ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಧರ್ಮವೆ ಜಯವೆಂಬ ದಿವ್ಯ ಮಂತ್ರ

September 24, 2008 - 6:01am — hamsanandi

 

ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ

ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ ಮಾಡುವವನ ಹೆಸರ ಮಗನಿಗಿಡಬೇಕು ! 

 


ಎಂತಹ ಸಾಲುಗಳು ಅಲ್ಲವೇ? ಧರ್ಮದ ಹೆಸರಲ್ಲಿ ಕಚ್ಚಾಡುವವರಿಗೆ, ಕರುಣೆ , ಕ್ಷಮೆ ಅನ್ನುವುದನನ್ನು ನಾವು ಎಂದೂ ಮರೆಯಬಾರದೆಂದು ಎತ್ತಿ ಹೇಳುವ ಸಾಲುಗಳಿವು. ಜೊತೆಗೆ ಇಂತಹ ಯೋಚನಗಳು ನಮ್ಮಲ್ಲಿ ಎಂದಿಗೂ ಇದ್ದವು, ಇಂದೂ ಇರಬೇಕು ಎಂದು ಕನ್ನಡಿ ಇಟ್ಟು ತೋರುವ ಸಾಲುಗಳಿವು.

ಆದರೆ ನಿಜವಾಗಿ ನಾನು ಹೇಳಹೊರಟದ್ದೇ ಬೇರೆ ವಿಷಯ - ವಿಷಯಾಂತರ ಸಾಕು. ಕಳೆದ ವಾರ ಇಲ್ಲಿ ಒಂದು ಒಳ್ಳೇ ಸಂಗೀತ ಕಚೇರಿ ಕೇಳಿದೆ. ಅದು ನಡೆದದ್ದು ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟ ನಡೆಸಿದ  ಕನ್ನಡೋತ್ಸವ-೨೦೦೮ ರಲ್ಲಿ.

ಹಾಡುಗಾರರು ರಾಘವನ್ ಮಣಿಯನ್. ಡಾ|ಬಾಲಮುರಳಿಕೃಷ್ಣ ಅವರ ಶಿಷ್ಯ. ಅವರು ಕನ್ನಡಿಗರಲ್ಲದಿದ್ದರೂ, ಕನ್ನಡಕೂಟದಲ್ಲಿ ನಡೆಯುವ ಕಚೇರಿಯೆಂದು, ಪೂರ್ತಿ ಕಾರ್ಯಕ್ರಮವನ್ನು ಕನ್ನಡದಲ್ಲಿರುವ ರಚನೆಗಳಿಂದಲೇ ಕಳೆಕಟ್ಟಿಸಿದರು. ಅವರು ಹಾಡಿದ ಹಾಡುಗಳಲ್ಲಿ ಮೇಲೆ ಹೇಳಿದ ಧರ್ಮವೆ ಜಯವೆಂಬ ದಿವ್ಯ ಮಂತ್ರ ಕೂಡ ಒಂದಾಗಿತ್ತು.

ಇದರ ಜೊತೆಗೆ, ಈ ಕಚೇರಿ ಇನ್ನೊಂದು ನಿಟ್ಟಿನಿಂದ ನನ್ನ ಮಟ್ಟಿಗೆ ವಿಶೇಷವಾಗಿತ್ತು. ಸಾಧಾರಣವಾಗಿ, ಕರ್ನಾಟಕ ಸಂಗೀತ ಕಚೇರಿಯೆಂದರೆ ತ್ಯಾಗರಾಜರ ರಚನೆಗಳು ಒಂದೆರಡಾದರೂ ಇರುವುದು ರೂಢಿ. ಆದರೆ ತ್ಯಾಗರಾಜರು ಕನ್ನಡದಲ್ಲಿ ರಚಿಸಿಲ್ಲವಲ್ಲ! ಹಾಗಾಗಿ ರಾಘವನ್ ಕನ್ನಡಕ್ಕೆ ಅನುವಾದಿಸಿದ ತ್ಯಾಗರಾಜರ ಕೃತಿಯೊಂದನ್ನು ಹಾಡಿದರು. ತ್ಯಾಗರಾಜರ ಮಾಯಾಮಾಳವಗೌಳ ರಾಗದ ’ಮೇರು ಸಮಾನ ಧೀರ’ ಅನ್ನುವ ರಚನೆಯನ್ನು ಕನ್ನಡಕ್ಕೆ ತಂದಿದ್ದು ನಾನೇ ಎನ್ನುವುದು ನನಗೆ ಒಂದು ಹೆಮ್ಮೆ Smiling ಮತ್ತೆ, ಒಬ್ಬ ಹಾಡುಗಾರರು, ಅದನ್ನು ಕಚೇರಿಯಲ್ಲಿ ನೂರಾರು ಜನರ ಮುಂದೆ ಹಾಡಿ ಅದಕ್ಕೆ ಜೀವ ಕೊಟ್ಟರು ಅನ್ನುವುದಂತೂ ಬಹಳ ಸಂತೋಷ ತಂದಿತು.

ಈ ಕಚೇರಿಯ ಬಗ್ಗೆ ಇನ್ನೂ ವಿವರವಾಗಿ ಕೆಳಗಿನ ಕೊಂಡಿಯಲ್ಲಿ ಬರೆದಿದ್ದೇನೆ. ಹೋಗಿ ಓದಿ. ಅಲ್ಲೇ ಕಚೇರಿಯ ಕೆಲವು ತುಣುಕುಗಳನ್ನು ಕೇಳಲೂ ಬಹುದು.

ಹೀಗೊಂದು ವಿಶೇಷ ಸಂಗೀತ ಕಚೇರಿ

ಕಡೆಗೆ ಒಂದು ತಿಲ್ಲಾನವನ್ನು ಕನ್ನಡದಲ್ಲೇ ರಾಘವನ್ ಅವರು ರಚಿಸಿದ್ದು ಕೂಡ ಬಹಳ ಮೆಚ್ಚುವಂತಹ ಸಂಗತಿ.

-ಹಂಸಾನಂದಿ

 

 

 

  • ಅನುವಾದ
  • ಉತ್ತರ ಕ್ಯಾಲಿಫೋರ್ನಿಯಾ ಕನ್ಡಡ ಕೂಟ
  • ದಿನ-ಪ್ರತಿದಿನ
  • ಪ್ರಚಲಿತ
  • ರಾಘವನ್ ಮಣಿಯನ್
  • ಸಂಗೀತ
~.~
  • hamsanandi ರವರ ಬ್ಲಾಗ್
  • Login or register to post comments
  • 268 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 24, 2008 - 9:59am — shylaswamy

ಉ: ಧರ್ಮವೆ ಜಯವೆಂಬ ದಿವ್ಯ ಮಂತ್ರ

shylaswamy's picture

ಪ್ರಿಯ ಹಂಸಾನಂದಿಯವರೆ,
ಈದಿನ ಬೆಳೆಗ್ಗೆ ರೈಧುನ್ ಬಿಟ್ಟು ರಾಘವನ್ ಅವರ ಸಂಗೀತ ಕಛೇರಿ ನಮ್ಮ ಮನೆಯಲ್ಲಿ. ಜೊತೆಗೆ ನಿಮ್ಮ ನೀಲಾಂಜನದ ದರ್ಶನ. ಧನ್ಯವಾದಗಳು.
ಶೈಲಾಸ್ವಾಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 24, 2008 - 10:01am — harshab

ಉ: ಧರ್ಮವೆ ಜಯವೆಂಬ ದಿವ್ಯ ಮಂತ್ರ

harshab's picture

"ಮರ್ಮವನರಿತು ಮಾಡಲುಬೇಕು ತಂತ್ರ "

ಇದರಲ್ಲಿ ಯಾವ-ಎಂತಹ-ಯಾರ "ಮರ್ಮ"ವನ್ನು ಅರಿಯಬೇಕು ಎಂದು ತಿಳಿಸುವಿರಾ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 24, 2008 - 10:42am — gurubaliga

ಉ: ಧರ್ಮವೆ ಜಯವೆಂಬ ದಿವ್ಯ ಮಂತ್ರ

gurubaliga's picture

ಮೋಸ ಮಾಡುವವನ ಹೆಸರ ಮಗನಿಗಿಡಬೇಕು. ಚೆನ್ನಾಗಿದೆ ಆಮೇಲೆ ನನ್ಮಗ ಕೈಕೊಟ್ಟ ಅನ್ನಬಹುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 24, 2008 - 11:08am — shylaswamy

ಉ: ಧರ್ಮವೆ ಜಯವೆಂಬ ದಿವ್ಯ ಮಂತ್ರ

shylaswamy's picture

Laughing out loud ಗುರುಬಾಳಿಗಾ ಅವರೆ, ತಮಾಷಿಯಾಗಿದೆ ನಿಮ್ಮ ಪ್ರತಿಕ್ರಿಯೆ.
ಶೈಲಾಸ್ವಾಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 24, 2008 - 12:57pm — gurubaliga

ಉ: ಧರ್ಮವೆ ಜಯವೆಂಬ ದಿವ್ಯ ಮಂತ್ರ

gurubaliga's picture

ಹಂಗಲ್ವ?
ಆಮೇಲೆ ನಮ್ಮೆಲೇನೂ ಕಡಿವಾಣ "....ಮಗ ಕೈಕೊಟ್ಟ" ಅನ್ನಂಗಿಲ್ಲ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2008 - 11:32am — shaamala

ಉ: ಧರ್ಮವೆ ಜಯವೆಂಬ ದಿವ್ಯ ಮಂತ್ರ

shaamala's picture

ನಿಮ್ಮ ಅನುವಾದ ಬಹಳ ಚೆನ್ನಾಗಿದೆ.

ಶಾಮಲ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲಾಲ್ಗುಡಿ ಶ್ರೀಮತಿ ಬ್ರಹ್ಮಾನಂದಂ ಅವರ ವೈಯೊಲಿನ್ ಕಚೇರಿ
  • ಸಂಗೀತ ಪಾಠದ ಮೊದಲ ಗೀತೆ
  • ಓದಿದ್ದು ಕೇಳಿದ್ದು ನೋಡಿದ್ದು-55 ಸಂಧಾನಕಾರನಿಗೆ ಪುರಸ್ಕಾರ
  • ಓದಿದ್ದು ಕೇಳಿದ್ದು ನೋಡಿದ್ದು-58 ದೀಪಾವಳಿ:ಪಟಾಕಿ ಬದಲು ಚಟಾಕಿ ಹಾರಿಸಿ
  • ಗಳಿಕೆ ಹೇಗಿರಬೇಕು?
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೆಸರಲ್ಲೇನಿದೇ ರೀ? ನೀಲಾಂಜನ .. ರಾಮಕ್ರಿಯ .... ಹಂಸಾನಂದಿ ಯಾವ್ದೋ ಒಂದು!
ಒಬ್ಬ ಸಂಪದಿಗ - ಇನ್ನೂ ಹೆಚ್ಚಿಗೆ ಹೇಳ್ಬೇಕಾದ್ರೆ ಒಬ್ಬ ಕನ್ನಡಿಗ ಅಂದ್ರೆ ಸಾಕು. ಅಲ್ವಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 449 ಅತಿಥಿಗಳು ಆನ್ಲೈನ್ ಇರುವರು.


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator