ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › rashmi_pai ರವರ ಬ್ಲಾಗ್

ಅಲೆಮಾರಿ ಬದುಕು

March 15, 2008 - 2:59pm — rashmi_pai

ಕನಸುಗಳ ಮರಳದಂಡೆಯಲಿ
ನೋವ ಹೊತ್ತು ನಡೆವೆವು
ಬೆನ್ನಿಗಂಟಿದ ಹೊಟ್ಟೆ, ಅಳುವ ಕೂಸು
ಹೊತ್ತು, ಇನ್ನೊಂದು ಮೂಟೆ ರಟ್ಟೆಯಲಿ
ವೇದನೆಯ ಗಂಟು ಅಲ್ಲ ಇದು, ಜೀವನದ ಕುಂಟುಗಳಿವು
ಪ್ರಕ್ಷುಬ್ಧ ಬದುಕಿನ ಭಗ್ನ ಕನವರಿಕೆ

ಅಲೆಮಾರಿಗಳು ನಾವು,
ಬದುಕ ಅಲೆ ಸುಳಿಗೆ ಸಿಕ್ಕಿದರೂ
ತುಂಡು ರೊಟ್ಟಿ, ಹೊತ್ತು ಕೂಳಿಗಾಗಿ
ಸಾಗುವೆವು ಇನ್ನೂ ಮುಂದೆ ಮುಂದೆ

ಬರಿಗಾಲ ಪಾದ ಒಡೆದು ರಕ್ತ ಚಿಮ್ಮುತಿರೆ
ಬೆವರ ಹನಿ ಮಾಲೆಗಳು ಎದೆ ನಡುವೆ ಹರಿದು
ಹೊಕ್ಕಳ ಬಳ್ಳಿಯಲ್ಲಿ ತಂಗಿ ಮತ್ತೂ ಹರಿದಾಗ
ಎದೆಗೂಡಿನೊಳು ಚಿಗುರೊಡೆದ ನೆನಪುಗಳ
ಒರೆಸಿಟ್ಟ ಮುಗ್ದ ಬೆರಳು
ಬೆಳಕು ಸಾಯುವ ಮುನ್ನ ಬೀಡು ಸೇರುವ
ತವಕ, ಗೆಜ್ಜೆ ದನಿಗಳ ನಡುವೆ ಸರಿದ ನೆರಳು

ಹೃದಯದಲಿ ಅದುಮಿಟ್ಟ ನೋವಿನಾ ಸೆಲೆಯು
ಹಾಡಾಗಿ ಉಕ್ಕಿ ಕಪ್ಪು ತುಟಿಗಳಲಿ
ಉಸಿರ ಬಿಗಿ ಹಿಡಿದು ಬಿಕ್ಕಿ
ಅತ್ತಾಗ, ಬಾಹು ಬಲವಿಲ್ಲದೆ
ಬಾಹುಬಲಿಗಳಾದೆವು ಒಂದೆಡೆ
ಇನ್ನೊಂದೆಡೆ ಭವಿಷ್ಯ ನುಡಿಯುವ
ಮಂಡ ಕಪ್ಪೆಗಳಾಗಿ
ಸುಖದ ರೂಪದ ಬಯಕೆ ದುಃಖದಲಿ
ದಿನರಾತ್ರಿ ಹದವಾಗಿ ಹರಿಯುತಿರೆ
ಗುರಿಯಿರದ ದಾರಿಯೊಳು ತೆವಳುವೆವು
ನಿಡುಸುಯ್ವ ಕ್ಷಿತಿಜದಂಚಿಗೆ.

  • ಅಲೆಮಾರಿ ಬದುಕು
  • ಕವನ
~.~
  • rashmi_pai ರವರ ಬ್ಲಾಗ್
  • Login or register to post comments
  • 230 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 15, 2008 - 8:15pm — bachi

ಉ: ಅಲೆಮಾರಿ ಬದುಕು

bachi's picture

"ಬಾಹು ಬಲವಿಲ್ಲದೆ ಬಾಹುಬಲಿಗಳಾದೆವು ಒಂದೆಡೆ"

ಅಲೆಮಾರಿಗಳ ಬದುಕಿನ ಈ ಚಿತ್ರಣ ತುಂಬ ಮನೋಘ್ಙವಾಗಿದೆ. ಹಣದ ಹಿಂದೆ ಓಡುವ ನಾವೂ ಕೂಡ ಅಲೆಮಾರಿಗಳಲ್ಲವೇ? ಆಧ್ಯಾತ್ಮಕ್ಕಾಗಿ ತನ್ನ ರಾಜ್ಯವನ್ನೇ ತ್ಯಾಗ ಮಾಡಿದ ಬಾಹುಬಲಿಯ ಆದರ್ಶ‌ ಹೊಟ್ಟೆಗೆ ಹಿಟ್ಟಿಲ್ಲದವರಿಗಾ ಅಥವಾ ಹಣ ಹೆಚ್ಚಾಗಿರುವವರಿಗಾ ನೀವೇ ಹೇಳಿ.

ಮನಸ್ಸು ಬಿಚ್ಛಿ ಬರೆಯಿರಿ ಹಾಗೆ ಸುಮ್ನೆ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಸ್ತುತ
  • Honey' Kavana!!
  • ಬದುಕು-ಬವಣೆ
  • ಲಾಲಿ
  • ಒಂದು ಬೆಳಗಿನ ಸಮಯ...
Syndicate content

ಲೇಖಕರು

rashmi_pai's picture

ಪೂರ್ಣ ಹೆಸರು
Rashmi Pai

ಪರಿಚಯ

ನನ್ನ ಊರು ಗಡಿನಾಡಾದ ಕಾಸರಗೋಡು. ಪ್ರಸ್ತುತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದೇನೆ. ಸಾಹಿತ್ಯ, ಕಲೆಗಳಲ್ಲಿ ಆಸಕ್ತಿ ಹೊಂದಿರುವುದರೊಂದಿಗೆ ಕತೆ, ಕವಿತೆ, ಭಾಷಣ ಮೊದಲಾದವುಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ನನ್ನ ನೆಚ್ಚಿನ ಗೆಳೆಯನಾದ ಪ್ರಕೃತಿಯೊಂದಿಗೆ ಒಡನಾಟ ನಡೆಸುವುದು ಹಾಗೂ ಸ್ವಪ್ನಲೋಕದಲ್ಲಿ ವಿಹರಿಸುವುದೆಂದರೆ ನನಗಿಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 8, 2008 - 1:29am
  • nekkar_guru
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 8, 2008 - 1:07am
  • mayakar
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 12:16am
  • raghava
    ಉ: ಮೊದಲ ಚಿತ್ರ
    September 8, 2008 - 12:13am
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 22 ಅತಿಥಿಗಳು ಆನ್ಲೈನ್ ಇರುವರು.


ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator