ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಕೊಲೆಗಾರರು ಯಾರು ? ಒಂದು ಹಾಸ್ಯ ಲೇಖನ

June 14, 2008 - 3:06pm — shreekant.mishrikoti

ಸಂಪದದಲ್ಲಿ ’ ಕೊಲೆಗಾರರು ಯಾರು ? ’ ಬರಹ ಓದುತ್ತಿದ್ದಂತೆ ನಾನು ಹಿಂದೊಮ್ಮೆ ಸುಧಾದಲ್ಲಿ ಓದಿದ ಹಾಸ್ಯ ಬರಹ ನೆನಪಾಯಿತು . ಅದು ಯಾರು ಬರೆದಿದ್ದದ್ದು ನೆನಪಿಲ್ಲ ; ವಿಷಯ ಮುಖ್ಯ ತಾನೆ ? ಓದಿ ಸಂತಸ ಪಡಿ .

ಒಬ್ಬ ಪತ್ತೇದಾರಿ ಸಾಹಿತ್ಯದ ಓದಿನ ಗೀಳಿನ ಮನುಷ್ಯ ಇರ್ತಾನೆ . ಅವನಿಗೆ ಒಂದ್ಸಲ ಓದಕ್ಕೆ ಏನೂ ಇಲ್ದೆ ತನ್ನ ಗೆಳೆಯನ ಹತ್ರ ಹೋಗಿ ಓದಕ್ಕೆ ಏನಾದ್ರೂ ಕೊಡೋ ಅಂತ ಕೇಳಿದಾಗ ಅವನು ಕೈಗೆ ಸಿಕ್ಕ ಪುಸ್ತಕಾನ ಕೊಟ್ಟು ಕಳಿಸ್ತಾನೆ . ಅದು ಷೇಕ್ಸಪಿಯರನ ಮ್ಯಾಕ್‍ಬೆತ್ ನಾಟಕದ ಅನುವಾದ . ಡಿ. ವಿ. ಜಿ ಅವರದ್ದು , ಹಳೆಗನ್ನಡ ಶೈಲಿಯಲ್ಲಿದೆ .
ಮರುದಿನ ಅವನು ಬಂದು ಪುಸ್ತಕ ವಾಪಸ್ ಕೊಡ್ತಾ ಹೇಳ್ತಾನೆ ... ನಂಗೆ ಮ್ಯಾಕ್‍ಬೆತ್ ಮಾಡಿದ್ದು ಅನ್ನಿಸ್ಲಿಲ್ಲ .
’ಏನೋ?’
’ಅದೇ ಮರ್ಡರು ’
’ಯಾಕೋ’
ಈಗ ಅವರ ನಡುವೆ ಚರ್ಚೆ . ನಾನಾ ಥಿಯರಿಗಳು . ಆ ನಾಟಕದಲ್ಲಿ ಆಗಿರೋ ಕೊಲೇನ ಯಾರು ಮಾಡಿದ್ದು ? ಅಂತ !
--ಕ್ಲಿಯರ್ ಆಗೇ ಇದೆಯಲ್ಲೋ ? ಮ್ಯಾಕ್‍ಬೆತ್ ಮಾಡಿದ್ದು ಅಂತ ?
-- ಅದ್ಯಾವ ಸೀಮೆ ಪತ್ತೇದಾರಿನೋ ? ಮೊದಲ ನೋಟಕ್ಕೆ ಕೊಲೆಗಾರ ಅನ್ನಿಸಿದೋನು ಕೊಲೆ ಮಾಡಿರೋದಿಲ್ಲ , ಇಷ್ಟೂ ಗೊತ್ತಿಲ್ವೇ ನಿಂಗೆ ?
--ನಾಯಕಿ ಇರ್ತಾಳಲ್ಲ ? ಅವಳೇ ಇರಬೇಕು . ಮೇಣದ ಬತ್ತಿ ಹಿಡಿದು ಸಂಶಯಾಸ್ಪದ ಆಗಿ ರಾತ್ರಿ ಹೊತ್ತು ಓಡಾಡ್ತ ಇರ್ತಾಳಲ್ಲ ?
ಒಂದು ವೇಳೆ ಅವಳಲ್ಲದಿದ್ರೆ ಯಾರನ್ನೋ ಬಚಾವು ಮಾಡೋಕೆ ಆ ತರ ಮಾಡ್ತಿರಬೇಕು . ನಮ್ಮ ಪತ್ತೇದಾರ ಅರಿಂಜಯ , ಮಧುಸೂಧನ ಪತ್ತೆ ಮಾಡಿರೋರು.
-- ನಂಗೆ ಅನ್ನಿಸುತ್ತೆ .. ನಾಟಕದ ಮೊದಲಿಗೆ ಯಾರೋ ಮೂರು ಜನ ಬಂದು ಹೋಗ್ತಾರಲ್ಲ , ಕಣಿ ಹೇಳೋರು ... ಅವರೇ ಇರಬೇಕು .. ಆಮೇಲೆ ಅವರು ಎಲ್ಲೂ ಕಾಣಿಸೋದೇ ಇಲ್ಲ ?
-- ಹೋಗಯ್ಯಾ , ಯಾವತ್ತಾದರೂ ಕೊಲೆಗಾರ ಗೆಸ್ಟ್ ಆರ್ಟಿಸ್ಟ್ ಆಗಿರ್ತಾನಾ ಒಂದೇ ಸಲ ಬಂದು ಹೋಗೋಕೆ ?
-- ಹಾಗಾದ್ರೆ ಮೊದಲು ಹೆಣ ನೋಡ್ದೋನು ಇರಬೇಕು , ಅಥವಾ ಶಾಮೀಲಾದ್ರೂ ಆಗಿರಬೇಕು ?
-- ಅದ್ಯಾಕೆ ಹಾಗಂತೀಯ ?
-- ಮೊದಲು ಹೆಣ ನೋಡಿದೋನು ಏನಯ್ಯ ಮಾಡ್ತಾನೆ ? ’ಯಪ್ಪೋ , ಇಲ್ಲೊಂದು ಖೂನಿ ! ’ ಅಂತ ಕಿರಿಚೋದು ಬಿಟ್ಟು ’ ಹಾ ಬಿದಿಯೆ .... ’ ಎಂದೇನೋ ಹಳಗನ್ನಡ ಪದ್ಯ ಹೇಳ್ತಾನಲ್ಲಯ್ಯಾ ? ಅಂದ್ರೆ ಮೊದ್ಲೇ ರೆಡಿ ಮಾಡ್ಕೊಂಡು ಬಂದಿದಾನೆ! ಪೋಲೀಸರು ಹಿಡಿದು ಒದ್ರೆ ನಿಜ ಹೇಳಿಯಾನು ! !.

ನೀವೂ ಮ್ಯಾಕ್ ಬೆತ್ ಓದಿ ನೋಡಿ , ನಿಮಗೂ ಏನಾದರೂ ತೋಚಬಹುದು ಯಾರು ಕೊಲೆಗಾರರು ಅಂತ ! ಎಂದು ಬರಹಗಾರರು ಸೂಚನೆ ಕೊಡ್ತಾರೆ !!

  • ಕೊಲೆ
  • ಶ್ರೀಕಾಂತ ಮಿಶ್ರಿಕೋಟಿ
  • ಹಾಸ್ಯ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 245 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 15, 2008 - 7:37pm — ಶ್ರೀನಿಧಿ

ಉ: ಕೊಲೆಗಾರರು ಯಾರು ? ಒಂದು ಹಾಸ್ಯ ಲೇಖನ

ಶ್ರೀನಿಧಿ's picture

ಮ್ಯಾಕ್ಬೆತ್ ಯಾಕೆ ಓದಬೇಕು? ಬಟ್ಲರ್ ತಾನೆ ಮಾಡಿದ್ದು ( The butler did it http://en.wikipedia.org/wiki/The_butler_did_it ) Sticking out tongue

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪುಸ್ತಕನಿಧಿ(೩) - ಪ್ರಾಣ ಹೋಗುವಾಗ ಪ್ರಾಣಾಯಾಮವೇ?
  • ಯಾರು ಉದ್ದಾರ ಆಗಲ್ಲ!
  • ಬಿಟ್ಟಿ ಉಪದೇಸದಿಂದ ತುಟ್ಟಿಯಾದವರು!
  • ವಾದ ಮತ್ತು ಚರ್ಚೆ - ಒಂದು ಚಂದಮಾಮಾ ಕತೆ.
  • ಕನ್ನಡಿಗರಿಗೆ ಕಷ್ಟವಾದ ಕನ್ನಡ!!
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
  • ಬರಾಕ್ ಒಬಾಮ ಮತ್ತು ಜಾನ್ ಮೆಕೈನ್: ಯಾರು ಸರಿ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:13pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 162 ಅತಿಥಿಗಳು ಆನ್ಲೈನ್ ಇರುವರು.


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator