ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ನೆನಪು: ಎಂ ವ್ಯಾಸ | ಚರ್ಚೆ: ‘ಅನಾಗರಿಕರ ಬಾಂಬ್’ - ಉತ್ತರವೇ? ಪ್ರಶ್ನೆಯೇ?

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಮರೆಯಲಾರದ ಸಣ್ಣ ಕಥೆಗಳು

September 5, 2007 - 4:17am — hamsanandi

ಕೆಲವು ಕಥೆಗಳಿರುತ್ತವೆ. ಎಷ್ಟು ಬಾರಿ ಕೇಳಿದರೂ, ಮತ್ತೆ ಮತ್ತೆ ಕೇಳಬಹುದಾದಂತಹ ಹಥೆಗಳವು. ರಾಮಾಯಣ, ಮಹಾಭಾರತ, ಅಥವ ಶಾಕುಂತಲ ಅಂತಹ ಕತೆಗಳವು. ಗೊತ್ತಿದ್ದರೂ, ಮತ್ತೊಮ್ಮೆ ಅವಕಾಶ ಸಿಕ್ಕರೆ, ಸಿನಿಮಾವೋ, ನಾಟಕವೋ, ಯಕ್ಷಗಾನವೋ, ಮತ್ತೊಂದೋ ಎಲ್ಲಾದರೂ ಆ ಕಥೆಗಳು ಮತ್ತೆ ಮತ್ತೆ ಬಂದರೂ, ಬೇಸರಿಸದೇ ನೋಡುತ್ತೇವೆ. ಮುಂದೇನಾಗುವುದು ಎಂಬ ಕುತೂಹಲವಿಲ್ಲದಿದ್ದರೂ.

ಇನ್ನು ಕೆಲವು ಕಥೆಗಳಿರುತ್ತವೆ. ಒಮ್ಮೆ ಓದಿದ ನಂತರ ಎಷ್ಟೋ ವರ್ಷಗಳವರೆಗೆ, ಮತ್ತೆ ಓದದೆಯೂ, ಕೇಳದೆಯೂ ನೆನಪಿನಲ್ಲಿ ಉಳಿಯುವಂತಹವು ಆ ಕಥೆಗಳು. ಕನ್ನಡದ ಆಸ್ತಿ ಮಾಸ್ತಿ ವೆಂಕಟೇಶಯ್ಯಂಗಾರರ  ಅನೇಕ ಕಥೆಗಳು ಈ ಗುಂಪಿಗೆ ಸೇರುತ್ತವೆ ಎಂದು ನನ್ನ ಎಣಿಕೆ.

ಆದರೆ, ಇವತ್ತು ನಾನು ನೆನಪಿಸಿಕೊಂಡ ಕಥೆಗಳೇ ಬೇರೆ. ಅವುಗಳಲ್ಲೊಂದು ಅಶ್ವತ್ಥರ ನಾಸೀಂ ಬೇಗಂ ಎಂಬ ಕಥೆ. ೧೯೬೫ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿನ  (ಅಥವಾ ಇನ್ನೂ ಮೊದಲದ್ದೇ ಇರಬಹುದು) ಕಾಶ್ಮೀರದ ಚಿತ್ರಣ ಕೊಡುವ ಈ ಕಥೆ ವಿಶಿಷ್ಟವಾದ್ದು. ಕಥೆ ಆರಂಭವಾಗುವಾಗ, ಪಾಕೀಸ್ತಾನೀ ಯೋಧರು ಕಾಶ್ಮೀರಕ್ಕೆ ಮಾರು ವೇಷದಿಂದ ಬಂದು ಬಿಟ್ಟಿರುವ ಸುದ್ದಿ ಬಂದಿದೆ. ನಾಸೀಂ ಬೇಗಂ, ಗಡಿಯ ಬಳಿಯ ಹಳ್ಳಿಯೊಂದರಲ್ಲಿ ಚಹಾ ಮಾರುವ ಪೆಟ್ಟಿಗೆಯಂಗಡಿಯೊಂದನ್ನು ಇಟ್ಟಿರುವ ಇಳಿವಯಸ್ಸಿನ ಮುದುಕಿ. ಈ ಸಮಯದಲ್ಲಿ, ಅವಳ ಅಂಗಡಿಯಲ್ಲಿ ಚಾ ಕುಡಿಯಲು, ಭಾರತದ ಸೈನಿಕರ ಸಮವಸ್ತ್ರ ಧರಿಸಿದ ಐದಾರು ಸೈನಿಕರು ಬರುತ್ತಾರೆ. ಅವರಿಗೆ ಚಹಾ ಮಾಡುತ್ತ, ಅವರ ಮಾತಿನ ಧಾಟಿಯನ್ನು ಕೇಳಿದ ನಾಸೀಮಳಿಗೆ, ಇವರು ಮಾರುವೇಷದಲ್ಲಿರುವ ವಿರೋಧಿ ಪಡೆಯವರು ಎಂದು ಅರ್ಥವಾಗಿಬಿಡುತ್ತೆ. ತಕ್ಷಣ ಮಾಡುತ್ತಿದ್ದ ಚಹಾಗೆ ಅವಳು ವಿಷ ಬೆರೆಸುತ್ತಾಳೆ. ಅವರಿಗೆ ಅದನ್ನು ನೀಡುವಾಗ, ಸೈನಿಕರು, ಮೊದಲು ನೀನು ಕುಡಿ, ಇಲ್ಲದೇ ನಮಗೆ ನೀನು ಮೋಸ ಮಾಡಿದರೆ ಎಂದಾಗ, ಧೈರ್ಯವಾಗಿ ಅದನ್ನು ಕುಡಿಯುತ್ತಾಳೆ; ನಂತರ ಸೈನಿಕರೂ ಅದನ್ನು ಕುಡಿದು ಹೊರಟು ನಾಲ್ಕಾರು ಹೆಜ್ಜೆಹಾಕುವಲ್ಲಿ, ಅವರಿಗೆ ನಡೆದ ವಿಷಯ ಅರ್ಥವಾಗುತ್ತೆ. ಆಗ ನಾಸೀಂ, ನನ್ನ ದೇಶ ನನ್ನ ಜೀವಕ್ಕಿಂತ, ನನ್ನ ನಂಬಿಕೆಗಿಂತ ಹೆಚ್ಚೆಂದು ಹೇಳಿ ಜೀವಬಿಡುತ್ತಾಳೆ. ಕ್ಷಣಗಳಲ್ಲೆ, ಎಲ್ಲಾ ವೈರಿ ಸೈನಿಕರೂ ಸಾಯುತ್ತಾರೆ.

ಕೆಲವು ಸಮಯದ ನಂತರ, ಅಲ್ಲಿಕೆ ಬಂದ ಭಾರತೀಯ ಸೈನಿಕರಿಗೆ, ಈ ಹೆಣಗಳು ಏಕೆ ಹೀಗೆ ಬಿದ್ದಿವೆ ಎಂದು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ.

ಅಶ್ವತ್ಥರ ಹಲವು ಕಥೆಗಳನ್ನು ಬಹಳ ಹಿಂದೆ ಓದಿದ್ದೆ - ಸುಮಾರು ಇಪ್ಪತ್ತೈದು ವರ್ಷಗಳ ನಂತರವೂ ನಾನು ಮರೆಯಲಾರದ ಕಥೆಗಳಲ್ಲೊಂದು - ನಾಸೀಂ ಬೇಗಂ.

-ಹಂಸಾನಂದಿ

  • ಕನ್ನಡ ಕಥೆ
~.~
  • hamsanandi ರವರ ಬ್ಲಾಗ್
  • Login or register to post comments
  • 522 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 5, 2007 - 9:53am — udayshanbhag

ಉ: ಮರೆಯಲಾರದ ಸಣ್ಣ ಕಥೆಗಳು

udayshanbhag's picture

ಅದ್ಭುತವಾದ ಕತೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 5, 2007 - 11:47am — shreekant.mishrikoti

ಉ: ಮರೆಯಲಾರದ ಸಣ್ಣ ಕಥೆಗಳು

shreekant.mishrikoti's picture

ಹಿಂದೊಮ್ಮೆ ನನಗೆ ಅಶ್ವತ್ಥರ ಕಥಾಸಂಕಲನದ ಒಂದು ಸಂಪುಟ - ಸುಮಾರು ಸಾವಿರ ಪುಟಗಳದ್ದು - ಸೆಕಂಡ್ ಹ್ಯಾಂಡ್ ಪುಸ್ತಕದ ಅಂಗಡಿಯಲ್ಲಿ ಸಿಕ್ಕಿತು . ಅದರಲ್ಲಿರುವ ಕಥೆಗಳು ಬಹುತೇಕ ಚೆನ್ನಾಗಿದ್ದವು . ಇನ್ನೊಮ್ಮೆ ಓದಬೇಕಿದೆ. ನನಗೆ ಒಂದು ಕಥೆ ನೆನಪಿನಲ್ಲುಳಿದಿದೆ .

೩೦-೪೦ ವರ್ಷಗಳ ಹಿಂದಿನ ಕತೆ ; ಆಗ ಗಂಡ ಸರಕಾರೀ ಅಧಿಕಾರಿ ; ಪತ್ನಿ ಗರ್ಭಿಣಿ ; ಗರ್ಭಪಾತವಾಗುತ್ತದೆ ; ಡಾಕ್ಟರರು ’ನೀವು ಇನ್ನು ಮೇಲೆ ಎಚ್ಚರದಿಂದಿರಬೇಕು ;ಆಕೆ ಇನ್ನೊಮ್ಮೆ ಗರ್ಭಿಣಿಯಾದರೆ ಅವಳ ಜೀವಕ್ಕೆ ಅಪಾಯ’ ಎನ್ನುತ್ತಾರೆ . ಅವರು ಹೇಳಿದ ರೀತಯೇ ಯಾವ ರೀತಿಯ ಎಚ್ಚರ ವಹಿಸಬೇಕು ಎಂದು ತಿಳಿಸುವಂತಿತ್ತು ; ’ಸೂಕ್ತ ಆಪರೇಶನ್ ಮಾಡಬಲ್ಲೆ ’ ಎಂದೂ ಸೂಚಿಸುತ್ತಾರೆ ; ಆಗ ಅಧಿಕಾರಿ ಗಂಡ - ಅಂಥದೇನೂ ಅಗತ್ಯವಿಲ್ಲ ; ನಾವು ಎಚ್ಚರ ವಹಿಸುತ್ತೇವೆ’ ಎನ್ನುತ್ತಾರೆ . ವೈದ್ಯರು ಮತ್ತೆ ಮತ್ತೆ ತಿಳಿ ಹೇಳಿದರೂ ಇವರು ಕೇಳರು . ತಮ್ಮ ಮೇಲೆ ಅಷ್ಟು ಆತ್ಮವಿಶ್ವಾಸ ಅವರಿಗೆ . ಡಾಕ್ಟರರಾದರೂ ಇನ್ನೇನು ಮಾಡಿಯಾರು ? ಅಧಿಕಾರಿಯ ಮನಸ್ಸಿನ ವಿರುದ್ಧ ಚಿಕಿತ್ಸೆ / ಆಪರೇಶನ್ ಮಾಡಲು ಸಾಧ್ಯವೇ ?

ನಂತರ ಮೂವತ್ತು ವರ್ಷಗಳು ಉರುಳಿವೆ ; ಈ ಮಧ್ಯೆ ಈ ದಂಪತಿಗಳು ಬಹಳೇ ಮಾನಸಿಕ ಕೋಲಾಹಲಕ್ಕೆ ಒಳಗಾಗಿದ್ದಾರೆ . ಸಣ್ಣ ಸಣ್ಣ ವಿಷಯಗಳಿಗೂ ಪರಸ್ಪರ ಕಿರಿಕಿರಿ , ಜಗಳ , ಮನಸ್ತಾಪ ಮಾಡಿಕೊಂಡು ಬಹಳೇ ಕಷ್ಟದಿಂದ ತಮ್ಮನ್ನು ನಿಯಂತ್ರಿಸಿಕೊಂಡಿದ್ದಾರೆ . ಇದೀಗ ರೈಲು ಪ್ರಯಾಣದಲ್ಲಿ ಆ ಹಳೆಯ ಡಾಕ್ಟರರನ್ನು ಅಕಸ್ಮಾತ್ ಭೇಟಿಯಾಗಿ ಹಳೆಯದೆಲ್ಲವನ್ನು ನೆನಪಿಸಿಕೊಂಡಿದ್ದಾರೆ . ಮಾತಿನಲ್ಲಿ ಆ ಡಾಕ್ಟರರು ಹೇಳುತ್ತಾರೆ - ನಿಮಗೆ ತೊಂದರೆಯಾಗಬಾರದೆಂದು ನಿಮ್ಮ ಇಷ್ಟಕ್ಕೆ ವಿರುದ್ಧವಾಗಿದ್ದರೂ ನಿಮ್ಮ ಒಳ್ಳೆಯದಕ್ಕೆ ಆ ಆಪರೇಷನ್ ಆಗಲೇ ಮಾಡಿ ಮುಗಿಸಿದೆ.

ಅಯ್ಯೋ ದುರ್ದೈವವೇ , ಇದು ಅವರಿಗೆ ಗೊತ್ತಿದ್ದರೆ ಇಷ್ಟೆಲ್ಲ ಕಷ್ಟ ಪಡುವದು, ಅದೂ ಮೂವತ್ತು ವರ್ಷ ಕಾಲ , ತಪ್ಪುತ್ತಿತ್ತೇ !

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮರೆಯಲಾರದ ಸಣ್ಣಕಥೆಗಳು -೨
  • ಮರೆಯಲಾರದ ಸಣ್ಣ ಕಥೆಗಳು - ೩ : ರಂಗನಹಳ್ಳಿ ರಾಮ
  • ಪ್ರೇಮದ ಓಲೆ
  • ಮುಲ್ಲಾ ನಸ್ರುದ್ದೀನ್:೬.ಸಾಗಿಸಿದ್ದು ಏನು? ೭. ಅದ್ಭುತವಾದ ಬೇಟೆ ೮. ಮುಖವನ್ನು ಕದ್ದಾರು
  • ಮುಲ್ಲಾ ಕತೆ: ೩: ಆಚೆ ಈಚೆ ೪: ಒಂಟೆ ೫: ಕತ್ತೆ ಮನುಷ್ಯ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬರಲಿರುವ ಪೊಲ್ಲುಶನ್ ಫ್ರೀ, ಕಡಿಮೆ ವೆಚ್ಚದ ಕಾರುಗಳು!
  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Sex - ಕಾಮ; ಅದರ ಮಹತ್ವ !
    July 26, 2008 - 5:21am
  • venkatesh
    ಉ: ಒಂದು ಜೋಕ್ಸ (??????)
    July 26, 2008 - 4:16am
  • venkatesh
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 26, 2008 - 4:11am
  • shaamala
    ಉ: ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
    July 25, 2008 - 11:36pm
  • Jayalaxmi.Patil
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 9:39pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 9:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:35pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:33pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:13pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator