ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › sindhu ರವರ ಬ್ಲಾಗ್

ಗಣರಾಜ್ಯೋತ್ಸವದ ಹಿಂದಿನ ಸಂಜೆ..

January 25, 2008 - 4:02pm — sindhu

ಓ ಇವತ್ತು ಈ ರಿಪೋರ್ಟು ರೆಡಿ ಮಾಡಬೇಕು. ಹಾಳಾದ್ದು ಗಣರಾಜ್ಯೋತ್ಸವ ಶನಿವಾರ ಬಂದ್ ಬಿಡ್ತು. ಒಂದು ರಜಾ ಮಿಸ್ಸಾಗೋಯ್ತು ಅಂದುಕೊಳ್ಳುತ್ತ ದಿನಚರಿ ಶುರುವಾಯಿತು. ಅಷ್ಟರಲ್ಲಿ ಹಿರಿಯ ಸಹೋದ್ಯೋಗಿಯೊಬ್ಬರು ಕ್ವಿಝ್ ಒಂದನ್ನ ಮುಂದಿಟ್ಟರು. ಎಲ್ಲರೂ ಗೊಣಗುತ್ತಲೇ ಕೈಗೆತ್ತಿಕೊಂಡೆವು.
ಸ್ವತಂತ್ರ ಭಾರತದ ಬಗೆಗಿನ ಕೆಲವು ಪ್ರಶ್ನೆಗಳು. ಹೆಚ್ಚೂ ಕಡಿಮೆ ಎಲ್ಲವನ್ನೂ ನಾವು ಮಾಧ್ಯಮಿಕ ಶಾಲೆಯಲ್ಲಿ ಓದಿರಬಹುದಾದದ್ದು.
ಯಾರಿಗೂ ೪ ಪ್ರಶ್ನೆಗಳಿಗಿಂತ ಹೆಚ್ಚಾಗಿ ಮುಂದೆ ಹೋಗಲಾಗಲಿಲ್ಲ. ಆ ನಾಲ್ಕರಲ್ಲೂ ಎರಡು ಅಳೆದೂ ಸುರಿದೂ ಐದು ನಿಮಿಷ ಯೋಚನೆ ಮಾಡಿ ಉತ್ತರಿಸಿದ್ದು. ತಲೆತಗ್ಗಿಸಿ ಕೂತೆ.

ಒಂದು ಇಡೀ ತಲೆಮಾರು ತಮ್ಮ ಜೀವನವನ್ನೇ ಮುಪ್ಪಾಗಿಟ್ಟು ಹೋರಾಡಿ ತಂದುಕೊಟ್ಟ ಸ್ವಾತಂತ್ರ್ಯ, ಆ ವಿಶೇಷ ಚೇತನಗಳು ಕಂಡ ಆದರ್ಶ ಗಣರಾಜ್ಯ ಎರಡೂ ಮುಖಕ್ಕೆ ಮುಸುಕೆಸೆದುಕೊಂಡು ಅಳುತ್ತ ಕೂತಿವೆ. ನಮಗೆ ಮಿಡ್ಲ್ ಸ್ಕೂಲಿನ ಪರೀಕ್ಷೆಯ ಮಟ್ಟಕ್ಕೆ ಮಾತ್ರ ಸಿವಿಕ್ಸ್ ಬೇಕು. ಆಮೇಲೆ ಮರೆತುಹೋಗಿಬಿಡುತ್ತೆ. ಬಾಲ್ಯದಲ್ಲಿ ಓದಿದ ಗುಂಪಾಗಿ ಹೋರಾಡಿದ್ದ ಸ್ವತಂತ್ರ ಸೇನಾನಿಗಳು ನಾವು ಬೆಳೆದು ದೊಡ್ಡವರಾದ ಮೇಲೆ, ನಮ್ಮ ನಮ್ಮ ಮನಸ್ಸಿಗೊಪ್ಪುವ ಸಿದ್ಧಾಂತ ಧಾರೆಯ ಪ್ರಭಾವಳಿಯಲ್ಲಿ ಮೆರವಣಿಗೆ ಹೊರಟು ಅವರ ಹೋರಾಟದ ಸತ್ವ ಮಕಾಡೆ ಮಲಗಿರುತ್ತದೆ. ಒಬ್ಬೊಬ್ಬರನ್ನೂ ಒಂದೊಂದು ಪಕ್ಷ ಗುತ್ತಿಗೆಗೆ ಹಿಡಿಯುತ್ತದೆ. ನಾವು ಗೆದ್ದೆತ್ತಿನ ಬಾಲ ಹಿಡಿಯುತ್ತಾ, ಹಿರಿಯರ ಕಷ್ಟಾರ್ಜಿತ ಸ್ವಾತಂತ್ರವನ್ನ ಸ್ವೇಚ್ಛೆಯಾಗಿ ಉಪಯೋಗಿಸುತ್ತಾ, ಕ್ರಿಕೆಟ್ ಮ್ಯಾಚುಗಳಲ್ಲಿ ಬಾವುಟದ ಬಣ್ಣ ಬಳಿದುಕೊಳ್ಳುತ್ತಾ, ವೀಸಾ ಕ್ಯೂನಲ್ಲಿ ಕಾಯುತ್ತಿರುತ್ತೇವೆ. ನಮ್ಮದು ಸಿರಿಮಲ್ಲಿಗೆ.

ಭಾರತ ಗಣರಾಜ್ಯವಾದ ವರ್ಷ ಯಾವುದು ಅಂತ ತಿಳಿದುಕೊಂಡು ನಮಗೇನಾಗಬೇಕಾಗಿದೆ? ಸೆನ್ಸೆಕ್ಸ್ ಹೇಗೆ ಏರಿಳಿಯುತ್ತಿದೆ ಅಂತ ನೋಡಲು ಸರಿಯಾಗಿ ಟೈಮಿಲ್ಲ. ನಮ್ಮ ರಾಷ್ಟ್ರಗೀತೆಯ ಇತಿಹಾಸ ಗೊತ್ತಿಲ್ಲ. ತಪ್ಪಾಗಿ ಹಾಡಿದವರನ್ನ ಹಂಗಿಸುತ್ತೇವೆ. ರಾಜಕಾರಣಿಗಳನ್ನ ಎಗ್ಗಿಲ್ಲದೆ ಆಡಿಕೊಳ್ಳುತ್ತೇವೆ. ನಮ್ಮ ಹಕ್ಕು ಬಳಸಿ ಕರ್ತವ್ಯ ನಿಭಾಯಿಸುವ ಮಾತೆತ್ತಿದರೆ ಜಾರಿಕೊಳ್ಳುತ್ತೇವೆ. ಹೋದವರ್ಷ ಟೀವಿ ಚಾನೆಲ್ಲೊಂದು ನಮ್ಮ ಸಂಸದ ಮಹಾಶಯರನ್ನು ಮಾತಾಡಿಸಿತ್ತು. ರಾಷ್ಟ್ರಗೀತೆ ಬರೆದವರು ಯಾರು ಎಂಬ ಪ್ರಶ್ನೆ ಮುಂದಿಟ್ಟರೆ ಕ್ಯಾಮೆರಾ ಮುಂದೆ ಪೆಕರು ಪೆಕರಾಗಿ ಗಾಂಧಿ, ಮೋಸ್ಟ್ಲೀ ಯಾವುದೋ ಚಟರ್ಜೀ,ವಿವೇಕಾನಂದ ಅಂತ ಬಾಯಿಗೆ ಬಂದಂಗೆ ಕೆಲವರು ಹಲುಬಿದರೆ, ಕೆಲ ಹಿರಿಯ ಸಂಸದರು ಇಂತದೆಲ್ಲ ಯಾರು ನೆನಪಿಟ್ಕೋತಾರೆ ರಾಷ್ಟ್ರಗೀತೆ ಹಾಡೊಕ್ಕೆ ಬಂದರೆ ಸಾಕಲ್ವಾ ಅಂದರು. ಸಧ್ಯ ಆ ಚಾನೆಲ್ಲು ಅವರಿಂದ ಅದನ್ನು ಹಾಡಿಸಿ ರಾಷ್ಟ್ರಗೀತೆಗೆ ಅವಮಾನ ಮಾಡಲಿಲ್ಲ.

ಅಮೆರಿಕದ ಶಿಕ್ಷಣಪದ್ಧತಿಯಲ್ಲಿ ಓದುವ ಗ್ರಾಜುಯೇಟ್ಸ್ ಮತ್ತು ಪ್ರೊಫೆಶನಲ್ಸ್ (ಡಾಕ್ಟರು, ಇಂಜಿನಿಯರು, ಲಾಯರು, ಆಡಿಟರು..ಇತ್ಯಾದಿ ಎಲ್ಲರೂ) ರಾಷ್ಟ್ರದ ಚರಿತ್ರೆ,ಭೂಗೋಳ ಮತ್ತು ನಾಗರಿಕ ಸಂಹಿತೆಯನ್ನ ಒಂದು ಮೇಜರ್ ವಿಷಯವಾಗಿ ಓದಲೇಬೇಕು. ಇದು ಜನಮನದಲ್ಲಿ ನಮ್ಮ ದೇಶದೆಡೆಗಿನ ಅಭಿಮಾನ, ನಮ್ಮ ಸ್ವಾತಂತ್ರ ಹೋರಾಟದ ಹಿರಿಮೆ, ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯದ ಅರ್ಥ ಎಲ್ಲವನ್ನೂ ಕಟ್ಟಿಕೊಡುತ್ತದೆ. ಇಂತಹ ಒಳ್ಳೆಯ ವಿಷಯದ ಕಡೆ ನಮ್ಮ ಗಮನ ಹೋಗುವುದೇ ಇಲ್ಲ. ನಮಗೆ ಅವರ ತಂತ್ರಜ್ಞಾನ ಮತ್ತು ಸ್ಟಾಕ್ಸ್ ಮಾತ್ರ ಬೇಕು.

ತಂತ್ರಜ್ಞಾನ, ವಿಜ್ಞಾನ, ವೈದ್ಯಕೀಯ ರಂಗದಲ್ಲಿ ಮುನ್ನುಗ್ಗುವ ನಮಗೆ ನಮ್ಮ ಸಂಸ್ಕೃತಿಯ, ಬೇರಿನ ಅರಿವೇ ಇಲ್ಲದೆ ಹೋದರೆ ಹೇಗೆ ಅಂತ ಮನಸ್ಸು ಖಿನ್ನವಾಗಿದೆ. ಇನ್ನೆಲ್ಲ ಹೋಗಲಿ ತಮ್ಮ ಸುಖ ಮತ್ತು ಸಂಪತ್ತನ್ನು ಬದಿಗಿಟ್ಟು ಹೋರಾಟ ಮಾಡಿದ ನಮ್ಮ ಸ್ವತಂತ್ರಯೋಧರ ನೆನಪು ನಮಗೆ ಚಿರಸ್ಮರಣೀಯವಲ್ಲವೆ!

ನೋಡಿ, ಗೂಗ್ಲಿಂಗ್ ಮಾಡದೇ ಈ ಕ್ವಿಝ್ ಗೆ ಉತ್ತರ ಹುಡುಕಿ. ನಿಮಗೇನೆನ್ನಿಸಿತು ಅಂತ ಹಂಚಿಕೊಳ್ಳಿ.

  1. Who was the president of the Constituent Assembly that held the 'Independence Meeting'?
  2. Who was the viceroy of independent India?
  3. Name the first woman minister of Independent India.
  4. What does the navy blue wheel that appears in the Indian national flag stand for?
  5. The order of the colors of Indian national flag from top down is.................................
  6. In 1997, the year of 50th anniversary of Indian independence, the US Senate passeda resolution, designating it as a National(US) Day of celebration of............................
  7. Name the national animal, bird, flower and fruit
  8. Since when India had been recognized as a republic?
  9. Who among the following was the last Governor General of Independent India?
  10. The first stanza of Tagore's 'Janagana Maana' has been selected as India's national anthem.How many stanzas are there in the original song?

ಇಂತಹ ಒಂದು ಭಿನ್ನ ಆಲೋಚನೆಯ ಕ್ವಿಝ್ ಕೊಟ್ಟು ನಮ್ಮ ೫೯ನೇ ಗಣರಾಜ್ಯೋತ್ಸವಕ್ಕೆ ಹೊಸ ಅರ್ಥ ತುಂಬಿದ ಸಹೋದ್ಯೋಗಿಗೆ ಕೃತಜ್ಞತೆ ಸಲ್ಲಿಸುತ್ತಾ..

~.~
  • sindhu ರವರ ಬ್ಲಾಗ್
  • Login or register to post comments
  • 359 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 25, 2008 - 5:37pm — mahesha

ಉ: ಗಣರಾಜ್ಯೋತ್ಸವದ ಹಿಂದಿನ ಸಂಜೆ..

mahesha's picture

ಗಣರಾಜ್ಯ ಅಂದರೇನು?
ಗಣತಂತ್ರ ಮತ್ತು ಗಣರಾಜ್ಯ ನಡುವೆ ಏನು ಅಂತರ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 25, 2008 - 6:17pm — vikashegde

ಉ: ಗಣರಾಜ್ಯೋತ್ಸವದ ಹಿಂದಿನ ಸಂಜೆ..

vikashegde's picture

ನಿಜ . ಈ ದೇಶನೂ ಸರಿಯಿಲ್ಲ, ಜನರೂ ಸರಿಯಿಲ್ಲ, ಶಿಕ್ಷಣ ಪದ್ಧತಿಯಂತೂ ಮೊದಲೇ ಸರಿಯಿಲ್ಲ. Sad

ಪ್ರಾಮಾಣಿಕವಾಗಿ ೬ ಪ್ರಶ್ನೆಗಳಿಗೆ ಉತ್ತರ ಗೊತ್ತು . Eye-wink

೯ ನೇದಕ್ಕೆ ಆಯ್ಕೆಗಳನ್ನ ಕೊಟ್ಟಿಲ್ಲ Eye-wink wink

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 28, 2008 - 8:56am — sindhu

ಉ: ಗಣರಾಜ್ಯೋತ್ಸವದ ಹಿಂದಿನ ಸಂಜೆ..

sindhu's picture

ಸರಿ ಉತ್ತರಗಳು ಹೀಗಿವೆ.

1. ರಾಜೇಂದ್ರ ಪ್ರಸಾದ್
2. ಮೌಂಟ್ ಬ್ಯಾಟನ್
3. ರಾಜಕುಮಾರಿ ಅಮೃತಾ ಕೌರ್
4. ನ್ಯಾಯದ ಚಕ್ರ (the wheel of laws)
5. ಕೇಸರಿ, ಬಿಳಿ, ಹಸಿರು
6. Day of celebration of Indian and American Democracy
7. ಹುಲಿ,ನವಿಲು,ಕಮಲ, ಮತ್ತು ಮಾವು
8. ಜನವರಿ ೨೬, ೧೯೫೦
9. ಚಕ್ರವರ್ತಿ ರಾಜಗೋಪಾಲಾಚಾರಿ
10. ೫

ಇಲ್ಲಿ ಎಷ್ಟು ಪ್ರಶ್ನೆ ಉತ್ತರಿಸಿದಿವಿ ಗೆದ್ದಿವಿ ಅನ್ನುವುದು ಬೇಕಾಗಿಲ್ಲ. ನಮ್ಮ ದೇಶದ ಬಗೆಗಿನ ಅಭಿಮಾನ ಎಚ್ಚರದ ಮತ್ತು ತಿಳುವಳಿಕೆಯ ನೆಲೆಗಟ್ಟಿನಲ್ಲಿ ಮೆರೆಯಬೇಕು ಅನ್ನಿಸಿತು. ಅದಕ್ಕೆ ಬರೆದೆ. ನಿಮಗೆಲ್ಲರಿಗೂ ಹಾಗೆ ಅನ್ನಿಸಿದ್ದರೆ ಈ ಬರಹದ ಸಾರ್ಥಕತೆ.

ಗಣತಂತ್ರ ಒಂದು ವ್ಯವಸ್ಥೆ. ಗಣರಾಜ್ಯ ಈ ವ್ಯವಸ್ಠೆಯ ಭಾಗ. ರಾಜ್ಯಗಳೆಲ್ಲ ತಮ್ಮದೇ ನೀತಿಆಡಳಿತದೊಡನೆ ಪ್ರತ್ಯೇಕವಾಗಿ ಬೆಳೆಯುತ್ತಾ, ಒಂದು ಕೇಂದ್ರ ಅಥವಾ ದೇಶದ ನೀತಿಗೆ ಬದ್ಢವಾಗಿ ಸಮಗ್ರವಾಗಿ ಅರಳುವುದೇ ಗಣತಂತ್ರ ಎಂಬ ಸಮಾನಾವಾಕಾಶ ಸಹಜೀವನದ ಸಮಾಜ ವ್ಯವಸ್ಥೆ. ಭಾರತದ್ದು ಗಣತಂತ್ರ ಆಡಳಿತ.

ನಮ್ಮ ದೇಶದ ಸ್ವತಂತ್ರ ಹೋರಾಟದ ಯೋಧರ ಮತ್ತು ಗಡಿ ಕಾಯುವ ಯೋಧರ ಹಿರಿಮೆಗೆ ತಲೆಬಾಗುತ್ತಾ ಗಣರಾಜ್ಯೋತ್ಸವದ ಉಜ್ವಲ ನೆನಪುಗಳೊಂದಿಗೆ

ಸಿಂಧು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮತ್ತೇ ಬಂತು ಹಿಂದಿಯನ್ನು ರಾಷ್ಟ್ರಭಾಷೆ ಪಟ್ಟಕ್ಕೆ ಏರಿಸುವ ಹುನ್ನಾರ ?!
  • ನೆನೆಮನ, ನೆನೆ, ಆ ಸುದಿನವ !
  • ಕನ್ನಡ ನಾಡಿಗೆ ಒಂದು ಅಯ್ ಅಯ್ ಟಿ(Indian Institute of Technology) ಬೇಕಲ್ಲವೆ?
  • ಇದು ನಮ್ಮ ಬೆಂಗಳೂರು ವಿಶ್ವ ವಿದ್ಯಾನಿಲಯ !!!!!!!!!!!
Syndicate content

ಲೇಖಕರು

sindhu's picture

ಪರಿಚಯ

ಹೇಳಿಕೊಳ್ಳುವಂತಹ ಪರಿಚಯ ವಿಷಯವೇನಿಲ್ಲ..
ಪ್ರಕೃತಿಯ ಚೆಲುವು ಮತ್ತು ಸಾಧ್ಯತೆಗಳನ್ನ ಮೆಚ್ಚುವವಳು.
ವೃತ್ತಿ: ಟೆಕ್ನಾಲಜಿ ಟ್ರೈನಿಂಗ್

ಎಲ್ಲ ನೋಟಗಳಾಚೆಗಿನ್ನೊಂದು ಚಿತ್ರವಿದೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Vishnu
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?"
    November 21, 2008 - 5:09am
  • poornimas
    ಉ: ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
    November 21, 2008 - 4:43am
  • hamsanandi
    ಉ: ಉತ್ತರ ಧ್ರುವದಲ್ಲಿ ಇರುವ ಮನೆಯಲ್ಲಿ ಕರಡಿ.
    November 21, 2008 - 4:14am
  • Achala Sethu
    ಉ: ಕತೆ: ಬೇರುಗಳಂತಹ ಬಳ್ಳಿಗಳು
    November 21, 2008 - 3:57am
  • uniquesupri
    ಉ: ನವೆಂಬರ್ ೧೮
    November 21, 2008 - 1:09am
  • uniquesupri
    ಉ: ಸದಾ ಅಮರುವ ಕರಡಿ ಅಕಾಲ ಮೃತ್ಯುವಿಗೆ ಈಡಾಗಿ ‘ಅಮರ’ವಾದಾಗ..
    November 21, 2008 - 1:05am
  • uniquesupri
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 21, 2008 - 12:43am
  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 505 ಅತಿಥಿಗಳು ಆನ್ಲೈನ್ ಇರುವರು.


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator