ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ನೆನಪು: ಎಂ ವ್ಯಾಸ | ಚರ್ಚೆ: ‘ಅನಾಗರಿಕರ ಬಾಂಬ್’ - ಉತ್ತರವೇ? ಪ್ರಶ್ನೆಯೇ?

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ಅಮ್ಮನ ದಿನ

May 12, 2008 - 2:42pm — roopablrao

ನೆನ್ನೆ ಪೇಪರ ಓದಲಿಲ್ಲ. ಗಡಿಬಿಡಿಯಲ್ಲಿ ನೆನಪೂ ಬರಲಿಲ್ಲ
ಆದರೂ ಯಾವುದೋ ಕೆಲಸದ ಮೇಲೆ ಜಯನಗರಕ್ಕೆ ಹೋಗಿ ಬರುವಾಗ ಅಮ್ಮನ ಮನೆಗೆ ಹೋಗಬೇಕಾಗಿ ಬಂತು.

ಸಮಯ ಅನ್ನುವುದು ಬಹಳ ಕಟುಕ ಒಂದು ಘಂಟೆ ಒಂದು ನಿಮಿಷದಂತೆ ಮುಗಿದುಹೋಗಿತ್ತು

"ಅಮ್ಮ ನಾವು ಹೋಗ್ಬೇಕು ಬೇರೆ ಕೆಲಸ ಇದೆ" ಅಂದೆ

ಅಮ್ಮ "ಸರಿ " ಅಂತ ಆಕಡೆ ತಿರುಗಿಕೊಂಡೇ ಹೇಳಿದಳು

ಯಾಕಮ್ಮ ಈ ಕಡೆ ತಿರುಗಿ ನೋಡು ಅಂತ ಅವಳನ್ನು ಎಳೆದುಕೊಂಡರೆ ಅವಳ ಕಣ್ಣಲ್ಲಿ ಧಾರಾಕಾರ ನೀರು.

ನನಗೆ ದಿಗ್ಭ್ರಮೆ

"ಯಾಕಮ್ಮ ಅಳ್ತಿದೀಯಾ. ಏನಾಯಿತು." ಅಂತ ಕೇಳಿದೆ

ಮಾತಿಲ್ಲ ಕತೆ ಇಲ್ಲ ಬರೀ ಅಳು

"ಕೊನೆಗೆ ಗಂಡು ಮಕ್ಕಳಾಗಲಿ ಹೆಣ್ಣು ಮಕ್ಕಳ್ಖಾಗಲಿ ಅವರವರ ಸಂಸಾರ ಬಂದ ಮೇಲೆ ಎಲ್ಲಾ ಮರೀತಾರೆ" ಅಂದಾಗ ನೆನಪಿಸಿಕೊಂಡೆ ಇವತ್ತು ಅಮ್ಮನ್ ಬರ್ತ್ ಡೆ ಅಲ್ಲ ಮತ್ತೆ .

ಅಷ್ಟ್ರಲ್ಲಿ ನನ್ನ ಅಕ್ಕ ಬಂದು ಪೇಪರ್ ತೋರಿಸಿದಳು

ಇವತ್ತು ಮದರ್ಸ್ ಡೆ

ನಾನು ಕಾಲೇಜಿನಲ್ಲಿದ್ದಾಗಿನಿಂದಲೂ ಅಮ್ಮನ ದಿನಕ್ಕೆ ಮರೀದಲೆ ಉಡುಗೊರೆ ಕೊಡ್ತಿದ್ದೆ . ನಂತರ ಕೆಲಸಕ್ಕೆ ಸೇರಿದ ಮೇಲೆ ಅವಳನ್ನು ಹೊರಗಡೆ ಕರೆದುಕೊಂಡು ಹೋಗ್ತಿದ್ದೆ. ಅವತ್ತು ಅಡಿಗೆಗೆ ರಜಾ . ಮದುವೆಯಾದ ಮೇಲೂ ಮೊದಲೆರೆಡು ವರ್ಷ ಮರೆತಿರಲಿಲ್ಲ .

ಆದರೆ ಇಂದು ಮೂರನೆ ವರ್ಷ ಮರೆತಿದ್ದೆ

ಹೌದು ನಮ್ಮ ಹಾಳು ಕೆಲಸದ ಗಡಿಬಿಡಿ ಅದನ್ನು ನೆನಪಿಸಿಕೊಳ್ಳಲೂ ಬಿಡಲಿಲ್ಲ.

ಈಗ ತಿಳಿದರೂ ಏನೂ ಮಾಡುವಂತಿರಲಿಲ್ಲ . ಏಕೆಂದರೆ ಅಪಾಯಿಂಟ್‌ಮೆಂಟ್ ಆಗಲೆ ಬುಕ್ ಆಗಿತ್ತು

ಅಮ್ಮನಿಗೆ ಏನಾದರೂ ಕೊಡಿಸುವಂತೆ ಅಕ್ಕನಿಗೆ ಹೇಳಿ ಮುಂದಿನ ವಾರ ಎಲ್ಲಾದರೂ ಹೋಗೋಣ ಎಂದು ಅಮ್ಮನಿಗೆ ಸಮಾಧಾನ ಮಾಡಿ ಬಂದರೂ ನನಗೆ ಸಮಾಧಾನವಿರಲಿಲ್ಲ

ಆದರೂ ರಜಾವಿದ್ದರೂ ಬಿಡುವಿಲ್ಲದ ಈ ದುಡಿತ , ಹೆಸರು , ಹಣ ಮಾಡುವ ತುಡಿತವಿರುವ ತನಕ ಇಂತಹದಕ್ಕೆ ರಾಜಿಯಾಗಲೇಬೇಕು ಅಂತ ಇವರಿಂದ ಅನ್ನಿಸಿಕೊಂಡು ಸುಮ್ಮನಾದೆ

~.~
  • roopablrao ರವರ ಬ್ಲಾಗ್
  • Login or register to post comments
  • 282 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೪)
  • ಇದೇಕೆ ಹೀಗೆ?
  • ಅಮ್ಮ.
  • ಸರ್ಪ್ರೈಸ್
  • ಮಾ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬರಲಿರುವ ಪೊಲ್ಲುಶನ್ ಫ್ರೀ, ಕಡಿಮೆ ವೆಚ್ಚದ ಕಾರುಗಳು!
  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Sex - ಕಾಮ; ಅದರ ಮಹತ್ವ !
    July 26, 2008 - 5:21am
  • venkatesh
    ಉ: ಒಂದು ಜೋಕ್ಸ (??????)
    July 26, 2008 - 4:16am
  • venkatesh
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 26, 2008 - 4:11am
  • shaamala
    ಉ: ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
    July 25, 2008 - 11:36pm
  • Jayalaxmi.Patil
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 9:39pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 9:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:35pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:33pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:13pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 28 ಅತಿಥಿಗಳು ಆನ್ಲೈನ್ ಇರುವರು.


ವಿನಾಶಕಾಲೇ ವಿಪರೀತ ಸಿಧ್ಧಿ!

— ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator