ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › ನವರಾತ್ರಿಯ ದಿನಗಳು

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ನವರಾತ್ರಿಯ ನಾಲ್ಕನೇ ದಿನ

October 16, 2007 - 2:05am — hamsanandi

ಇವತ್ತು ದಸರಾ ಹಬ್ಬದ ನಾಲ್ಕನೇ ದಿನ. ಈಗಾಗಲೇ ಮೊದಲ ಮೂರು ದಿನಗಳಲ್ಲಿ, ತ್ಯಾಗರಾಜರ, ಮುತ್ತಯ್ಯಭಾಗವತರ ಮತ್ತು ಶಾಮಾಶಾಸ್ತ್ರಿ ಅವರ ಒಂದೊಂದು ರಚನೆಗಳ ಬಗ್ಗೆ ಬರೆದಿದ್ದೆ. ಕೇಳಿಲ್ಲದವರು ಕೇಳಿ ಆನಂದಿಸಿ.

ನವರಾತ್ರಿಯ ನಾಲ್ಕನೇ ದಿನ ತಿರುವನಂತಪುರದ ನವರಾತ್ರಿ ಮಂಡಪದಲ್ಲಿ ಹಾಡುವ ಸ್ವಾತಿ ತಿರುನಾಳರ ಕೃತಿ ತೋಡಿ ರಾಗದಲ್ಲ್ರಿರುವ ಭಾರತಿ ಮಾಮವ ಎಂಬ ರಚನೆ. ಅಂದಹಾಗೆ, ಸಂಗೀತದ ಸೊಗಸು ಬರೀ ಮಾತಾಡಿದಾಗ- ಬರೆದಾಗ ಸಿಗುವುದಿಲ್ಲವಲ್ಲ? ಹಾಗಾಗಿ, ನೆನ್ನೆ ಇಲ್ಲಿ ನಡೆದ ಸಂಗೀತ ಕಚೇರಿಗೆ ಹೋಗುವ ಅವಕಾಶ ಸಿಕ್ಕಿತು ನನಗೆ- ಹಾಗಾಗಿ ನನ್ನ ಬರೀ ಮಾತುಗಳಲ್ಲೂ ಸ್ವಲ್ಪ ಅರ್ಥ ಕೂಡಿದಂತಾಯಿತು ನನಗೆ. ನನ್ನ ಬಾಲ್ಯದಲ್ಲಿ, ನನ್ನ ಊರಿನಲ್ಲಿ ನಡೆಯುತ್ತಿದ್ದ ನವರಾತ್ರಿ-ಗಣೇಶೋತ್ಸವದ ನೆನಪು ಮರುಕಳಿಸಿತು.

ಇವತ್ತು ನಾನು ವಿವರಿಸಹೊರಡಲಿರುವ ದೇವೀ ಪರವಾದ ಕೃತಿ ೨೦ನೇ ಶತಮಾನದಲ್ಲಿ ಬಂದ ಒಬ್ಬ ಮಹಾನ್ ಕಲಾವಿದರ ರಚನೆ. ಇವರು ಸಂಗೀತಗಾರರಷ್ಟೇ ಅಲ್ಲದೆ, ತಮಿಳು ಸಿನಿಮಾ ರಂಗದಲ್ಲೂ ಹೆಸರು ಮಾಡಿದ್ದವರು. ಇವರೇ ಜಿ.ಎನ್.ಬಿ. ಎಂಬ ಹೆಸರಿನಲ್ಲೇ ಚಿರಪರಿಚಿತರಾದ ಜಿ.ಎನ್.ಬಾಲಸುಬ್ರಮಣಿಯನ್.

ಜಿ.ಎನ್.ಬಿ. (೧೯೧೦- ೧೯೬೫) ಸಂಗೀತ ರಂಗಕ್ಕೆ ಪರಿಚಿತರಾಗಿದ್ದು ಒಂದು ವಿಶಿಷ್ಟ ಸಂದರ್ಭದಲ್ಲಂತೆ. ಒಮ್ಮೆ, ಯಾರೋ ವಿದ್ವಾಸರು ಒಂದು ಕಚೇರಿಗೆ ಬರಲಾಗಲಿಲ್ಲ. ಆಗ, ಆ ಸಮಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದ ಜಿ.ಎನ್.ಬಿ. ಅವರನ್ನು, ಅವರ ಸ್ಥಾನ ತುಂಬಲು ಕಳಿಸಲಾಯಿತಂತೆ. ಅಂದು ತಮ್ಮ ಶೈಲಿಯಿಂದ ಇವರು ಎಲ್ಲ ರಸಿಕರ ಮನಗೆದ್ದುಬಿಟ್ಟ ಜಿ.ಎನ್.ಬಿ. ಮತ್ತೆ ಹಿಂತಿರುಗಿ ನೋಡಲಿಲ್ಲ.

ಕೇವಲ ಐವತ್ತೈದು ವರ್ಷದ ಕಿರಿಯ ವಯಸ್ಸಿನಲ್ಲೇ ರಸಿಕರು ಇವರನ್ನು ಕಳೆದುಕೊಳ್ಳಬೇಕಾಯಿತು. ಆದರೆ, ಇವರ ಹಲವಾರು ಶಿಷ್ಯರು ಇವರ ಪರಂಪರೆಯನ್ನು ಮುಂದುವರೆಸಿಕೊಂಡುಹೋಗಿದ್ದಾರೆ. ಪ್ರಸಿದ್ಧ ಸಂಗೀತಗಾರರಾದ ಎಮ್.ಎಲ್.ವಸಂತಕುಮಾರಿ, ತ್ರಿಶೂರು ರಾಮಚಂದ್ರನ್, ರಾಧಾ-ಜಯಲಕ್ಷ್ಮಿ ಇವರೆಲ್ಲ ಜಿ.ಎನ್.ಬಿ. ಪರಂಪರೆಯವರೇ.

ಜಿ.ಎನ್.ಬಿ. ಅವರು ಸುಮಾರು ಐವತ್ತಕ್ಕೂ ಹೆಚ್ಚು ರಚನೆಗಳನ್ನು ಸಂಸ್ಕೃತ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಚಿಸಿದ್ದಾರೆ. ಹಿಂದೆ ಕೇಳಿಲ್ಲದ ಹೊಸ ರಾಗಗಳನ್ನು ಸೃಷ್ಟಿಸಿ, ಅದರಲ್ಲಿ ಕೃತಿಗಳನ್ನು ಮಾಡಿದ್ದಾರೆ. ಆದರೆ, ಇವರು ತಮ್ಮ ಕಚೇರಿಗಳಲ್ಲಿ ತಮ್ಮ ಕೃತಿಗಳನ್ನು ಹೆಚ್ಚಾಗಿ ಹಾಡುತ್ತಿರಲಿಲ್ಲ ಎಂದು ಕೇಳಿದ್ದೇನೆ.

ಈಗ ಇವತ್ತು ನವರಾತ್ರಿಯ ನಾಲ್ಕನೇ ದಿನ ಕೇಳಿ. ಜಿ.ಎನ್.ಬಿ. ಅವರು ರಚಿಸಿದ, ಅಮೃತಬೇಹಾಗ್ ರಾಗದ ಕಮಲಚರಣೇ ಕನಕಾರುಣೇ ಎಂಬ ಕೃತಿ. ಹಾಡಿರುವವರು ಜಿ.ಎನ್.ಬಿ. ಪರಂಪರೆಯ ಹಾಡುಗಾರ್ತಿಯರಾದ ಪ್ರಿಯ ಸಹೋದರಿಯರು:ಷಣ್ಮುಖಪ್ರಿಯ ಮತ್ತು ಹರಿಪ್ರಿಯ.

ಅಮೃತಬೇಹಾಗ್ ರಾಗ ಜಿ.ಎನ್.ಬಿ. ಅವರ ಹೊಸ ಕಲ್ಪನೆಯೇ. ಆ ಮೊದಲೇ ಪ್ರಸಿದ್ಧವಾಗಿದ್ದ ಅಮೃತ ವರ್ಷಿಣಿ ಮತ್ತು ಬೇಹಾಗ್ ರಾಗಗಳಿಂದ ಕೆಲವು ಅಂಶಗಳನ್ನು ಹೆಕ್ಕಿ ತೆಗೆದುಕೊಂಡು, ಈ ರಾಗಕ್ಕೊಂದು ರೂಪಕೊಟ್ಟಿದ್ದಾರೆ. ರಾಗದ ಸ್ವರೂಪ ತಿಳಿಯುವಂತಹ ಉತ್ತಮ ಚಿಟ್ಟೆಸ್ವರವನ್ನೂ ಹೊಸೆದಿದ್ದಾರೆ.

ಕೃತಿಯ ಸಾಹಿತ್ಯ ಸಂಸ್ಕೃತದಲ್ಲಿದೆ. ಕೊನೆಯ ಸಾಲಿನಲ್ಲಿ ಬರುವ ವಿಮರ್ಶಾನಂದ ಎಂಬುದು ಜಿ.ಎನ್.ಬಿ. ಅವರ ಅಂಕಿತ.

-ಹಂಸಾನಂದಿ

‹ ನವರಾತ್ರಿಯ ಮೂರನೆಯ ದಿನಮೇಲಿನ ಪುಟಕ್ಕೆನವರಾತ್ರಿಯ ಐದನೆಯ ದಿನ ›
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • Printer-friendly version
  • Login or register to post comments
  • 654 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಾತ್ರಿಯ ಒಂಬತ್ತನೆಯ ದಿನ
  • ನವರಾತ್ರಿಯ ಎಂಟನೇ ದಿನ
  • ನವರಾತ್ರಿಯ ಮೂರನೆಯ ದಿನ
  • ನವರಾತ್ರಿಯ ಐದನೆಯ ದಿನ
  • ನವರಾತ್ರಿಯ ಮೊದಲ ದಿನ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಸೊಂಟದ ವಿಷಯ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
  • ಕೊನೆಗೂ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡಿದರು!
  • ಓದಿದ್ದು ಕೇಳಿದ್ದು ನೋಡಿದ್ದು-2
  • ನೀನು ಯಾರೆ
  • ಚೈನಾ ೧೦೦ ನಾವು ೦
  • ಹರುಷ ತಂದ ಆರು ದಿನಗಳು (ನಮ್ಮೂರೇ ನನಗೆ ಮೇಲು| ಈ ಊರಿಗೆ ಕರೆದು ತಂದಿರುವುದು ಹಣದ ಗೀಳು|)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕುಹೂ ದನಿಯು ಕಿವಿ ತೂತ ಕೊರೆದಿತ್ತು!
    August 29, 2008 - 1:13pm
  • kannadakanda
    ಉ: ಬಿಡ್ತಾರ್‍
    August 29, 2008 - 1:09pm
  • hpn
    ಉ: ತಕ್ಕಮಟ್ಟಿಗೆ ವಿಕಿಪೀಡಿಯಾದ ಒಂದು ವಿಸ್ತೃತ ಪರಿಚಯ
    August 29, 2008 - 1:09pm
  • srinivasps
    ಉ: ಕುಹೂ ದನಿಯು ಕಿವಿ ತೂತ ಕೊರೆದಿತ್ತು!
    August 29, 2008 - 1:06pm
  • kannadakanda
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 1:05pm
  • kannadakanda
    ಉ: ಪೆಱೆ/ಹೆಱೆ
    August 29, 2008 - 12:59pm
  • madhava_hs
    ಉ: ಉನ್ನತ ಶಿಕ್ಷಣದಲ್ಲಿ ಕನ್ನಡ ಸಾಧ್ಯವೇ??
    August 29, 2008 - 12:57pm
  • kannadakanda
    ಉ: must, can, may - ಕನ್ನಡದಲ್ಲಿ ಸಮಗಳೇನು?
    August 29, 2008 - 12:56pm
  • vikashegde
    ಉ: ಅಬ್ಬ, ರಾಷ್ತ್ರಕ್ಕೇ ಅವಮಾನ!
    August 29, 2008 - 12:37pm
  • roshan_netla
    ಉ: ಓದಿದ್ದು ಕೇಳಿದ್ದು ನೋಡಿದ್ದು-2
    August 29, 2008 - 12:12pm
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 43 ಅತಿಥಿಗಳು ಆನ್ಲೈನ್ ಇರುವರು.


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator