ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಆರದ ದೀಪ

August 28, 2008 - 7:35pm — hamsanandi

ಎಷ್ಟೋ ವರ್ಷಗಳ ಹಿಂದಿನ ಮಾತು.

ಅವತ್ತು ಮೇಜಿನ ಮೇಲಿಟ್ಟಿದ್ದ ಅವನ ಡೈರಿ ತೆಗೆದು ನೋಡುತ್ತಿದ್ದೆ.

ತೆಗೆದ ತಕ್ಷಣ ಯಾವುದೋ ಸಡುವಿನ ಪುಟದಲ್ಲಿ ಕಂಡದ್ದು ಒಂದು ಕವಿತೆ.

ಪದ್ಯದ ಹೆಸರಲ್ಲೇ ಒಂದು ಹುಡುಗಿ ಕಂಡಳು! ಆಸಕ್ತಿಯಿಂದ ಓದತೊಡಗಿದೆನೆಂಬ ನೆನಪು.

ಇಷ್ಟು ವರ್ಷಗಳ ನಂತರ, ಒಂದೇ ಒಂದು ಸಲ ಓದಿದ ಕವಿತೆ ಪೂರ್ತಿ ನೆನಪಿರುವುದು ಸಾಧ್ಯವೇ ಇಲ್ಲ. ಆದರೂ, ಅದರ ಮೊದಲು - ಕೊನೆ ಸುಮಾರಾಗಿ ಹೀಗಿತ್ತೇನೋ ಎನ್ನಿಸುತ್ತಿದೆ.

ಸುಲೋಚನಾ
---------

ನಿನ್ನನಗಲಿ
ನಾನು ನಾನಾಗಿಲ್ಲ ಈಗ!
..
..
..
..

..
..
ನನ್ನ ಮುದ್ದು ಸುಲೋಚನಾ
ತಾಳೆನು ಈ ಬೇಸರ!

ನನ್ನ ಮುದ್ದು ಸು-ಲೋಚನಾ
ಬರುವೆಯಾ ಬೇಗ?

ನಿನ್ನನಗಲಿ
ನಾನು ನಾನಾಗಿಲ್ಲ ಈಗ!

(*: ನನ್ನ ಸು-ಲೋಚನ (=ಕನ್ನಡಕ) ಮುರಿದು ಹೊಸ ಕನ್ನಡಕಕ್ಕೆ ಕಾಯುತ್ತಿದ್ದಾಗ ಬರೆದದ್ದು) Smiling !


ಹೀಗೆ ಆ ಡೈರಿಯಲ್ಲಿ ಕಣ್ಣಿನ ಸಂಗಾತಿ ಸುಲೋಚನೆಯ ನೆನಪಿನ ಜೊತೆಗೆ, ಇನ್ನೂ ಹಲವಾರು ಕವಿತೆಗಳು, ಕಥೆಗಳು ಕೂಡ ಇದ್ದವು. ಅವನ ಮುತ್ತಿನಂತಹ ಅಕ್ಷರಗಳಲ್ಲಿ ಬರೆದದ್ದನ್ನು ನೋಡುವುದೇ ಒಂದು ಸೊಗಸಾಗಿತ್ತು. ನನ್ನ ಅಕ್ಷರವೂ ಅಷ್ಟು ಚೆನ್ನಾಗಿ ಇರಬಾರದೇ ಎಂಬ ಆಸೆಯಾಗುತ್ತಿತ್ತು ನನಗೆ.

ಅವನ ಬರವಣಿಗೆಗೆ ಮನಸ್ಸನ್ನು ಗೆಲ್ಲುವ ಶಕ್ತಿ ಇತ್ತು. ಎಷ್ಟೆಂದರೂ ಅವನ ಹೆಸರೇ ಅದಾಗಿತ್ತಲ್ಲ! ಅವನು ಯಾವತ್ತಾದರೂ ಪತ್ರಿಕೆಗಳಿಗೆ ಅವನ ಕವನ ಕಥೆಗಳನ್ನು ಕಳಿಸಿದ್ದನೇ? ನಂತರದ ದಿನಗಳಲ್ಲಿನ ಧಾವಂತದ ಜೀವನದ ನಾಗಾಲೋಟದಲ್ಲಿ ಅವನು ಏನಾದರೂ ಬರೆದನೋ ಬರೆಯಲಿಲ್ಲವೋ? ಆಗ ಕೇಳಲು ನನಗೆ ಗೊತ್ತೇ ಆಗಲಿಲ್ಲ.

ನಾನು ಕೇಳಲೇ ಇಲ್ಲ. ಅವನು ತಾನಾಗೇ ಯಾವತ್ತೂ ಹೇಳಲೇ ಇಲ್ಲ.

ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ.

ಈಗ ಕೇಳಬೇಕೆಂದರೆ ಅವನೇ ಇಲ್ಲ.

ಆದರೇನಂತೆ?

ಸ್ಥಾವರಕ್ಕಳಿವುಂಟು. ಜಂಗಮಕ್ಕಳಿವಿಲ್ಲ.

ದೀಪಕ್ಕಳಿವಿರಬಹುದು, ಬೆಳಕಿಗೆ ಅಳಿವಿಲ್ಲ.

ಜೀವಕ್ಕಳಿವಿರಬಹುದು. ನೆನಹಿಗೆ ಅಳಿವಿಲ್ಲ.

-ಹಂಸಾನಂದಿ

  • ಅವನಿಲ್ಲ
  • ಚಿತ್ತಚೋರ
  • ದೀಪ
  • ನೆನಪು
~.~
  • hamsanandi ರವರ ಬ್ಲಾಗ್
  • Login or register to post comments
  • 184 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 28, 2008 - 10:19pm — Sunil Jayaprakash

ಉ: ಆರದ ದೀಪ

Sunil Jayaprakash's picture

ನೀವು ಸುಲೋಚನಾ - ಗುಟ್ಟು ಬಿಟ್ಟುಕೊಡಬಾರದಿತ್ತು Eye-wink

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 29, 2008 - 2:42am — kalpana

ಉ: ಆರದ ದೀಪ

kalpana's picture

ಹಂಸಾನಂದಿಗಳೆ,
ಇದು ಯಾರ ಬಗ್ಗೆ ಎಂದು ನಿಮ್ಮ ಹಳೆಯದೊಂದು ಬರಹದಿಂದ ಊಹಿಸಬಲ್ಲೆ. ನಾನೂ ಸಹ ಕಳೆದುಹೋದವರೊಂದಿಗೆ ಹೇಳಲು/ಕೇಳಲು ಸಂವಾದದ ಗಂಟನ್ನು ಕಟ್ಟಿಟ್ಟುಕೊಂಡು ಕಾಯುತ್ತ ಇದ್ದೇನೆ...
~ಕಲ್ಪನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾನು ನನ್ನ ಐ೧೦ - ಕನಸುಗಳ ನನಸಾಗಿಸುತ್ತ
  • ಅಳಿಯದ ನೆನಪು
  • ಮದುವೆಗೆ ಮುಂಚೆ ಮತ್ತು ಮದುವೆಯ ನಂತರ...
  • ಓ ನನ್ನ ಜೀವವೇ
  • ನನ್ನ ಹಳ್ಳಿ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೆಸರಲ್ಲೇನಿದೇ ರೀ? ನೀಲಾಂಜನ .. ರಾಮಕ್ರಿಯ .... ಹಂಸಾನಂದಿ ಯಾವ್ದೋ ಒಂದು!
ಒಬ್ಬ ಸಂಪದಿಗ - ಇನ್ನೂ ಹೆಚ್ಚಿಗೆ ಹೇಳ್ಬೇಕಾದ್ರೆ ಒಬ್ಬ ಕನ್ನಡಿಗ ಅಂದ್ರೆ ಸಾಕು. ಅಲ್ವಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 328 ಅತಿಥಿಗಳು ಆನ್ಲೈನ್ ಇರುವರು.


ಸತ್ಯವೆಂಬುದೆಲ್ಲಿ? ನಿನ್ನಂತರಂಗದೊಳೊ|
ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ ||
ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ |
ತತ್ತ್ವದರ್ಶನವಹುದು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator