tvsrinivas41 (ಬ್ಲಾಗ್ ಬರಹಗಳು)
ಪೂರ್ವ ಅಥವಾ ಅಪರ ಪ್ರಯೋಗ?
August 25, 2006 - 10:44pm — tvsrinivas41ಹಿಂದೊಮ್ಮೆ ಕರ್ಮವೀರ ವಾರಪತ್ರಿಕೆಯಾಗಿ ಹೊರಬರುತ್ತಿತ್ತು. ಒಮ್ಮಿಂದೊಮ್ಮೆಲೇ ಅದರ ಹೊರ ಪದರಲ್ಲಿ ಸತ್ತ ಕರುವಿನ ಚಿತ್ರವಿದ್ದು, ಇನ್ನು ಮುಂದೆ ಈ ಪತ್ರಿಕೆಯ ಹೊರಬರುವುದಿಲ್ಲವೆಂಬ ಅಂಕಣ ಪ್ರಕಟವಾಗಿತ್ತು. ಇಂದು ಆ ಚಿತ್ರ ನನ್ನ ಕಣ್ಮುಂದೆ ಬರುತ್ತಿದೆ. ಮುಂದೆ ಓದಿ »

ಬೆಸ್ಟಾದ ಬ್ಯೂಟಿ, ಬೀಸ್ಟೀ ಬೆಸ್ಟ್
June 20, 2006 - 8:42pm — tvsrinivas41ಹೆಸರು ಬೆಸ್ಟ್. ಕಾರ್ಯವೈಖರಿ ಬೆಸ್ಟ್. ನೋಡಲು ಬ್ಯೂಟಿ, ಆದರೆ ಬಡವರು, ದಿನಗೂಲಿ ಕಾಯಕ ಬಡಪಾಯಿ ಮುಂಬಯಿಕರರಿಗೆ ಬೀಸ್ಟು. ಮುಂದೆ ಓದಿ »

ಹೀಗೂ ಜೀವಿಸಬಹುದೇ?
May 27, 2006 - 7:05am — tvsrinivas41ಹೌದು ಜೀವಿಸಬಹುದು, ಜೀವಿಸುತ್ತಿದ್ದಾರೆ, ಮುಂಬೈ ನಲ್ಲಿ ಇದು ಸಾಮಾನ್ಯವಾಗಿ ಕಂಡು ಬರುವ ಸಂಗತಿ. ಮುಂದೆ ಓದಿ »

- tvsrinivas41 ರವರ ಬ್ಲಾಗ್
- Login or register to post comments
- 901 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಮೇರಾ ಭಾರತ್ ಮಹಾನ್!
May 25, 2006 - 8:32pm — tvsrinivas41ನಮ್ಮ ದೇಶದಲ್ಲಿ ಬಹಳವಾಗಿ ಉಕ್ತವಾಗುವ ಮಾತೆಂದರೆ 'ಮೇರಾ ಭಾರತ್ ಮಹಾನ್'. ನಾನು ಅದಕ್ಕೆ ಇನ್ನೊಂದನ್ನು ಸೇರಿಸಬಯಸುವೆ, ಮೇರಾ ಸೋಪ್ ಹಮಾಮ್. ಏಕೆಂದರೆ ಈ ಎರಡೂ ಚಿರಂಜೀವಿಗಳು (ನನ್ನ ಮಟ್ಟಿಗೆ). ಸ್ವತಂತ್ರ ಬಂದು ೬೦ ವರುಷಗಳಾಗುತ್ತಿದ್ದರೂ ನಮ್ಮ ದೇಶದ ಜನಸಂಖ್ಯೆ ಒಂದೇ ಮೇಲೇರುತ್ತಿರುವುದು. ಇದೊಂದು ದೃಷ್ಟಿಯಿಂದ ನಮ್ಮ ದೇಶ ಎಂದಿಗೂ ಮಹಾನ್. ಹಾಗೆಯೇ ಹಮಾಮ್ ಸೋಪನ್ನು ಉಪಯೋಗಿಸುವವರು ಅದನ್ನೇ ಉಪಯೋಗಿಸುತ್ತಿದ್ದಾರೆ (ನನ್ನಂತಹವರು - ಅಪ್ಪ ಹಾಕಿದ ಹಳೆಯ ಆಲದ ಮರಕ್ಕೇ ಜೋತು ಬೀಳುವಂತಹವರು). ಮುಂದೆ ಓದಿ »

ಅಧೀನ - ಅಧೀರ
May 12, 2006 - 8:01pm — tvsrinivas41ಮಾಮೂಲಿನಂತೆ ಇಂದು ಬ್ಯಾಂಕಿಗೆ ೮.೩೦ ಕ್ಕೆ ಹೋದೆ. ಯಾಕೋ ಒಳಗೆಲ್ಲ ಕಡೆಯೂ ಕತ್ತಲೆ ತುಂಬಿತ್ತು. ಬಾಗಿಲ ಒಳಗೆ ಕಾಲಿಡುತ್ತಿದ್ದಂತೆ ಉಸಿರು ಕಟ್ಟಿಸುವಂತಹ ಹೊಗೆಯ ವಾಸನೆ ಮೂಗಿಗೆ ಬಡಿದಿತ್ತು. ಇನ್ನೊಂದು ಹೆಜ್ಜೆ ಮುಂದಿಡಲು ನೆಲದ ಮೇಲೆಲ್ಲಾ ನೀರು ಚೆಲ್ಲಿದ್ದು ಜಾರುವಂತಾಯಿತು. ನೆಲ ಒರೆಸಲು ಯಾರೂ ಕಾಣಿಸಲಿಲ್ಲ. ಎಲ್ಲೆಡೆ ಗಲೀಜು ಹರಡಿದ್ದು, ಕೆಲಸಗಾರರು ಯಾರೂ ಬಂದಂತೆ ಕಾಣಲಿಲ್ಲ. ಅದೂ ಅಲ್ಲದೇ ಎಲ್ಲಿಯೂ ದೀಪಗಳು ಕಾಣದೆ, ತಡಕಾಡಿಕೊಂಡು ಮುಂದೆ ಹೋದೆನು. ನಾನು ಕುಳಿತುಕೊಳ್ಳುವ ಸ್ಥಾನದಲ್ಲಿ ಬ್ಯಾಗನ್ನಿಟ್ಟು ಏನಾಗಿದೆ ಎಂದು ನೋಡಲು ಆಚೆಗೆ ಬಂದೆನು. ಅಷ್ಟು ಹೊತ್ತಿಗೆ, ಸೆಕ್ಯುರಿಟಿ ಮನುಷ್ಯ ಬಂದು, 'ಮೇಲೆ ಮೂರನೆಯ ಮಾಳಿಗೆಯಲ್ಲಿ (ನಾವಿರುವುದು ಎರಡನೆಯ ಮಾಳಿಗೆ) ರಾತ್ರಿ ಒಂದು ಘಂಟೆಗೆ ಬೆಂಕಿ ಹತ್ತಿಕೊಂಡು ಆಕಸ್ಮಿಕ ಸಂಭವಿಸಿದೆ. ಆದ್ದರಿಂದ ಎಂಟನೆಯ ಮಾಳಿಗೆಯವರೆವಿಗೆ ಎಲ್ಲ ಕಡೆ ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ. ಎರಡನೆಯ ಮಾಳಿಗೆಯಲ್ಲಿ ಹವಾನಿಯಂತ್ರಿತದ ಕಿಂಡಿಗಳಿಂದ, ವಿದ್ಯುತ್ ದೀಪಗಳಿರುವ ಬುರುಡೆಗಳಿಂದ ಮತ್ತು ಮೇಲೆ ಎಲ್ಲೆಲ್ಲಿ ಖಾಲಿ ಜಾಗವಿರುವುದೋ ಅಲ್ಲೆಲ್ಲಾ ಕಡೆಗಳಿಂದ ನೀರು ತೊಟ್ಟಿಕ್ಕುತ್ತಿತ್ತು. ಒಂದೆಡೆ ನೆಲವನ್ನು ಎಡಬಿಡದಂತೆ ಸಾರಿಸುತ್ತಿದ್ದರೆ ಇನ್ನೊಂದೆಡೆ ತೊಟ್ಟಿಕ್ಕುತ್ತಿರುವ ನೀರ ಹನಿಗಳನ್ನು ತುಂಬಿಡಲು ಕಸದ ಡಬ್ಬಗಳು, ಬಕೆಟ್ಗಳನ್ನು ಇಟ್ಟಿದ್ದರು. ಮೇಲಿನಿಂದ ನಿರಂತರವಾಗಿ ನೀರು ತೊಟ್ಟಿಕ್ಕುತ್ತಿತ್ತು. ಮುಂದೆ ಓದಿ »


RSS: