ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ನವರಾತ್ರಿಯ ದಿನಗಳು

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ನವರಾತ್ರಿಯ ಒಂಬತ್ತನೆಯ ದಿನ

October 20, 2007 - 5:46am — hamsanandi

ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ.

ಮೈಸೂರು ವಾಸುದೇವಾಚಾರ್ಯರು ೨೦ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು ೩೦೦ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ, ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ ಮೂಡಿಬಂದ ಕೃತಿಗಳಲ್ಲಿ ಇವರದ್ದು ದೊಡ್ಡ ಪಾಲು ಇರುತ್ತದೆ ಎನ್ನಬಹುದು.

ಕನಕಪುರದಲ್ಲಿ ಹುಟ್ಟಿದ ವಾಸುದೇವಾಚಾರ್ಯರು ತಮ್ಮ ಜೀವನದ ಬಹುಪಾಲು ಭಾಗವನ್ನು ಮೈಸೂರಿನ ಒಡೆಯರ ಆಶ್ರಯದಲ್ಲಿ ಕಳೆದರು. ಅಷ್ಟೇ ಅಲ್ಲ, ಮೈಸೂರಿನ ಕೊನೆಯ ದೊರೆ ಜಯಚಾಮರಾಜೇಂದ್ರ ಒಡೆಯರಿಗೆ ಇವರು ಸಂಗೀತಗುರುಗಳು ಕೂಡ. ತಮ್ಮ ರಚನೆಗಳಲ್ಲಿ ವಾಸುದೇವ ಎಂಬ ಅಂಕಿತವನ್ನು ಇಟ್ಟಿರುತ್ತಾರೆ. ಅಭಿನವ ತ್ಯಾಗರಾಜರೆಂದೇ ಪ್ರಸಿದ್ಧರಾದ ವಾಸುದೇವಾಚಾರ್ಯರು ಬರಹಗಾರರು ಕೂಡಾ. ಸಂಗೀತ ಕ್ಷೇತ್ರದಲ್ಲಿ ತಮ್ಮ ಅನುಭವವನ್ನು ’ನಾ ಕಂಡ ಕಲಾವಿದರು’ ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ.

ತಮ್ಮ ಗುರುಗಳಾದ ವಾಸುದೇವಾಚಾರ್ಯರ ಬಗ್ಗೆ ಜಯಚಾಮರಾಜ ಒಡೆಯರು ಮಾತಾಡಿರುವ ಧ್ವನಿಮುದ್ರಿಕೆಯೊಂದು ಇಲ್ಲಿದೆ. ಕೇಳಿ.

ಮಹಾನವಮಿಯ ಸರಸ್ವತಿ ಪೂಜೆಯ ಪ್ರಯುಕ್ತ, ಇಂದು ಇವರ ಸಂಸ್ಕೃತ ಭಾಷೆಯಲ್ಲಿರುವ ಹಿಂದೋಳ ರಾಗದ ಕೃತಿ ಮಾಮವತು ಶ್ರೀ ಸರಸ್ವತೀ ಎಂಬ ರಚನೆಯನ್ನು ಇಲ್ಲಿ ಕ್ಲಿಕ್ಕಿಸಿ ಕೇಳಿ. ಹಾಡಿರುವವರು ಶ್ರೀಮತಿ ಸಂಗೀತಾ ಕೃಷ್ಣ.
ತಿರುವನಂತಪುರದಲ್ಲಿ, ನವರಾತ್ರಿಯ ಒಂಬತ್ತನೆ ದಿವಸ ಹಾಡುವ ಕೃತಿ, ಪಾಹಿ ಪರ್ವತ ನಂದಿನಿ ಎಂಬ ಆರಭಿ ರಾಗದ ರಚನೆ, ಅದನ್ನು ಮ್ಯೂಸಿಕ್ ಇಂಡಿಯಾ ತಾಣದಲ್ಲಿ ಇಲ್ಲಿ ಕೇಳಬಹುದು. ಇದೇ ಸ್ವಾತಿ ತಿರುನಾಳರ ನವರಾತ್ರಿ ಕೃತಿಗಳಲ್ಲಿ ಕೊನೆಯದು.
ನಾಳೆ ವಿಜಯದಶಮಿ.  ಶ್ರೀ ಚಾಮುಂಡೇಶ್ವರಿಯ ಉತ್ಸವ ಹೋಗುವ ದಿವಸ. ಆ ಸಮಯದ ವೈಭವಕ್ಕೆ ತಕ್ಕ ಕೊನೆಯ ರಚನೆಯೊಂದಿಗೆ ನಾಳೆ ಈ ಮಾಲಿಕೆಯನ್ನು ಮುಗಿಸುತ್ತೇನೆ.
-ಹಂಸಾನಂದಿ

‹ ನವರಾತ್ರಿಯ ಎಂಟನೇ ದಿನಮೇಲಿನ ಪುಟಕ್ಕೆನವರಾತ್ರಿಯ ಹತ್ತನೇ ದಿನ ›
  • ಜ್ಞಾನವಾಹಿನಿ
  • ದಸರಾ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • Printer-friendly version
  • Login or register to post comments
  • 714 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಚನ + ಟಿಪ್ಪಣಿ
  • ಸಾಹಿತ್ಯ
  • ದೇವರಿಗೊಂದು ಮನವಿ
  • ಅನಂತಮೂರ್ತಿಯವರ 'ಋಜುವಾತು' ಪುಸ್ತಕ ಬಿಡುಗಡೆ ಮತ್ತು ಸಂವಾದ
  • ಆಶಯ ಗೆಳೆಯ/ಗೆಳತಿ ಯರಿಗೆ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 491 ಅತಿಥಿಗಳು ಆನ್ಲೈನ್ ಇರುವರು.


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator