ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ಗುರುದತ್ ಎಂಬ ದುರಂತ ನಾಯಕ

October 10, 2008 - 8:02pm — Chamaraj
Guru Dutt.jpg

ಆತ ದುರಂತ ನಾಯಕ. ಆತನ ಜೀವನದಲ್ಲಷ್ಟೇ ಅಲ್ಲ, ನಟಿಸಿದ ಹಾಗೂ ನಿರ್ಮಿಸಿದ ಚಿತ್ರಗಳುದ್ದಕ್ಕೂ ಈ ದುರಂತ ಪ್ರತಿಫಲಿಸಿದೆ. ಕನ್ನಡಿಗನಾಗಿ ಹುಟ್ಟಿ, ಬಂಗಾಳಿಯಾಗಿ ಬೆಳೆದು, ನಟ-ನಿರ್ದೇಶಕನಾಗಿ ಅಮರನಾದ ಗುರುದತ್ ಭಾರತೀಯ ಚಿತ್ರರಂಗ ಕಂಡ ವಿಶಿಷ್ಟ ಪ್ರತಿಭೆ. ನಿದ್ದೆ ಗುಳಿಗೆ ಸೇವಿಸಿ ಆತ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ೪೪ ವರ್ಷಗಳು. ಹಿಂದಿ ಚಿತ್ರರಂಗ ಎಂದೂ ಮರೆಯದ ಈ ಮಹಾನ್ ಪ್ರತಿಭೆ ಇವತ್ತಿಗೂ ದಂತಕಥೆ.

ಗುರುದತ್ ಹುಟ್ಟಿದ್ದು ಕನ್ನಡಿಗನಾಗಿ. ಶಿವಶಂಕರರಾವ್ ಪಡುಕೋಣೆ ಹಾಗೂ ವಸಂತಿ ದಂಪತಿಗಳ ಮಗನಾಗಿ ೧೯೨೫ರ ಜುಲೈ ೯ ರಂದು ಬೆಂಗಳೂರಿನಲ್ಲಿ ಜನಿಸಿದಾಗ ಆತನ ತಾಯಿಗೆ ಕೇವಲ ೧೬ ವರ್ಷದ ಪ್ರಾಯ. ಗುರುದತ್‌ನ ಮೊದಲ ಹೆಸರು ವಸಂತ ಕುಮಾರ್. ಅಪ್ಪ ಶಿವಶಂಕರ್ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ ನೆಲೆಸಿದ್ದವರು. ಬ್ಯಾಂಕ್ ನೌಕರಿಗೆ ಹೋಗುವ ಮೊದಲು ಇಲ್ಲಿಯೇ ಶಿಕ್ಷಕರಾಗಿದ್ದ ಶಿವಶಂಕರರಾವ್ ಅವರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿಲ್ಲ. ತಮ್ಮಂದಿರಾದ ಆತ್ಮಾರಾಮ್, ದೇವಿದಾಸ್ ಹಾಗೂ ತಂಗಿ ಲಲಿತಾ ಅವರೊಂದಿಗೆ ಕಷ್ಟಕರ ಬಾಲ್ಯ ಕಳೆದ ಗುರುದತ್, ಕ್ರಮೇಣ ಆಸಕ್ತಿ ತೋರಿದ್ದು ಸಿನಿಮಾ ಪೋಸ್ಟರ್‌ಗಳ ಚಿತ್ರಗಳನ್ನು ಬಿಡಿಸುವತ್ತ.

ಬ್ಯಾಂಕ್ ಉದ್ಯೋಗಿಯಾಗಿದ್ದ ತಂದೆಗೆ ಕೋಲ್ಕತಾದ ಭವಾನಿಪುರಕ್ಕೆ ವರ್ಗವಾಯಿತು. ಗುರುದತ್ ಪ್ರಾಥಮಿಕ ವಿದ್ಯಾಭ್ಯಾಸ ಆಗಿದ್ದು ಅಲ್ಲೇ. ಬಂಗಾಳಿ ಭಾಷೆ ಸಹಜವಾಗಿ ರೂಢಿಯಾಗಿದ್ದರಿಂದ ಆತನ ಪ್ರತಿಯೊಂದು ಕೆಲಸದಲ್ಲಿಯೂ ಬಂಗಾಳಿ ಪ್ರಭಾವ ಎದ್ದು ಕಾಣುತ್ತಿತ್ತು. ಮುಂದೆ ಹೊಟ್ಟೆಪಾಡಿಗಾಗಿ ಮುಂಬೈ ಚಿತ್ರೋದ್ಯಮಕ್ಕೆ ಬಂದಾಗ, ತನ್ನ ಹೆಸರಿನೊಂದಿಗೆ ಇದ್ದ ತಂದೆಯ ಹೆಸರು ಹಾಗೂ ಪಡುಕೋಣೆ ಎಂಬ ಅಡ್ಡಹೆಸರನ್ನು ತೆಗೆದುಹಾಕಿ, ಗುರುದತ್ ಎಂದು ಗುರುತಿಸಿಕೊಂಡರು. ಕನ್ನಡ ಹಾಗೂ ಕನ್ನಡಿಗರೊಂದಿಗೆ ಆತನ ಸಂಬಂಧ ಶಾಶ್ವತವಾಗಿ ಕಡಿದುಹೋಯಿತು.

ಆದರೆ, ಸಿನಿಮಾ ನಟ ಹಾಗೂ ನಿರ್ದೇಶಕನಾಗಿ ಗುರುದತ್ ಸಾಧಿಸಿದ್ದು ಅಪಾರ. ಕಲಾಸಕ್ತಿ ಆತನನ್ನು ಆ ಕಾಲದ ಖ್ಯಾತ ನೃತ್ಯಪಟು ಉದಯಶಂಕರ್ ಅವರ ನಾಟಕ ಶಾಲೆಯತ್ತ ಸೆಳೆಯಿತು. ಹದಿನಾರು ವರ್ಷದ ಗುರುದತ್ ಆ ಕಾಲದಲ್ಲಿಯೇ ವರ್ಷಕ್ಕೆ ೭೫ ರೂಪಾಯಿಗಳಂತೆ ಐದು ವರ್ಷದ ಶಿಷ್ಯವೇತನ ಗಳಿಸಿದ್ದ. ಆದರೆ, ಎರಡನೇ ಮಹಾಯುದ್ಧದ ಪರಿಣಾಮವಾಗಿ ನಾಟಕ ಶಾಲೆ ಮುಚ್ಚಿತು. ಕೋಲ್ಕತಾದಲ್ಲಿ ದೂರವಾಣಿ ನಿರ್ವಾಹಕನಾಗಿ, ಪುಣೆಯ ಪ್ರಭಾತ್ ಫಿಲ್ಮ್ ಕಂಪನಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡಿದ ನಂತರ, ಮುಂಬೈಗೆ ತೆರಳಿದ ಗುರುದತ್ ಕೊನೆಯವರೆಗೂ ಉಳಿದಿದ್ದು, ಬೆಳೆದಿದ್ದು ಅಲ್ಲಿಯೇ. ೧೯೪೫ರಲ್ಲಿ ನಟನಾಗಿ, ಸಹ ನಿರ್ದೇಶಕನಾಗಿ ’ಲಖ್ರಾನಿ’ ಚಿತ್ರದ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಗುರುದತ್, ’ಹಮ್ ಏಕ್ ಹೈ’ ಚಿತ್ರದ ಮೂಲಕ ನೃತ್ಯ ನಿರ್ದೇಶನವನ್ನೂ ಮಾಡಿದ.

ಆದರೆ, ಅದೃಷ್ಟ ಒಲಿಯಲಿಲ್ಲ. ಮುಂದಿನ ಕೆಲ ವರ್ಷಗಳನ್ನು ಅನಾಮಧೇಯನಂತೆ ಕಳೆದ ಗುರುದತ್ ಮತ್ತೆ ಖ್ಯಾತಿಗೆ ಬಂದಿದ್ದು ’ಬಾಝಿ’ ಸಿನಿಮಾ ನಿರ್ದೇಶನದ ಮೂಲಕ. ಆ ಚಿತ್ರದಲ್ಲಿ ಬಳಸಿದ ಸಮೀಪ ದೃಶ್ಯಗಳ ಚಿತ್ರಣ ಕಲೆ ’ಗುರುದತ್ ಶಾಟ್’ ಎಂದೇ ಜನಪ್ರಿಯವಾಯಿತು. ಹಲವಾರು ಪ್ರಥಮಗಳಿಗೆ ಸಾಕ್ಷಿಯಾದ ’ಬಾಝ’ ಚಿತ್ರ ಗುರುದತ್‌ಗೆ ಮುಂದೆ ತಮ್ಮ ಪತ್ನಿಯಾಗಲಿರುವ ಗೀತಾ ಅವರನ್ನು ಪರಿಚಯಿಸಿತು. ನಂತರದ ಎರಡು ಚಿತ್ರಗಳು ವಿಫಲವಾದರೂ ’ಆರ್ ಪಾರ್’ ಚಿತ್ರ ಯಶಸ್ವಿಯಾಯಿತು. ಮುಂದೆ ಬಂದಿದ್ದೆಲ್ಲ ಹಿಟ್ ಚಿತ್ರಗಳೇ. ೧೯೫೭ರಲ್ಲಿ ತೆರೆ ಕಂಡ ’ಪ್ಯಾಸಾ’ ಹಿಂದಿ ಚಿತ್ರರಂಗದಲ್ಲಿ ಮೈಲಿಗಲ್ಲು ಎಂದೇ ಗುರುತಿಸಲ್ಪಟ್ಟಿತು. ನಿರಾಸಕ್ತ ಪ್ರಪಂಚದಿಂದ ತಿರಸ್ಕೃತನಾಗಿ, ಮನ್ನಣೆಯಿಲ್ಲದೇ ಸಾಯುವ ಕವಿಯೊಬ್ಬ, ಮರಣಾನಂತರ ಖ್ಯಾತನಾಗುವ ಕಥೆ ಹೊಂದಿದ್ದ ’ಪ್ಯಾಸಾ’ ಒಂದರ್ಥದಲ್ಲಿ ಗುರುದತ್‌ನ ಆತ್ಮಚರಿತ್ರೆಯಂತೆ.

ದುರಂತಮಯ ವೈಯಕ್ತಿಕ ಜೀವನ ಹೊಂದಿದ್ದ ಗುರುದತ್ ಆ ನೋವನ್ನು ಮರೆಯಲು ಚಿತ್ರ ನಿರ್ಮಾಣ ಹಾಗೂ ನಿರ್ದೇಶನದ ಮೊರೆ ಹೋದ. ತನ್ನ ನೋವು ಹಾಗೂ ಕನಸುಗಳನ್ನು ಚಿತ್ರಗಳ ಮೂಲಕ ಬಿಂಬಿಸಿದ. ಆತ ನಟಿಸಿದ ’ಸಾಹೀಬ್ ಬೀವಿ ಔರ್ ಗುಲಾಮ’,’ಚೌದವೀ ಕಾ ಚಾಂದ’,’ಆರ್ ಪಾರ್’, ’ಸುಹಾಗನ್’ ಇವತ್ತಿಗೂ ಸ್ಮರಣೀಯ. ಆತ ನಟಿಸಿ ನಿರ್ದೇಶಿಸಿದ ’ಕಾಗಜ್ ಕೆ ಫೂಲ್’ ಮತ್ತು ’ಪ್ಯಾಸಾ’ ಚಿತ್ರಗಳು ಇವತ್ತಿಗೂ ಹಿಂದಿ ಚಿತ್ರರಂಗದ ಮೈಲಿಗಲ್ಲುಗಳು.

ಪ್ರೇಮದ ನವಿರು ಭಾವನೆಗಳನ್ನು ಸೊಗಸಾಗಿ ಚಿತ್ರೀಕರಿಸುವ ಮೂಲಕ ಹಿಂದಿ ಸಿನಿಮಾಗಳಿಗೆ ಸೂಕ್ಷ್ಮತೆ ತಂದುಕೊಟ್ಟ ಗುರುದತ್ ತಮ್ಮ ಸಮಕಾಲೀನ ನಟ, ನಿರ್ದೇಶಕರನ್ನು ಪ್ರಭಾವಗೊಳಿಸಿದಾತ. ಅತ್ಯಂತ ಬಡತನದಿಂದ ಬಂದಿದ್ದರೂ ಹಿಂದಿ ಚಿತ್ರರಂಗದ ದಂತಕತೆಯಾದಾತ. ವೈಯಕ್ತಿಕ ಜೀವನದ ನೋವು, ವೃತ್ತಿ ಜೀವನದ ಅನಿವಾರ್ಯತೆಗಳು ತಂದುಕೊಟ್ಟ ಆಘಾತ ಮರೆಯಲಾಗದೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಾಗ ಗುರುದತ್‌ಗೆ ಕೇವಲ ೩೯ ವರ್ಷ ವಯಸ್ಸು.

’ಸುಹಾನೀ ರಾತ್ ಢಲ್ ಚುಕೀ ಹೈ
ನ ಜಾನೇ ತುಮ್ ಕಬ್ ಆವೋಗೇ...’

ಎಂಬ ಆತನ ಚಿತ್ರದ ಹಾಡು ಗುರುದತ್‌ನನ್ನು, ಆತನ ಕೊಡುಗೆಯನ್ನು ಮತ್ತೆ ಮತ್ತೆ ನೆನಪಿಸುತ್ತವೆ.

- ಚಾಮರಾಜ ಸವಡಿ

  • ಗುರುದತ್
  • ದುರಂತ ನಾಯಕ
  • ಪ್ಯಾಸಾ
~.~
  • Chamaraj ರವರ ಬ್ಲಾಗ್
  • Login or register to post comments
  • 141 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗುರುದತ್ ಎಂಬ ದುರಂತ ನಾಯಕ
  • ಅಹ್ವಾನ
  • ಮಹಾಭಾರತ- ಕಿರುತೆರೆ ಚರಿತ್ರೆಯಲ್ಲಿ ಅಮರವಾಗಿ ಉಳಿಯುವ ಮಹಾನ್ ಸೀರಿಯಲ್, ಬಿ. ಆರ್. ಛೋಪ್ರರವರ ಅನುಪಮ ಕೊಡುಗೆ!
  • ಕನ್ನಡ ಚಿತ್ರರಂಗದ ಕೆಟ್ಟ ಟ್ರೆಂಡ್
  • ಮತ್ತೆ ಮತ್ತೆ ಕಾಡುವ ಶಂಕರ್‌‌ನಾಗ್ ನೆನಪು :ಪ್ರೀತಿಯಿಂದ ಪ್ರೀತಿಗಾಗಿ -ಜಿ.ವಿಜಯ್ ಹೆಮ್ಮರಗಾಲ.
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ. ಓದುವುದು ಮತ್ತು ಬರೆಯುವುದು ಅಂದ್ರೆ ಇಷ್ಟ.

ನನ್ನ ಬ್ಲಾಗ್‌: http://chamarajsavadi.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 146 ಅತಿಥಿಗಳು ಆನ್ಲೈನ್ ಇರುವರು.


ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.

— ನಾರದಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator