ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

September 7, 2008 - 4:17pm — Chamaraj

ಇದು ಶೋಭೆ ತರುವ ಸಂಗತಿಯಲ್ಲ

ಇದೊಂದು ಚರ್ಚಾಸ್ಪದ ಸಂಗತಿ. ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕೆಂಗೇರಿ ಪ್ರದೇಶದಲ್ಲಿ ಕಾಣಿಸಿಕೊಂಡರು. ಅದು ಅವರ ಕ್ಷೇತ್ರದ ಒಂದು ಭಾಗ. ಕಾರಿನಿಂದಿಳಿದ ಸಚಿವೆ ಬೀದಿ ವ್ಯಾಪಾರಿಗಳ ಬಳಿ ತೆರಳಿ, ’ಬಿಹಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಂಗ್ರಹಿಸುತ್ತಿದ್ದೇನೆ. ನಿಮ್ಮ ಕೈಲಾದಷ್ಟು ನೆರವು ನೀಡಿ’ ಎಂದು ವಿನಂತಿಸಿಕೊಂಡರು.

ಜನರಿಗೆ ಆಶ್ಚರ್ಯ. ಬಹುತೇಕ ಪತ್ರಕರ್ತರಿಗೆ ಪುಳಕ. ಸಚಿವೆಯೊಬ್ಬರಿಗೆ ಎಂಥಾ ಸಾಮಾಜಿಕ ಕಳಕಳಿ ಇದೆ ನೋಡ್ರೀ ಎಂಬಂತೆ ಮಾತಾಡಿಕೊಂಡರು. ಆಟೊದಲ್ಲಿ ಧ್ವನಿವರ್ಧಕ ಬಳಸಿ ಸಚಿವೆಯ ಉದ್ದೇಶವನ್ನು ಅವರ ಅಭಿಮಾನಿಗಳು ಸಾರುತ್ತಿದ್ದರು. ಬೀದಿ ವ್ಯಾಪಾರಿಗಳಿಂದ ಹಣ ಸಂಗ್ರಹಿಸಿದ ಸಚಿವೆ, ಅದನ್ನೆಲ್ಲ ಬಿಹಾರ ಪ್ರವಾಹ ಸಂತ್ರಸ್ತರಿಗೆ ಕಳಿಸಿಕೊಡಲಾಗುವುದು ಎಂದು ಬೀಗಿದರು.

ಆದರೂ ಕೆಲ ಪತ್ರಕರ್ತರಿಗೆ ಸಂಶಯ. ಅಲ್ರೀ, ನೀವು ಅಧಿಕಾರದಲ್ಲಿ ಇದ್ದೀರಿ. ಬೀದಿಗೆ ಇಳಿದು ಹಣ ಸಂಗ್ರಹಿಸಿದ್ದು ಏಕೆ? ಇದು ಸರಿಯಾ? ಎಂದರು. ಅವರ ಪ್ರಶ್ನೆಯ ಹಿನ್ನೆಲೆ ಸಚಿವೆಗೆ ತಿಳಿಯಿತೋ ಇಲ್ಲವೋ. ’ಹಾಗೇನಿಲ್ಲ, ಅಧಿಕಾರದಲ್ಲಿರಲಿ ಇಲ್ಲದಿರಲಿ, ಜನಪರ ಕೆಲಸಕ್ಕೆ ನಾನು ಸದಾ ಮುಂದು’ ಎಂದರು.

ಸಚಿವೆ ಶೋಭಾ ಕರಂದ್ಲಾಜೆ ಅವರ ಉದ್ದೇಶ ಒಳ್ಳೆಯದೇ ಇರಬಹುದು. ಆದರೆ ಅದಕ್ಕಾಗಿ ಹಿಡಿದ ದಾರಿ ಮಾತ್ರ ಖಂಡಿತ ಸರಿಯಲ್ಲ. ಏಕೆಂದರೆ, ಅಧಿಕಾರದಲ್ಲಿರುವ ವ್ಯಕ್ತಿ ಬಹಿರಂಗವಾಗಿ ದೇಣಿಗೆ ಸಂಗ್ರಹಕ್ಕೆ ಮುಂದಾದರೆ, ಜನರಿಗೆ ಯಾವ ಸಂದೇಶ ಹೋಗುತ್ತದೆ? ಹೀಗೆ ಸಂಗ್ರಹಿಸಿದ ಹಣದ ಲೆಕ್ಕ ಕೊಡುವವರು ಯಾರು? ಸಚಿವರ ಹೆಸರಲ್ಲಿ ಅವರ ಹಿಂಬಾಲಕರು ಅಥವಾ ಕಿಡಿಗೇಡಿಗಳು ಒತ್ತಾಯದಿಂದ ಹಣ ಸಂಗ್ರಹಕ್ಕೆ ಮುಂದಾಗುತ್ತಾರೆ. ಆಗ ಇಲ್ಲ ಎನ್ನುವ ಧೈರ್ಯ ಯಾರಿಗಿರುತ್ತದೆ?

ಏಕೆಂದರೆ, ಬೆಳಿಗ್ಗೆ ತಾನೆ ಸಚಿವರು ಬಂದು ಬಹಿರಂಗವಾಗಿ ದೇಣಿಗೆ ಸಂಗ್ರಹಿಸಿರುತ್ತಾರೆ. ’ಅದು ಪ್ರಾರಂಭ. ಮುಂದಿನ ಸಂಗ್ರಹದ ಕೆಲಸ ನಮ್ಮದು’ ಎಂದು ಈ ಬೆಂಬಲಿಗರು ಹೊರಡುತ್ತಾರೆ. ಅವರನ್ನು ತಡೆಯುವವರು ಯಾರು? ಒಂದು ವೇಳೆ ಹಿರಿಯ ಪೊಲೀಸ್ ಅಧಿಕಾರಿ ಅಥವಾ ಎಂಜನಿಯರ್ ಹೀಗೆ ಹಣ ಸಂಗ್ರಹಿಸಲು ಹೋದರೆ ಅದನ್ನು ಸಮರ್ಥಿಸಿಕೊಳ್ಳಲು ಆದೀತೆ? ಜನ ಭಯಪಟ್ಟುಕೊಂಡು ಹಣ ಕೊಡಬೇಕಾಗುತ್ತದೆ. ಕೊಡದಿದ್ದರೆ ಸಚಿವರ, ಅಧಿಕಾರಿಗಳ ಬೆಂಬಲಿಗರು ಬಿಡಬೇಕಲ್ಲ?

ಈ ರೀತಿಯ ಕ್ರಮಗಳು ಬಹಿರಂಗ ಭ್ರಷ್ಟಾಚಾರಕ್ಕೆ, ಅಧಿಕಾರ ದುರ್ಬಳಕೆಗೆ ಇದು ದಾರಿ ಮಾಡಿಕೊಟ್ಟಂತೆ ಎಂಬ ಸರಳ ಸತ್ಯ ಸಚಿವೆ ಶೋಭಾ ಅವರಿಗೆ ಏಕೆ ಹೊಳೆಯಲಿಲ್ಲ?

- ಚಾಮರಾಜ ಸವಡಿ

  • ದೇಣಿಗೆ
  • ವಂತಿಗೆ
  • ವಸೂಲಿ
  • ಶೋಭಾ ಕರಂದ್ಲಾಜೆ
~.~
  • Chamaraj ರವರ ಬ್ಲಾಗ್
  • Login or register to post comments
  • 164 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಸವಿನೆನಪುಗಳು ಬೇಕು ... ಸವಿಯಲೇ ಬದುಕು...
  • ಜನರಿಗೆ ಬೇಡವಾದ ಬಡಾಯಿದಾಸ
  • ಜನರಿಗೆ ಬೇಡವಾದ ಬಡಾಯಿದಾಸ
  • ದಸರಾ ಹಬ್ಬ
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ. ಓದುವುದು ಮತ್ತು ಬರೆಯುವುದು ಅಂದ್ರೆ ಇಷ್ಟ.

ನನ್ನ ಬ್ಲಾಗ್‌: http://chamarajsavadi.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 100 ಅತಿಥಿಗಳು ಆನ್ಲೈನ್ ಇರುವರು.


ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator