ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ಶಾಸಕರ ರಾಜೀನಾಮೆ ಮತ್ತು ರಾಜಕೀಯ

July 6, 2008 - 6:53pm — Chamaraj

(ರಾಜ್ಯ ರಾಜಕೀಯ ನಿರ್ಲಜ್ಜ ಘಟ್ಟದಲ್ಲಿದೆ. ಹಣ ಇದ್ದವರು ಏನು ಬೇಕಾದರೂ ಮಾಡಬಹುದು ಎಂಬ ವಾತಾವರಣ ಉಂಟಾಗಿದೆ. ಅಧಿಕಾರ ಹಿಡಿಯುವುದೇ ಪರಮ ಉದ್ದೇಶವಾದರೆ ಏನಾಗುತ್ತದೆ ಎಂಬುದಕ್ಕೆ ಕರ್ನಾಟಕದಲ್ಲಿ ಶನಿವಾರದಿಂದ ನಡೆದಿರುವ ಘಟನೆಗಳೇ ಸಾಕ್ಷಿ. ಶಾಸಕರ ರಾಜೀನಾಮೆ ಹಾಗೂ ಬಿಜೆಪಿ ಸೇರ್ಪಡೆ ಹಿಂದಿರುವ ಹುನ್ನಾರ ಕುರಿತು ಈ ಬರಹ)

ಬಹುಶಃ ೨೦೦೮ನೇ ವರ್ಷ ರಾಜ್ಯ ರಾಜಕೀಯದಲ್ಲಿ ಹಲವಾರು ಕಾರಣಗಳಿಂದಾಗಿ ನೆನಪಿನಲ್ಲಿರುತ್ತದೆ.
ಇತ್ತೀಚನ ವರ್ಷಗಳಲ್ಲಿ ಕಂಡ ಅತ್ಯಂತ ನಿರ್ಲಜ್ಜ ರಾಜಕಾರಣವನ್ನು ಜೆಡಿಎಸ್‌ನ ಎಚ್‌.ಡಿ. ದೇವೇಗೌಡ ಪ್ರದರ್ಶಿಸಿದ ಪರಿಣಾಮ ಬಹುಮತ ಸಾಬೀತು ಮಾಡಲು ಹೋಗಿದ್ದ ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ಸಲ್ಲಿಸಿ ಹಿಂತಿರುಗಿದರು. ರಾಷ್ಟ್ರಪತಿ ಆಡಳಿತ ಬಂದಿತು. ಅಧಿಕಾರಿಗಳದೇ ಸಾಮ್ರಾಜ್ಯ. ಪರಿಣಾಮ, ರಸಗೊಬ್ಬರದಂಥ ಬೇಡಿಕೆಯನ್ನು ಸರಿಯಾಗಿ ಸಲ್ಲಿಸದೇ ಮುಂಗಾರು ಗೊಂದಲಕ್ಕೆ ಕಾರಣವಾಯಿತು.
ಇನ್ನೊಂದೆಡೆ ಚುನಾವಣಾ ಆಯೋಗ ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಥವಾಗಿ ಕೆಲಸ ಮಾಡಿ, ಕ್ಷೇತ್ರ ಪುನರ್‌ವಿಂಗಡಣೆ ನಂತರವೂ ದಾಖಲೆ ಸಮಯದಲ್ಲಿ ಚುನಾವಣೆ ನಡೆಸಲು ಮುಂದಾಯಿತು. ವಿರೋಧದ ನಡುವೆಯೂ ಗದ್ದಲ ಗೊಂದಲಗಳಿಲ್ಲದೇ ಚುನಾವಣೆ ಮುಗಿಸಿತು. ಜೆಡಿಎಸ್‌ನ ಪಾಪದ ಫಲವೆಂಬಂತೆ ಬಿಜೆಪಿ ಸರಳ ಬಹುಮತಕ್ಕೆ ಹತ್ತಿರ ಬಂದು, ಜೆಡಿಎಸ್‌ ಹೀನಾಯವಾಗಿ ಮೂರನೇ ಸ್ಥಾನಕ್ಕೆ ಇಳಿಯಿತು.
ಇದು ಒಂದು ಪ್ರಮುಖ ಘಟ್ಟ.
ಅಧಿಕಾರಕ್ಕೆ ಬರಬೇಕೆಂದರೆ ಪಕ್ಷೇತರರ ಮರ್ಜಿಯಲ್ಲೇ ಇರಬೇಕೆನ್ನುವ ಕಹಿ ವಾಸ್ತವ ಒಪ್ಪಿಕೊಳ್ಳಲು ಹುಮ್ಮಸ್ಸಿನಲ್ಲಿರುವ ಬಿಜೆಪಿ ನಾಯಕರು ಸಿದ್ಧರಿದ್ದಿಲ್ಲ. ಹೀಗಾಗಿ, ಶಾಸಕರ ಖರೀದಿಗೆ ಮುಂದಾದರು. ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷೇತರರ ಬೆಂಬಲ ಪಡೆದುಕೊಂಡು ಸರ್ಕಾರ ರಚಿಸಲಾಯಿತು. ಆದರೆ, ಇದು ಶಾಶ್ವತ ಪರಿಹಾರವಲ್ಲ ಎಂಬ ಅರಿವು ಬಿಜೆಪಿ ನಾಯಕರಲ್ಲಿ ಇದ್ದೇ ಇತ್ತು.
ಯಥಾಪ್ರಕಾರ, ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಬಳ್ಳಾರಿ ಗಣಿ ದೊರೆಗಳಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಈ ಸಮಸ್ಯೆ ಪರಿಹರಿಸಲು ಮುಂದಾದರು. ಮೊದಲು ಜೆಡಿಎಸ್‌ ಒಡೆಯುವ ತಂತ್ರ ಹೆಣೆಯಲಾಯಿತು. ಆದರೆ, ಅದು ಸುಲಭ ಸಾಧ್ಯವಲ್ಲ ಎಂಬುದು ಗೊತ್ತಾಯಿತು. ಆಗ ರೂಪಿಸಿದ್ದೇ ರಾಜೀನಾಮೆ ಕೊಟ್ಟು ಹೊರಬರುವ ತಂತ್ರ.
ಈ ಕಾರ್ಯಾಚರಣೆಯ ಕೆಲ ವಿಶೇಷತೆಗಳು ಹೀಗಿವೆ:
- ಶಾಸಕನೊಬ್ಬ ತನ್ನ ಸದಸ್ಯತ್ವ ಅವಧಿಯಲ್ಲಿ ಇನ್ನೊಂದು ಪಕ್ಷಕ್ಕೆ ಬೆಂಬಲ ಕೊಡುವುದಾಗಲಿ, ಸೇರಿಕೊಳ್ಳಲಾಗಲಿ ಬರುವುದಿಲ್ಲ. ಹಾಗೆ ಮಾಡಿದರೆ, ಪಕ್ಷಾಂತರ ನಿಷೇಧ ಕಾಯ್ದೆಯಡಿ ಅವನ ಸದಸ್ಯತ್ವ ರದ್ದಾಗುತ್ತದೆ.
- ಆದರೆ, ರಾಜೀನಾಮೆ ನೀಡಿ ಹೊರ ಬಂದರೆ ಆತ ಸ್ವತಂತ್ರ. ಸಾಮಾನ್ಯವಾಗಿ ಈ ಕ್ರಮ ಕೈಗೊಳ್ಳಲು ಶಾಸಕರು ಸಿದ್ಧರಿರುವುದಿಲ್ಲ. ಏಕೆಂದರೆ, ಆಗ ಉಪಚುನಾವಣೆ ನಡೆಯಬೇಕಾಗುತ್ತದೆ. ಒಂದು ಸಾರಿ ಗೆಲ್ಲಲಿಕ್ಕೇ ಸಾಕಷ್ಟು ಕಷ್ಟಪಟ್ಟಿರುತ್ತಾರೆ. ಹೀಗಾಗಿ ಈ ಸವಾಲು ತೆಗೆದುಕೊಳ್ಳಲು ಹೆದರುತ್ತಾರೆ.
- ಗಣಿ ದೊರೆಗಳು ಗಮನ ಕೊಟ್ಟಿದ್ದೇ ಈ ಅಂಶದತ್ತ. ಒಂದು ಮೂಲದ ಪ್ರಕಾರ, ಚುನಾವಣೆಯಲ್ಲಿ ಖರ್ಚಾದ ಹಣವನ್ನು ಹೊಂದಿಸುವ, ಹೆಚ್ಚುವರಿಯಾಗಿ ಹಣ ಕೊಡುವ, ಮತ್ತೆ ಚುನಾವಣೆ ಎದುರಿಸುವ ಎಲ್ಲ ಖರ್ಚನ್ನೂ ನೋಡಿಕೊಳ್ಳುವ ಹಾಗೂ ಗೆದ್ದ ನಂತರ ’ಸೂಕ್ತ’ ಸ್ಥಾನ ಕಲ್ಪಿಸುವ ಭರವಸೆಯನ್ನು ಕೆಲ ಶಾಸಕರಿಗೆ ನೀಡಲಾಯಿತು.
- ಶಾಸಕರು ಈ ಆಮಿಷಕ್ಕೆ ಮಣಿದರು. ಏಕೆಂದರೆ, ಪ್ರತಿ ಪಕ್ಷದಲ್ಲಿ ಇನ್ನೈದು ವರ್ಷ ಕೂತರೂ ಅವರಿಗೆ ಚುನಾವಣೆಯಲ್ಲಿ ಮಾಡಿರುವ ಖರ್ಚು ಹಿಂತಿರುಗುವ ಭರವಸೆ ಇಲ್ಲ. ಅದರ ಬದಲು ರಾಜೀನಾಮೆ ನೀಡಿದರೆ, ಖರ್ಚು ಮಾಡಿದ ಹತ್ತು ಪಟ್ಟು ಹಣ ಬರುತ್ತದೆ. ಇನ್ನೊಮ್ಮೆ ಉಚಿತವಾಗಿ ಗೆದ್ದು ಬರುವ ಅವಕಾಶವೂ ಸಿಗುತ್ತದೆ.
- ಗಣಿ ದೊರೆಗಳು ಇನ್ನೊಂದು ತಂತ್ರ ಹೆಣೆದರು. ರಾಜ್ಯದ ದೊಡ್ಡ ಕೋಮಿನಲ್ಲಿ ಒಂದಾಗಿರುವ ವಾಲ್ಮೀಕಿ ಸಮಾಜದ ಶಾಸಕರನ್ನು ಬಿಜೆಪಿಗೆ ಸೆಳೆಯುವ ಜವಾಬ್ದಾರಿಯನ್ನು ಸಚಿವ ಶ್ರೀರಾಮುಲು ಹೊತ್ತುಕೊಂಡರು. ಈ ತಂತ್ರ ಫಲ ನೀಡಿತು. ವಾಲ್ಮೀಕಿ ಜನಾಂಗದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಶಿವಾನಂದ ನಾಯಕ್‌ ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿಕೊಂಡರು. ಗಣಿ ದೊರೆಗಳ ವ್ಯಾಪಾರದಲ್ಲಿ ಮುಖ್ಯ ಪಾತ್ರಧಾರನಾಗಿರುವ ಕಾರವಾರದ ಕಾಂಗ್ರೆಸ್‌ ಶಾಸಕ ಆನಂದ ಆಸ್ನೋಟಿಕರ್‌ ಕೂಡ ಬಿಜೆಪಿಗೆ ಬಂದರು. ಕಾಂಗ್ರೆಸ್‌ನ ಸಂಸದ ಆರ್‌.ಎಲ್‌. ಜಾಲಪ್ಪ, ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿದ್ದರ ಬಗ್ಗೆ ಹೊಂದಿದ್ದ ಅಸಮಾಧಾನದ ಅಂಗವಾಗಿ ಅವರ ಮಗ ಶಾಸಕ ನರಸಿಂಹಸ್ವಾಮಿ ರಾಜೀನಾಮೆ ನೀಡಿ ಬಿಜೆಪಿ ಸೇರಿದರು.
- ಬರಲಿರುವ ದಿನಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಇನ್ನೂ ಐದಾರು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆ. ಸುಮಾರು ಎಂಟ್ಹತ್ತು ಶಾಸಕರಿಂದ ರಾಜೀನಾಮೆ ಕೊಡಿಸಿ ಉಪಚುನಾವಣೆ ನಡೆಸುವುದಕ್ಕೆ ವೇದಿಕೆ ಸಿದ್ಧಪಡಿಸಲಾಗುತ್ತದೆ. ತಮ್ಮದೇ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ, ಗಣಿ ದೊರೆಗಳ ಕಾರ್ಯಾಚರಣೆ ನಡೆಯುವುದರಿಂದ ಹತ್ತರಲ್ಲಿ ನಾಲ್ಕೈದು ಸ್ಥಾನಗಳನ್ನು ಬಿಜೆಪಿ ಗೆದ್ದರೂ ಸಾಕು, ಮುಂದಿನ ಐದು ವರ್ಷಗಳವರೆಗೆ ಸರ್ಕಾರ ಅಬಾಧಿತ.
ಇದು ಬಿಜೆಪಿ ಲೆಕ್ಕಾಚಾರ.
ಆ ಪ್ರಕಾರ, ರಾಜೀನಾಮೆ ಪ್ರಹಸನ ಪ್ರಾರಂಭವಾಗಿದೆ. ನಾವು-ನೀವು ಮೂಕ ಪ್ರೇಕ್ಷಕರಂತೆ ನೋಡುತ್ತ ಕೂತಿದ್ದೇವೆ.
ನಮ್ಮೊಳಗಿನ ಮತದಾರ ಜಾಗೃತನಾಗುವುದು ಯಾವಾಗ?
- ಚಾಮರಾಜ ಸವಡಿ
chamarajs@gmail.com

  • ಆಮಿಷ
  • ಕುತಂತ್ರ
  • ರಾಜಕೀಯ
~.~
  • Chamaraj ರವರ ಬ್ಲಾಗ್
  • Login or register to post comments
  • 230 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 7, 2008 - 2:06pm — roopablrao

ಉ: ಶಾಸಕರ ರಾಜೀನಾಮೆ ಮತ್ತು ರಾಜಕೀಯ

roopablrao's picture

ಬಿಜೆಪಿ ಯಿಂದ ಪಕ್ಷೇತರರನ್ನು ಸೆಳೆಯಬೇಕೆಂಬ ಪ್ರತಿ ಪಕ್ಶದವರ ಸಂಚಿಗೆ ಬೆಜೆಪಿಯವರ ಪ್ರತಿ ಸಂಚು ಅನ್ನುತ್ತಾರೆ
http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 7:40pm — basavarajdengi

ಉ: ಶಾಸಕರ ರಾಜೀನಾಮೆ ಮತ್ತು ರಾಜಕೀಯ

basavarajdengi's picture

ಇಸ್ಟೆಲ್ಲ ಆದ್ಮೇಲೆ ಇನ್ನೂ ಐದು ವರ್ಷ ಚುನಾವಣೆ ಆಗದಿದ್ರೆ ಅಸ್ಟೆ ಸಾಕು. ಆದರೆ ಒಂದಂತೂ ನಿಜ, ಬಿಜೆಪಿ ಎಲ್ಲಿಗೆ ಹೋಗ್ತಾ ಇದೆ ಅಂತ mostly ಅವರಿಗೆ ಗೊತ್ತಿಲ್ಲ. ಯೆಡ್ಡಿ ಅಲ್ಲ, ಗಣಿ ಧಣಿಗಳು ಆಳ್ತಾ ಇದಾರೆ ರಾಜ್ಯವನ್ನ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶಾಸಕರ ರಾಜೀನಾಮೆ ರಾಜಕೀಯ
  • ರಾಜೀನಾಮೆ
  • ಹಾವೇರಿಯಲ್ಲಿ ನಡೆದಿದ್ದು ಏನು?
  • ಹಾವೇರಿಯಲ್ಲಿ ನಡೆದಿದ್ದು ಏನು?
  • ಕರ್ನಾಟಕ ಚುನಾವಣೆ-ಎರಡು ಹಂತಗಳು
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ. ಓದುವುದು ಮತ್ತು ಬರೆಯುವುದು ಅಂದ್ರೆ ಇಷ್ಟ.

ನನ್ನ ಬ್ಲಾಗ್‌: http://chamarajsavadi.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
  • kannadakanda
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 1, 2008 - 11:44pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 105 ಅತಿಥಿಗಳು ಆನ್ಲೈನ್ ಇರುವರು.


"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator