olnswamy (ಲೇಖನಗಳು)
ಕನ್ನಡಂಗಳ್: ಪದ್ಯ ಹೀಗಿದೆ
August 9, 2006 - 5:39pm — olnswamyಸಂಪದದ ಗೆಳೆಯರೊಬ್ಬರು ಕನ್ನಡಂಗಳ್ ಅನ್ನುವ ಮಾತು ಕವಿರಾಜಮಾರ್ಗದಲ್ಲಿದೆಯೇ ಎಂದು ಸಂದೇಹ ವ್ಯಕ್ತಪಡಿಸಿದ್ದರು. ಆ ಮಾತು ಬರುವ ಜಾಗ ಆಶ್ವಾಸ ೧, ಪದ್ಯ ೪೬. ಮುಂದೆ ಓದಿ »

ಭಾಷೆಯಲ್ಲಿ ಸರಿ ಮತ್ತು ತಪ್ಪು
August 8, 2006 - 8:17am — olnswamyಕೆಲವು ದಿನಗಳಿಂದ ಇಸ್ಮಾಯಿಲ್ ಅವರ ಬರಹಕ್ಕೆ ಪ್ರತಿಕ್ರಿಯೆಯಾಗಿ ಕುತೂಹಲಕರ ಚರ್ಚೆ ಬೆಳೆದಿರುವುದು ಗಮನಿಸಿದ್ದೇನೆ. ತುಳು ಮತ್ತು ಕನ್ನಡ ಸಂಬಂಧ ಕುರಿತು, ಲ ಳಗಳ ಬಳಕೆ ಕುರಿತು, ಅ ಹ ಗಳನ್ನು ಕುರಿತು, ಮತ್ತು ಕೆಲವು ರೂಪಗಳು ಬೇಡಾದ ಇತ್ಯಾದಿ ರೂಪುಗೊಂದಿರುವ ಕುರಿತು ಚರ್ಚೆ ನಡೆದಿದೆ. ನಾವೆಲ್ಲ ಗಮನಿಸಬೇಕಾದ ಕೆಲವು ಮೂಲ ಸಂಗತಿಗಳನ್ನು ಗಮನಿಸಬೇಕು ಅನ್ನಿಸಿದೆ. ೧. ಕನ್ನಡ ಒಂದೇ ಅಲ್ಲ ಅಸಂಖ್ಯಾತ ಕನ್ನಡಗಳಿವೆ: ಕನ್ನಡದ ಮೊದಲ ಕೃತಿ ಕವಿರಾಜ ಮಾರ್ಗದಲ್ಲಿ ಒಂದು ಮಾತಿದೆ. ಅಲ್ಲಿ ಕೃತಿಕಾರ "ಕನ್ನಡಂಗಳ್" ಕನ್ನಡಗಳು ಎಂದು ಬಹುವಚನವನ್ನು ಬಳಸಿದ್ದಾನೆ. ಭಾಷೆ ಅಸ್ತಿತ್ವಕ್ಕೆ ಬರುವುದು ಯಾರಾದರೂ ಅದನ್ನು ಬಳಸಿದಾಗ ಮಾತ್ರವೇ. ಭೌಗೋಳಿಕವಾಗಿ ಬೇರೆ ಬೇರೆ ಪ್ರದೇಶದ ಜನರ ಮಾತಿನಲ್ಲಿ ಭಿನ್ನತೆಗಳು ಕಾಣುತ್ತವೆ. ಉಚ್ಚಾರದಲ್ಲಿ ಸ್ವರಗಳ ವ್ಯತ್ಯಾಸವೇ ಎದ್ದು ಕಾಣುವುದು. ನಂತರ ಆಸ್ಪಿರೇಟೆಡ್ ಧ್ವನಿಗಳದು: ಲ-ಳ, ಇತ್ಯಾದಿ. ವ್ಯಂಜನಗಳ ಉಚ್ಚಾರದಲ್ಲಿ ಅಂಥ ವ್ಯತ್ಯಾಸ ಕಾಣುವುದಿಲ್ಲ. ಇಂಥ ವ್ಯತ್ಯಾಸಗಳು ಸರಿಯೂ ಅಲ್ಲ, ತಪ್ಪೂ ಅಲ್ಲ. ಹಾಗೆ ಒಂದು ಪ್ರದೇಶದ ಎಲ್ಲ ಜನರೂ ಬಿಡಿ ಎಲ್ಲ ವ್ಯಕ್ತಿಗಳೂ ಒಂದೇ ಥರ ಉಚ್ಚರಿಸುವುದೂ ಸಾಧ್ಯವೇ ಇಲ್ಲ. ಉಚ್ಚಾರದ ಮೂಲಕ ಗಮನಕ್ಕೆ ಬರುವ ವ್ಯತ್ಯಾಸಗಳನ್ನೆಲ್ಲ ಪಟ್ಟಿ ಮಾಡಿ ವಿವರಿಸುವುದೆಂದರೆ ಸಾವಿರ ನಾಲಗೆಯ ಆದಿಶೇಷನಿಗೂ ಅಸಾಧ್ಯವಾದ ಬೇಸರ ಹುಟ್ಟಿಸುವ ಕೆಲಸ ಅನ್ನುತ್ತದೆ ಕವಿರಾಜಮಾರ್ಗ. ಇಂಥ ಉಚ್ಚಾರ ವ್ಯತ್ಯಾಸ ಎಲ್ಲ, ಅಂದರೆ ಜಗತ್ತಿನ ಎಲ್ಲ ಭಾಷೆಗಳಲ್ಲೂ ಇದ್ದದ್ದೇ. ಇವುಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಅನ್ನುವ ಪ್ರಶ್ನೆಯೇ ತಪ್ಪು. ಪರಿಸರ ವೈವಿಧ್ಯ ಹೇಗೆ ಅಗತ್ಯವೋ ಹಾಗೆಯೇ ಭಾಷೆಯೊಂದು ಜೀವಂತ ಉಳಿದು ಬೆಳೆಯಲು ಒಂದೇ ಭಾಷೆಯೊಳಗಿನ ವೈವಿಧ್ಯವೂ ಹಾಗೆಯೇ ಅಗತ್ಯ. ಮುಂದೆ ಓದಿ »

ಐದನೆಯ ಸಂಚಿಕೆ - ಡಾ|| ಜಿ ಎಸ್ ಶಿವರುದ್ರಪ್ಪನವರೊಂದಿಗೆ
February 12, 2006 - 6:45pm — olnswamyಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಕವಿ ಡಾ|| ಜಿ ಎಸ್ ಶಿವರುದ್ರಪ್ಪನವರ ಸಂದರ್ಶನ.
ತಾವು ಅನೇಕರು ಜಿ ಎಸ್ ಎಸ್ ಅವರ ಎಷ್ಟೋ ಕವಿತೆಗಳನ್ನು ಓದಿದ್ದೀರಿ, ಹಾಡುಗಳನ್ನ ಕೇಳಿದ್ದೀರಿ, ಕನ್ನಡದ ತುಂಬ ಜನ ಪ್ರೀತಿಯನ್ನು ಗಳಿಸಿಕೊಂಡಿರುವ, ನಮ್ಮ ಎಷ್ಟೋ ಭಾವನೆಗಳಿಗೆ ಮಾತನ್ನು ಕೊಟ್ಟಿರುವ ಬಹಳ ಮುಖ್ಯವಾದ ಕವಿ ಅವರು. ಮೊನ್ನೆ ತಾನೆ, ಅಂದರೆ ಫೆಬ್ರುವರಿ ೭ನೇ ತಾರೀಖು ನಮ್ಮ ಜಿ ಎಸ್ ಎಸ್ ಅವರಿಗೆ ೮೦ ವರ್ಷ ತುಂಬಿ, ಈಗ ೮೧ರ ಹರೆಯಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ನಡೆದ ಈ ಸಂದರ್ಶನದಲ್ಲಿ:
೧. ಕಾವ್ಯೋದ್ಯಮ ಶುರು ಮಾಡಿದ್ದು, ಸಾಹಿತ್ಯದಲ್ಲಿ ಆಸಕ್ತಿ ಹುಟ್ಟಿದ್ದು, ಬಾಲ್ಯ
೨. ಕಾವ್ಯಗಳಲ್ಲಿ 'ಕತ್ತಲು ಬೆಳಕು'
ಈ ಸಂಗತಿಗಳ ಬಗ್ಗೆ ನಮ್ಮೊಡನೆ ಸಂವಾದ ನಡೆಸಿದ್ದಾರೆ.
ಅಷ್ಟೇ ಅಲ್ಲದೆ, ಅಂತರಜಾಲದ ಕನ್ನಡಿಗರಿಗಾಗಿ ತಮ್ಮ ನೆಚ್ಚಿನ ಮೂರು ಕವನಗಳನ್ನೂ ಓದಿ, ತಮ್ಮ ಧ್ವನಿಯಲ್ಲೇ ನಮ್ಮೆಲ್ಲರೊಂದಿಗೆ ಹಂಚಿಕೊಂಡಿದ್ದಾರೆ.








RSS: