೆ ಮಾಡುವ ಕನ್ನಡ ಸೇವೆಯಾಗಲಿದೆ ಎಂದು ಪತ್ತೆ ಹಚ್ಚಲಾಗಿದೆ.

ಕುವೆಂಪು ಪ್ರಣೀತ "ಸತ್ತಂತಿಹರನು ಬಡಿದೆಚ್ಚರಿಸು" ಎಂಬ ಕರೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಹದಿರೆಯದವರ ಕುದಿ ಹೃದಯ ತಟ್ಟಿರುವ ಮತ್ತು ವಯಸ್ಕರ ಹೃದಯವನ್ನೂ ರೊಯ್ಯನೆ ಕುದಿಸಿಬಿಟ್ಟಿರುವ ಸುಂದರಿಯನ್ನೇ ಈ ಸಮ್ಮೇಳನದ ಪ್ರಧಾನ ಆಕರ್ಷಣೆಯಾಗಿಸಿ ಏಳಲಾಗದವರನ್ನೂ ಎಬ್ಬಿಸಿ ಸಮ್ಮೇಳನದತ್ತ ಧಾವಿಸಿಬರುವಂತೆ ಮಾಡುವ ಪ್ರಯತ್ನವಿದು ಎಂದು ತಿಳಿದುಬಂದಿದೆ.

ಆಕೆಯ ಕೈಯಲ್ಲಿ ವಿಶ್ವಕನ್ನಡ ಸಮ್ಮೇಳನ ಉದ್ಘಾಟಿಸಿದರೆ ಖಂಡಿತವಾಗಿಯೂ ಅದು ಶಿವಮೊಗ್ಗ ಸಮ್ಮೇಳನಕ್ಕಿಂತಲೂ ಹೆಚ್ಚು ವಿವಾದಾಸ್ಪದವಾಗಿ ಭರ್ಜರಿ ಪ್ರಚಾರ ಪಡೆಯಲಿದೆ ಎಂಬುದು ಆಯೋಜಕರ ವಾದವಾಗಿದೆ.

ಐಶ್ವರ್ಯಾ ರೈ ವಿಶ್ವ ಸುಂದರಿಯಾದ ಸಂದರ್ಭದಲ್ಲಿ ರೈ ಎಂಬುದನ್ನು ರಾಯ್ ಎಂದು ಕೆಲವು ಪತ್ರಿಕೆಗಳಲ್ಲಿ ಪ್ರಕಟವಾದಾಗ (ಬೊಗಳೆ ರಗಳೆ ಆಗ ಇರಲಿಲ್ಲ ಎಂದು ಬೆನ್ನು ತಟ್ಟಿಕೊಳ್ಳುತ್ತಿದ್ದೇವೆ) ಆಕೆ ಬಂಗಾಳಿಯೋ, ಕನ್ನಡಿಗಳೋ ಎಂಬುದು ಚರ್ಚೆಗೆ ಹೇತುವಾಗಿ ಕೊನೆಗೂ ಆಕೆಯ ಮೂಲವನ್ನು ಮಾಧ್ಯಮಗಳು ಕಷ್ಟಪಟ್ಟು ದಕ್ಷಿಣ ಕನ್ನಡ ಜಿಲ್ಲೆ ಎಂದು ಪತ್ತೆ ಹಚ್ಚಿಬಿಟ್ಟಿದ್ದವು. ಹಾಗಾಗಿ ಆಕೆ ಕನ್ನಡಿಗಳು ಎಂದು ತಿಳಿದ ತಕ್ಷಣವೇ ಕರ್ನಾಟಕ ಜನತೆ ಮತ್ತು ಈ ಸಮ್ಮೇಳನ ಆಯೋಜಕರು ಆಕೆಯನ್ನು ದೊಡ್ಡ ಕಾರ್ಯಕ್ರಮಕ್ಕೆ ಆಹ್ವಾನಿಸುವ ನಿಟ್ಟಿನಲ್ಲಿ ಒಂದು ಕಣ್ಣು ಅತ್ತಲೇ ಇರಿಸಿದ್ದರು ಎಂದು ತಿಳಿದುಬಂದಿದೆ. ಐಶ್ ಶೀಘ್ರವೇ ಬಚ್ಚನ್ ಕುಟುಂಬದ ಸುಂದರಿಯಾಗಹೊರಟಿರುವುದರಿಂದ, ವಿವಾಹವಾದ ಮೇಲೆ ಆಕೆಯ ಗ್ಲ್ಯಾಮರ್ ಕಡಿಮೆಯಾಗುತ್ತದೆ, ಅಭಿಮಾನಿಗಳ ಸಂಖ್ಯೆ ಕುಸಿಯುತ್ತದೆ, ಆಕೆ ತೆರೆಮರೆಗೆ ಸರಿಯುತ್ತಾರೆ ಎಂಬುದನ್ನು ಮನಗಂಡಿರುವ ಆಯೋಜಕ ಬಳಗದ ಸದಸ್ಯರು, ಇನ್ನು ಮುಂದೆ ಇಂಥ ಅವಕಾಶ ಸಿಗಲಾರದು ಎಂದು ತಿಳಿದು ಈ ಕ್ರಮ ಕೈಗೊಂಡಿದ್ದಾರೆ.

ವಾಸ್ತವವಾಗಿ ಆಕೆ ಹೇಗೂ "ವಿಶ್ವ"ಸುಂದರಿ. ಹಾಗಾಗಿ "ವಿಶ್ವ"ಕನ್ನಡ ಸಮ್ಮೇಳನದ ಅಧ್ಯಕ್ಷತೆ ವಹಿಸುವುದು ಆಕೆಗೇನೂ ಕಷ್ಟವಾಗಲಾರದು ಎಂದು ಕೆಲವು ಮಂಡೆಗಳು ಯೋಚಿಸಿದ್ದವು. ಆದರೆ ಸಾಹಿತಿಗಳು ಭರ್ಜರಿಯಾಗಿ ತೆಗಳುವರು ಎಂಬ ಕಾರಣಕ್ಕೆ ಈ ಪ್ರಸ್ತಾಪ ಕೈಬಿಡಲಾಗಿತ್ತು ಎಂದು ತನಿಖಾ ವರದಿಯನ್ನು ಒಪ್ಪಿಸಲಾಗಿದೆ.

ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅಭಾಕವಿವಾದ ಸಮ್ಮೇಳನ ಸಮಾರಂಭವು ಚಂಪಾ ಸಮಾರಂಪ ಆಗಿ ಪರಿವರ್ತನೆಗೊಂಡಿತ್ತು. ಅದಕ್ಕಂತೂ ಬೊಗಳೆ ರಗಳೆ ಬ್ಯುರೋಗೆ ಆಹ್ವಾನವಿರಲಿಲ್ಲ ಎಂಬುದರ ಬಗ್ಗೆ ಓದುಗ ಬಳಗವು ಅತ್ಯಂತ ಹರ್ಷ ವ್ಯಕ್ತಪಡಿಸಿತ್ತು. ಇದೀಗ ವಿಶ್ವ ಕನ್ನಡ ಸಮ್ಮೇಳನಕ್ಕೆ ಬ್ಯುರೋಗೆ ಆಹ್ವಾನ ನೀಡದೆಯೇ ಅದರ ಅಧ್ಯಕ್ಷತೆಗೆ ಮತ್ತು ಉದ್ಘಾಟನೆಗೆ ಹೆಸರುಗಳನ್ನು ಪತ್ತೆ ಹಚ್ಚುವಂತೆ ಕೋರಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷತೆಯ ಆಹ್ವಾನವನ್ನು ಬೊಗಳೆ ರಗಳೆ ಬ್ಯುರೋ ನಯವಾಗಿ ತಳ್ಳಿ ಹಾಕಿ, ಪ್ರಧಾನಿ ಪದವಿ ನಿರಾಕರಿಸಿದ ಸೋನಿಯಾ ಗಾಂಧಿಯಂತೆ ತ್ಯಾಗ, ಬಲಿದಾನ ಮುಂತಾದ ಗುಣಗಳನ್ನು ಮೆರೆದಿದೆ.

~.~
  • BogaleRagale ರವರ ಬ್ಲಾಗ್
  • Login or register to post comments
  • 520 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಾತು ಮದಿರೆಯೇ ಮಾನಿನಿಯರಿಗೆ ?
  • ಪ್ರಾಣಿಗಳ 'ಮಾನವನಿಷ್ಠೆ' ಅಗ್ಗಳಿಕೆಗೆ ಪೈಪೋಟಿ !
  • ಪ್ರೇಮಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಾರಣ
  • ಕನ್ನಡಕ್ಕಳಿವಿಲ್ಲ, ಬೆಂಗಳೂರಲ್ಲಿ ಜತನದಿಂದಿದೆ!!!
  • ಕಾಣೆಯಾಗಿದ್ದ ತೂಕದ ಮಹಿಳೆಯರು ಪತ್ತೆ!
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 150 ಅತಿಥಿಗಳು ಆನ್ಲೈನ್ ಇರುವರು.


"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator