ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › Vasanth Kaje ರವರ ಬ್ಲಾಗ್

ಮೈಸೂರು ನಾಗರಾಜ್ ಮತ್ತು ಮಂಜುನಾಥ್

February 7, 2008 - 4:47am — Vasanth Kaje


 
ಭಾರತೀಯ ಶಾಸ್ತ್ರೀಯ ವಯೊಲಿನ್ ಪ್ರತಿಭೆಗಳಲ್ಲಿ ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರುಗಳು 'ಮೈಸೂರು ಸಹೋದರರು' ಎಂದು ಪ್ರಪಂಚದೆಲ್ಲೆಡೆ ಶಾಸ್ತ್ರೀಯ ಸಂಗೀತ ವಲಯಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಇಂದು ಜಾಗತಿಕ ಸಂಗೀತ ಜಗತ್ತಿನಲ್ಲಿ ಮೈಸೂರು ಸಹೋದರರು, ಕರ್ನಾಟಕದ ಪ್ರಾತಿನಿಧಿಕ ವ್ಯಕ್ತಿಗಳಾಗಿದ್ದಾರೆ.

ಗುರು, ತಂದೆ ಶ್ರೀ ಮಹದೇವಪ್ಪ
ಮೈಸೂರು ಸಹೋದರರ ತಂದೆ ಶ್ರೀ ಮಹದೇವಪ್ಪ, ಮೈಸೂರಿನ ಬಳಿಯ ಮುಡಿಗುಂಡಂ ಎಂಬ ಹಳ್ಳಿಯಲ್ಲಿ ಜನಿಸಿದವರು. ಬಾಲ್ಯದಿಂದಲೇ ವಯೊಲಿನ್ ಕಲಿಯಲು ಆರಂಭಿಸಿ, ಬಳಿಕ ನಾಟಕಗಳಲ್ಲಿಯೂ ಅಭಿನಯಿಸುತ್ತಿದ್ದವರು. ಗಾಯನ ಮತ್ತು ವಾದನದ ತರಬೇತಿಯನ್ನು ಇವರು ಮೊದಲಿಗೆ ಶ್ರೀ ಕೊಳ್ಳೇಗಾಲ ನಾರಾಯಣಸ್ವಾಮಿಯವರಿಂದ ಪಡೆದರು. ಪ್ರೌಢ ಶಿಕ್ಷಣವನ್ನು ಪಿಟೀಲು ಚೌಡಯ್ಯನವರ ತಮ್ಮ ಟಿ.ಪುಟ್ಟಸ್ವಾಮಯ್ಯನವರಿಂದ ಪಡೆದರು. ಮೈಸೂರಿನಲ್ಲಿ ನೆಲೆಸಿ 'ಬಿಡಾರಂ' ಸಂಗೀತ ಶಾಲೆ ಯಲ್ಲಿ ಕಠಿಣ ಗುರುಕುಲ ಅಭ್ಯಾಸವನ್ನು ನಡೆಸಿ ಮುಂದೆ ವಿದ್ವಾಂಸರಾಗಿ ಪ್ರಖ್ಯಾತರಾದರು.
 
ಎಳವೆಯಲ್ಲಿ ಮಿಂಚಿದ ಬಾಲಪ್ರತಿಭೆಗಳು
ತಂದೆಯ ಶಿಸ್ತಿನ ಶಿಕ್ಷಣದಿಂದ ರೂಪುಗೊಂಡು ನಾಗರಾಜ್ ಮತ್ತು ಮಂಜುನಾಥ್, ಕ್ರಮವಾಗಿ ಹತ್ತು ಮತ್ತು ಒಂಭತ್ತನೆಯ ವಯಸ್ಸಿನಲ್ಲಿ ಮೊದಲ ಕಛೇರಿಯನ್ನು ನಡೆಸಿಕೊಟ್ಟರು. ನಾಗರಾಜ್, ತಮ್ಮ ಹದಿನಾಲ್ಕನೆಯ ವಯಸ್ಸಿನಲ್ಲಿ ಪ್ರತಿಷ್ಠಿತ 'ಮದರಾಸು ಮ್ಯೂಸಿಕ್ ಅಕಾಡಮಿ' ಯ 'ಅತ್ಯುತ್ತಮ ವಯಲಿನಿಸ್ಟ್' ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡರು. 1986 ರಲ್ಲಿ ಅಕಾಡೆಮಿ ಅವರಿಗೆ 'ಚಿನ್ನದ ಪದಕ'ವನ್ನು ಕೊಟ್ಟು ಸನ್ಮಾನಿಸಿತು. ಇವರನ್ನು ನಿಕಟವಾಗಿ ಹಿಂಬಾಲಿಸಿದ ಮಂಜುನಾಥ್, ತಾವೂ 'ಮದ್ರಾಸ್ ಮ್ಯೂಸಿಕ್ ಅಕಾಡೆಮಿ'ಯ 'ಅತ್ಯುತ್ತಮ ವಯೊಲಿನಿಸ್ಟ್' ಪ್ರಶಸ್ತಿಯನ್ನು ಪಡೆದುಕೊಂಡರು. ಮುಂದೆ ಮೈಸೂರು ಯುನಿವರ್ಸಿಟಿಯಲ್ಲಿ 'ಮಾಸ್ಟರ್ ಆಫ್ ಮ್ಯೂಸಿಕ್' ಪದವಿಯನ್ನು ಪ್ರಥಮ ರ್ಯಾಂಕ್ ಮತ್ತು ಮೂರು ಚಿನ್ನದ ಪದಕಗಳೊಂದಿಗೆ ಪೂರೈಸಿದರು. ಅಲ್ಲಿಗೆ ವಿಶ್ರಮಿಸದೆ, ಸಂಗೀತದ ಬಗ್ಗೆ ಪ್ರೌಢ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಗಳಿಸಿದರು. ಸಹೋದರರಿಬ್ಬರೂ ಆಕಾಶವಾಣಿಯ 'ಎ' ಶ್ರೇಣಿಯ ಕಲಾವಿದರಾಗಿದ್ದಾರೆ. ಡಾ|ಮಂಜುನಾಥ್, ಮೈಸೂರು ಯುನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
 
ನುಡಿಸುವಿಕೆ ಮತ್ತು ಶೈಲಿ
ಮೈಸೂರು ಸಹೋದರರು ತಮ್ಮ ಅಪ್ರತಿಮ ಶಿಸ್ತಿನ ಗಂಭೀರ ಶೈಲಿಯಿಂದ ಇತರೆಲ್ಲರಿಗಿಂತ ಪ್ರತ್ಯೇಕವಾಗಿ ನಿಲ್ಲುತ್ತಾರೆ. ಇವರ ನುಡಿಸಾಣಿಕೆಯು ಭಾವನಾಪ್ರಧಾನವಾಗಿ ಗಮಕಗಳಿಂದ ಶ್ರೀಮಂತವಾಗಿದೆ. ಲೆಕ್ಕಾಚಾರಗಳಿಂದ ಕೂಡಿದ ಕ್ಲಿಷ್ಟ ಮತ್ತು ಅತಿವೇಗದ ಚಲನೆಗಳಲ್ಲಿಯೂ ಸಮತೋಲನವನ್ನು ಎಳ್ಳಷ್ಟೂ ಬಿಟ್ಟುಕೊಡದೆ, ನುಡಿಸುವುದು ಇವರ ವಿಶೇಷತೆ. ಹಿಂದುಸ್ಥಾನಿ ಮತ್ತು ದಕ್ಷಿಣಾದಿಗಳೆರಡರಲ್ಲಿಯೂ ಪ್ರಭುತ್ವವಿದ್ದು, (ಹೆಚ್ಚಾಗಿ) ನಾಗರಾಜ್ ದಕ್ಷಿಣಾದಿಯಲ್ಲಿ, ಮತ್ತು ಮಂಜುನಾಥ್ ಹಿಂದುಸ್ಥಾನಿಯಲ್ಲಿ ನಿರ್ವಹಿಸಿ ಜುಗಲ್ ಬಂದಿಗಳನ್ನೂ ಅದ್ಭುತವಾಗಿ ನಡೆಸಿಕೊಡುತ್ತಾರೆ. ತಮ್ಮ ಅನನುಕರಣೀಯ ಶೈಲಿಯಿಂದ ಅಸಂಖ್ಯ ಅಭಿಮಾನಿಗಳನ್ನು ಪಡೆದಿದ್ದು 'ಮೈಸೂರು ಸಹೋದರರ ಶೈಲಿ' ಎಂದು ಗುರುತಿಸಿ ಆಸ್ವಾದಿಸುವ ದೊಡ್ಡ ಕಲಾರಸಿಕರ ಬಳಗವನ್ನು ಪಡೆದಿದ್ದಾರೆ.
 
ಯಶಸ್ಸಿನ ಹಾದಿಯ ಮೈಲಿಗಲ್ಲುಗಳು
 
ಮೈಸೂರು ಸಹೋದರರು ಜಂಟಿಯಾಗಿ ಅಲ್ಲದೆ, ಇತರ ಜಗತ್ಪ್ರಸಿದ್ಧ ಸಂಗೀತಗಾರರೊಂದಿಗೆ (ಭಾರತೀಯ ಮತ್ತು ವಿದೇಶಿ), ಸಹವಾದನವನ್ನು ನಡೆಸಿದ್ದಾರೆ. ಉತ್ತರಾದಿ-ಮತ್ತು ದಕ್ಷಿಣಾದಿ ಜುಗಲ್ ಬಂದಿಗಳಲ್ಲಿ ಭಾಗವಹಿಸಿದ್ದಾರೆ. ಮೇಲೆ ತಿಳಿಸಿದಂತೆ ತಮ್ಮ ಎಳೆಯ ವಯಸ್ಸಿನಿಂದ ಕಛೇರಿಗಳನ್ನು ನಡೆಸಿಕೊಡುತ್ತಿರುವುದರಿಂದ ಇವರು ನಡೆಸಿಕೊಟ್ಟ ಕಾರ್ಯಕ್ರಮಗಳು ಸಹಸ್ರಾರು. ಅವುಗಳಲ್ಲಿ ಈ ಕೆಳಗಿನ ಕಾರ್ಯಕ್ರಮಗಳನ್ನು ವಿಶೇಷವಾಗಿ ಹೆಸರಿಸಬಹುದು.


  • ಕಾಮನ್ ಥ್ರೆಡ್ ಫೆಸ್ಟಿವಲ್, ಓರೆಗಾನ್, ಯು ಯಸ್ ಏ
  • ಆಲ್ ಯುರೋಪಿಯನ್ ಕಲ್ಚರಲ್ ಫೆಸ್ಟಿವಲ್, ಯುಕೆ
  • ಸಿಡ್ನಿ ಒಪೆರಾ ಹೌಸ್, ಆಸ್ಟ್ರೇಲಿಯಾ
  • ಫೆಸ್ಟಿವಲ್ ಆಫ್ ಇಂಡಿಯಾ ಲಂಡನ್, ಯುಕೆ
  • ರೋಯಲ್ ಛಾರಿಟಿ ಕಾನ್ಸರ್ಟ್, ಕೌಲಾಲಂಪುರ್ (ಮಲೇಷಿಯಾದ ರಾಜರೆದುರು)
  • ಫೇಡರೇಶನ್ ಸ್ಕ್ವೇರ್, ಮೆಲ್ಬರ್ನ್
  • ನಮೀಬಿಯಾದ ಅಧ್ಯಕ್ಷ ಡಾ| ಸ್ಯಾಂ ನುಜಾಮೋ ರಿಗಾಗಿ ವಿಶೇಷ ಕಾರ್ಯಕ್ರಮ

ಮತ್ತು ಈ ಕೆಳಗಿನ ಕೇಂದ್ರಗಳಲ್ಲಿ ನಡೆಸಿಕೊಟ್ಟ ಕಾರ್ಯಕ್ರಮಗಳು

  • ಪುಟ್ರಾ ವರ್ಲ್ಡ್ ಟ್ರೇಡ್ ಸೆಂಟರ್, ಕೌಲಾಲಂಪುರ್
  • ಥಿಯೇಟರ್ ಡ ಲ ವಿಲ್ಲಾ, ಪ್ಯಾರಿಸ್
  • ಶೈಕ್ಷಣಿಕ ತರಬೇತಿ ಮತ್ತು ಕಛೇರಿಗಳು, ಡೆಲಾವೇರ್ ಯುನಿವರ್ಸಿಟಿ
  • ಯುನಿವರ್ಸಿಟಿ ಆಫ್ ವೆಲ್ಸಿಯಾನ್
  • ಯುನಿವರ್ಸಿಟಿ ಆಫ್ ಅಯೋವಾ
  • ಯುನಿವರ್ಸಿಟಿ ಆಫ್ ಶಿಕಾಗೋ
  • ಯುನಿವರ್ಸಿಟಿ ಆಫ್ ನಾರ್ಥ್ ಟೆಕ್ಸಾಸ್
  • ಯುನಿವರ್ಸಿಟಿ ಆಫ್ ಒಸಾಕಾ
  • ಯುನಿವರ್ಸಿಟಿ ಆಫ್ ನಾರ್ಥ್ ಕೆರೋಲಿನಾ
  • ಟೆಕ್ಸಾಸ್ ಎ & ಎಮ್ ಯುನಿವರ್ಸಿಟಿ
ಕಛೇರಿ ನೀಡಿರುವ ದೇಶಗಳು: ಅಮೆರಿಕಾ, ಕೆನಡಾ, ಇಂಗ್ಲೆಂಡ್, ಫ್ರಾನ್ಸ್, ಜಪಾನ್, ಜರ್ಮನಿ, ಆಸ್ಟ್ರಿಯಾ, ಹಾಂಗ್ ಕಾಂಗ್, ಸಿಂಗಾಪುರ, ಮಲೇಶಿಯಾ, ಫಿಲಿಫೀನ್ಸ್, ಸ್ವಿಟ್ಸರ್ ಲ್ಯಾಂಡ್, ಆಸ್ಟ್ರೇಲಿಯಾ ಮತ್ತು ಅರಬ್ ದೇಶಗಳು.
 
 
ಅರಸಿ ಬಂದಿರುವ ಪ್ರಶಸ್ತಿಗಳು
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
  • ಅಮೇರಿಕಾದ ವಿಶ್ವ ಸಂಸ್ಕೃತಿ ಸಂಸ್ಥೆಯಿಂದ ಶ್ರೇಷ್ಠತಾ ಪ್ರಶಸ್ತಿ 
  • ಅಮೆರಿಕನ್ ಆರ್ಟ್ಸ್ ಕೌನ್ಸಿಲ್ ನಿಂದ ಆನರ್ಸ್
  • ಯುನಿವರ್ಸಿಟಿ ಆಫ್ ಒಕ್ಲಹಾಮದಿಂದ ಅರ್ಹತಾ ಪ್ರಶಸ್ತಿ
  • ಸಂಗೀತ ಸಾಮ್ರಾಟ್, ಸಂಗೀತ ರತ್ನ, ಗಾನಕಲಾಶ್ರೀ, ಸತ್ಯಶ್ರೀ, ಆರ್ಯಭಟ ಬಿರುದುಗಳು ಮತ್ತು ಇತರ ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

 ವಂದನೆಗಳು,
ವಸಂತ್ ಕಜೆ
 
ಸೂಚನೆ: ಈ ಲೇಖನವನ್ನು ನಾನು ಕನ್ನಡ ವಿಕಿಪೀಡಿಯಕ್ಕೆ ಹಾಕಲೆಂದು ಬರೆದೆ. ಮುಖ್ಯ ಆಕರ 'www.violinindia.com' ಮತ್ತು ಇತರ ವೆಬ್ ಸೈಟುಗಳು. 

  • ಮೈಸೂರು
  • ವಯೊಲಿನ್
  • ಶಾಸ್ತ್ರೀಯ ಸಂಗೀತ
~.~
  • Vasanth Kaje ರವರ ಬ್ಲಾಗ್
  • Login or register to post comments
  • 271 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 7, 2008 - 9:19am — Sunil Jayaprakash

ಉ: ಮೈಸೂರು ನಾಗರಾಜ್ ಮತ್ತು ಮಂಜುನಾಥ್

Sunil Jayaprakash's picture

ವಸಂತ್ ಕಜೆ, "ಮೈಸೂರು ಸಹೋದರರ" ಬಗ್ಗೆ ಸಂಪದಿಗರಿಗೆ ತಿಳಿಸಿಕೊಟ್ಟದ್ದಕ್ಕೆ ಹೆನ್ನನ್ನಿ. ಮೈಸೂರು ಸಹೋದರರ ಸಂಗೀತವನ್ನು ಸಂಗೀತಪ್ರಿಯ.ಆರ್ಗಿನ ಈ ಕೊಂಡಿಗಳ ಮೂಲಕ ಆಲಿಸಬಹುದು.

ಕೊಂಡಿ ೧, ಕೊಂಡಿ ೨, ಕೊಂಡಿ ೩.

ಅದರಲ್ಲಿಯೂ ಇವರ ಕೃಷ್ಣ ನೀ ಬೇಗನೆ ಬಾರೋ ಕೃತಿಯಲ್ಲಿನ ಗಮಕಗಳನ್ನಂತೂ ಕೇಳುತ್ತಲೇ ಇರಬೇಕು ಅನಿಸುತ್ತದೆ.

ವಸಂತ್, ನೀವು ತಪ್ಪುತಿಳಿಯುವುದಿಲ್ಲವೆಂದರೆ ಒಂದು ಕೊಸರು - "ಯಶಸ್ಸಿನ ಹಾದಿಯ ಮೈಲಿಗಲ್ಲುಗಳು" ಅಷ್ಟು ಸಮರ್ಪಕವಾಗಿ ಬಂದಿಲ್ಲ. "ಮೈಸೂರು ಸಹೋದರರು" ಭಾರತದಲ್ಲಿ ಒಂದೂ ವಿಶಿಷ್ಟವಾದ ಕಾರ್ಯಕ್ರಮ ನಡೆಸಿಕೊಟ್ಟಿಲ್ಲವೇ. "ಹೊರದೇಶದಲ್ಲಿ ನುಡಿಸಿದ್ದು ಮಾತ್ರವೇ ಸಾಧನೆ", ಎಂಬ ತಪ್ಪು ಅಭಿಪ್ರಾಯಕ್ಕೆ ಈ ಪ್ಯಾರಾ ಸ್ವಲ್ಪ ಸೊಪ್ಪು ಹಾಕುತ್ತಿದೆ. ಅದೂ ಅಲ್ಲದೆ, "ಕಛೇರಿ ನೀಡಿರುವ ದೇಶಗಳು" ಅಡಿಯಲ್ಲಿ "ಭಾರತವೇ" ಇಲ್ಲ!!!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 7, 2008 - 2:44pm — Vasanth Kaje

ಉ: ಮೈಸೂರು ನಾಗರಾಜ್ ಮತ್ತು ಮಂಜುನಾಥ್

Vasanth Kaje's picture

ಸುನಿಲ್,
ನಿಮ್ಮ ಕೊಸರು ತಪ್ಪಲ್ಲ. ಆದರೆ ನಾನು ಆ ಬಗ್ಗೆ ಕೆಳಗಿನ ವಿಷಯಗಳನ್ನು ಹೇಳಬಯಸುತ್ತೇನೆ.
೧) ತಮ್ಮ ಹತ್ತನೆಯ ವಯಸ್ಸಿನಿಂದ ಕಛೇರಿಗಳನ್ನು ಕೊಡುತ್ತಿರುವ ಇವರು, ಭಾರತದಲ್ಲಿ ಎಲ್ಲಿ ಕಛೇರಿ ನೀಡಿದರು, ಎಲ್ಲಿ ನೀಡಿಲ್ಲ ಎನ್ನುವ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ. ಆದ್ದರಿಂದ ಇವರು ಸಹಸ್ರಾರು ಕಛೇರಿಗಳನ್ನು ನೀಡಿರುತ್ತಾರೆ ಎಂದು ಬರೆದಿದ್ದೇನೆ. ಇಲ್ಲಿ ಭಾರತ default ಹೆಸರು. ಅದನ್ನು ಓದುಗರು ಅರ್ಥಮಾಡಿಕೊಳ್ಳುತ್ತಾರೆ ಎಂದುಕೊಂಡೆ.
೨) ಅವರ ಬಗೆಗಿನ ಅಧಿಕೃತ ಸೈಟು(ಗಳು) ಭಾರತದ ಕಛೇರಿಗಳ ಬಗ್ಗೆ ವಿಶೇಷವಾಗಿ ಎಲ್ಲೇಖಿಸಿಲ್ಲ.
೩) ನಾನು ’ಬೆಂಗಳೂರು ಗಾಯನ ಸಮಾಜ’ ದಂಥ ಕೆಲವು ಸಭೆಗಳನ್ನು ನನ್ನ ಸ್ವಂತ ಅಂದಾಜಿನಿಂದ ಗುರುತಿಸಬಹುದಿತ್ತು. ಆದರೆ ಅದು ಅವರ ವಿಸ್ತಾರವಾದ ಕಛೇರಿಯ ಅನುಭವದಲ್ಲಿ ಒಂದು ಹನಿಯಷ್ಟೂ ಆಗಲಾರದು. ಸಾಮಾನ್ಯ ಸಂಗೀತಗಾರರಿಗೆ ’ಗಾಯನ ಸಮಾಜ’ ದಲ್ಲಿ ಹಾಡುವುದೆಂದರೆ ಅದೊಂದು ಮೈಲಿಗಲ್ಲು. ಆದರೆ ಇವರಿಗೆಲ್ಲ್ಲ ಅದು ಬಹುಶ: ಪಾಕ್ಷಿಕ ಅನುಭವ.

ಸಾಧ್ಯವಾದರೆ ಮಾಹಿತಿ ಸಂಗ್ರಹಿಸಿ ಲೇಖನವನ್ನು ಅಪ್ಡೇಟ್ ಮಾಡುತ್ತೇನೆ. ಇದರ ಬಗ್ಗೆ ಮೈಸೂರು ಸಹೋದರರಿಗೆ ಪತ್ರಿಸುವುದು ಸಾಧ್ಯವಿದೆ.

ವಸಂತ್ ಕಜೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • *kannadave satya kannadave nitya*kuvempu
  • ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.
  • ನನ್ನ ಅಂತರ್ಜಾಲ ಪುಟ ನೋಡಿ ನಿಮ್ಮ ಅನುಭವ ತಿಳಿಸಿ
  • ಕ್ರಿಕೆಟ್ ವಿಶ್ವಕಪ್ ೨೦೦೭ - ಮೊದಲ ಸುತ್ತಿನ ವೇಳಾಪಟ್ಟಿ - ಕನ್ನಡದಲ್ಲಿ
  • ಕಾವೇರಿ ತೀರ್ಪಿನ ಸತ್ಯಗಳು
Syndicate content

ಲೇಖಕರು

Vasanth Kaje's picture

ಪೂರ್ಣ ಹೆಸರು
ವಸಂತ್ ಕಜೆ (Vasanth Kaje)

ಪರಿಚಯ

ವೃತ್ತಿಯಿಂದ ಕಂಪ್ಯೂಟರ್ ಪ್ರೋಗ್ರಾಮ್ಮರ್.
ಪ್ರವೃತ್ತಿಯಿಂದ ಛಾಯಾಚಿತ್ರಗ್ರಾಹಕ, ಪರಿಸರಾಸಕ್ತ.
ಕೃಷಿ ಹಿನ್ನೆಲೆಯಿಂದ ಬಂದವನು ಮತ್ತು ಕೃಷಿಯ ಬಗ್ಗೆ ಒಲವುಳ್ಳವನು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಪುಟ್ಟ ಗೂಡು
  • ಮೈಸೂರಿನ ಓಶೋ ಸನ್ನಿಧಿಯಲ್ಲಿ "ಧ್ಯಾನಸ್ಥ" 3 ದಿನಗಳು
  • ಗಾಂಧೀಸ್ಮರಣೆ - 2
  • ಡೈರಿಯ ಕೆಲವು ಹಾಳೆಗಳು - ಭಾಗ ೧೧
  • ನಿಮ್ಮ ಸ್ನೇಹ
  • ಓದಿದ್ದು ಕೇಳಿದ್ದು ನೋಡಿದ್ದು-49 ಬ್ಲಾಗಿನಲ್ಲಿದ್ದುದು ಪುಸ್ತಕಕ್ಕೆ.................
  • ಕಲೆಗುಂಟೇ ನೆಲೆಯ ಬಲೆ?
  • ಪ್ರಾರ್ಥಿಸಲೊಂದು ಬೇರೆಯದೇ ಬಗೆ :)
  • ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್
  • ಸಹಕಾರ ಬೇಕಾಗಿದೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 14, 2008 - 1:23pm
  • vijendra
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 14, 2008 - 1:19pm
  • mahesha
    ಉ: ’ಭೋಜ’ ತಮಿಳನಾಗಿದ್ದರೆ ಅವನ ಹೆಸರು ಏನು ಇರುತಿತ್ತು?
    October 14, 2008 - 1:15pm
  • anil.ramesh
    ಉ: ಮಲೆನಾಡಿನಲ್ಲಿ ಎರಡು ದಿನಗಳು...
    October 14, 2008 - 1:14pm
  • mahesha
    ಉ: ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
    October 14, 2008 - 1:13pm
  • srinivasps
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 14, 2008 - 1:12pm
  • shreekant.mishrikoti
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 14, 2008 - 1:07pm
  • srinivasps
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 14, 2008 - 1:03pm
  • shreekant.mishrikoti
    ಉ: ಚಿಕಾಗೊ ನಗರದ ದಿಗಂತ ಬೆಡಗಿಯರು !
    October 14, 2008 - 1:02pm
  • vijendra
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 14, 2008 - 12:59pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 59 ಅತಿಥಿಗಳು ಆನ್ಲೈನ್ ಇರುವರು.


"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator